Homeಕರ್ನಾಟಕಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

- Advertisement -
- Advertisement -

ಬೆಂಗಳೂರಿನಾದ್ಯಂತ 1.8 ಲಕ್ಷಕ್ಕೂ ಹೆಚ್ಚು ಕಟ್ಟಡಗಳು ಅನಧೀಕೃತ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಿದೆ ಎಂದು ನ್ಯೂಸ್ ಮಿನಿಟ್‌ ಶನಿವಾರ ವರದಿ ಮಾಡಿದೆ. ನಗರದಲ್ಲಿನ ಅಕ್ರಮ ಮತ್ತು ಅನಧಿಕೃತ ಕಟ್ಟಡಗಳ ಕುರಿತು ಬಿಬಿಎಂಪಿ ಸಮೀಕ್ಷೆ ನಡೆಸುತ್ತಿದೆ.

‘‘ಬಿಬಿಎಂಪಿಯಿಂದ ಅನುಮತಿ ಪಡೆಯದೆ ಅಥವಾ ಬಿಬಿಎಂಪಿ ಅನುಮತಿ ನೀಡದೆ ಕಟ್ಟುವ ಕಟ್ಟಡಗಳು ಅನಧಿಕೃತವಾಗಿದ್ದು, ಇದನ್ನು ಬಿ-ಖಾತಾ ಆಸ್ತಿಗಳು ಎಂದು ಗುರುತಿಸಲಾಗುತ್ತದೆ” ಎಂದು ಬಿಬಿಎಂಪಿ ಯೋಜನೆಗಳ ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1.8 ಲಕ್ಷ ಅನಧಿಕೃತ ಕಟ್ಟಡಗಳು ಮಾತ್ರವಲ್ಲದೆ, ಮಂಜೂರಾದ ಯೋಜನೆಗಳನ್ನು ಬಿಟ್ಟು ಬೇರೆಯೆ ಯೋಜನೆ ರೂಪಿಸಿ ಕಟ್ಟಲಾಗಿರುವ ಸುಮಾರು 36,759 ಕಟ್ಟಡಗಳನ್ನು ಸಹ ಬಿಬಿಎಂಪಿ ಪತ್ತೆ ಮಾಡಿದೆ. ಯಾವುದೇ ಕಟ್ಟಡವನ್ನು ಕಟ್ಟುವಾಗ ಅದರ ಸುತ್ತ ಇರಬೇಕಾದ ಕನಿಷ್ಠ ಸ್ಥಳಾವಕಾಶ ನಿಯಮದ ಉಲ್ಲಂಘನೆ, ಹೆಚ್ಚುವರಿ ಮಹಡಿಗಳು ಹೊಂದಿರುವ ಕಟ್ಟಡಗಳು ಸೇರಿದಂತೆ ಹಲವು ನಿಯಮ ಪಾಲಿಸದೆ ಕಟ್ಟಿದ ಕಟ್ಟಡಗಳು ಅನಧೀಕೃತ ಕಟ್ಟಡಗಳಾಗಿವೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ಸಮೀಕ್ಷೆಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಬಿಬಿಎಂಪಿ ಹಲವು ಗಡುವುಗಳನ್ನು ಮೀರಿದೆ. ಆದರೂ ನಡೆಯುತ್ತಿರುವ ಸಮೀಕ್ಷೆ ಮುಗಿಯಲು ಕನಿಷ್ಠ ಎರಡು ತಿಂಗಳು ಬೇಕಾಗಬಹುದು ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

“ವಿಳಂಬಕ್ಕೆ ಮಳೆಗಾಲ ಸೇರಿದಂತೆ ಹಲವು ಕಾರಣಗಳಿವೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು ಬೇಕು. ನಮ್ಮ ಬಳಿ ಈಗ ಕೇವಲ ಒಂದು ಏಕೀಕೃತ ಅಂಕಿ ಅಂಶ ಇದೆ. ಆದ್ದರಿಂದ ಯಾವ ಪ್ರದೇಶಗಳಲ್ಲಿ ಅತಿ ಹೆಚ್ಚು ಅನಧೀಕೃತ ಕಟ್ಟಡಗಳಿವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದ್ದಾರೆ.

2022 ಮಾರ್ಚ್‌ ತಿಂಗಳಲ್ಲಿ ಅನಧಿಕೃತ ಆಸ್ತಿ ಮಾಲೀಕರಿಗೆ 10,000 ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಈ ನೋಟಿಸ್‌ಗೆ ಕಟ್ಟಡ ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ನಾವು ಹೊಸ ನೋಟಿಸ್ ಕಳುಹಿಸುತ್ತೇವೆ. ಮಂಜೂರಾದ ಯೋಜನೆಗೂ, ಕಟ್ಟಡಗಳಿಗೂ ಶೇಕಡಾವಾರು ವ್ಯತ್ಯಾಸಗಳಿರುವುದರಿಂದ ನೋಟೀಸ್‌ಗಳನ್ನು ನೀಡುವುದರ ಬಗ್ಗೆ ವಿವಿಧ ಹಂತಗಳಿವೆ. ಕೆಲವು ಕಟ್ಟಡಗಳು 10%, 12%, 15%, ಮತ್ತು ಕೆಲವು 25% ಅಸಂಗತತೆಯನ್ನು ಹೊಂದಿವೆ. ನೋಟಿಸ್ ಕಳುಹಿಸಲು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ” ಎಂದು ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಅಕ್ರಮ ಕಟ್ಟಡಗಳನ್ನು ಕೆಡವಲು ಮತ್ತು ಅನುಪಾಲನಾ ವರದಿಯನ್ನು ಸಲ್ಲಿಸಲು ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸರ್ವೆ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ನಂತರ ಏಕಕಾಲದಲ್ಲಿ ಕಟ್ಟಡ ಮಾಲೀಕರಿಗೆ ನೋಟಿಸ್ ಕಳುಹಿಸುತ್ತೇವೆ. ನಿರ್ದಿಷ್ಟ ಸಂದರ್ಭಗಳಲ್ಲಿ ನಾನು ಖಂಡಿತವಾಗಿಯೂ ಕೆಡವಲು ನಿರ್ದೇಶನಗಳನ್ನು ನೀಡುತ್ತೇನೆ. ನಾವು ಸಂಪೂರ್ಣ ಅನಧಿಕೃತ ಕಟ್ಟಡಗಳನ್ನು ಗುರುತಿಸಿದ್ದೇವೆ, ಅವುಗಳನ್ನು ಖಂಡಿತವಾಗಿಯೂ ಕೆಡವುತ್ತೇವೆ. ಇದನ್ನು ಸಂಬಂಧಪಟ್ಟ ಅಧಿಕಾರಿ ನಿರ್ಧರಿಸುತ್ತಾರೆ. ಅನುಸರಣೆ ವರದಿಯನ್ನು ನಾನು ಹೈಕೋರ್ಟ್‌ಗೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ತಪ್ಪು ಯೋಜನೆಗಳಿಗೆ ಮಂಜೂರಾತಿ ನೀಡುವುದಿಲ್ಲ. ಬಿಲ್ಡರ್‌ಗಳೇ ನಿಯಮಗಳನ್ನು ಉಲ್ಲಂಘಿಸುತ್ತಾರೆ ಎಂದು ಹೇಳಿದ ಅವರು, “ಯಾವ ಯೋಜನೆಗೆ ಅನುಮೋದನೆ ನೀಡಲಾಗುತ್ತದೆಯೋ ಅವುಗಳಷ್ಟೆ ಸರಿಯಾದದು ಮತ್ತು ಕಾನೂನುಬದ್ಧವಾಗಿರುತ್ತದೆ. ಕಟ್ಟಡ ನಿರ್ಮಾಣದಲ್ಲಿ ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಬಿಲ್ಡರ್ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ್ದಾರೆಯೇ ಎಂದು ಪರಿಶೀಲಿಸುವ ಜವಾಬ್ದಾರಿ ಆಸ್ತಿಯನ್ನು ಖರೀದಿಸುವವರ ಮೇಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...