Homeಚಳವಳಿಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ.

ಬಿಜೆಪಿ ಮುಖಂಡರು ಪ್ರವಾದಿ ನಿಂದನೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಜಾರ್ಖಂಡ್‌ನ ರಾಂಚಿ ಸೇರಿದಂತೆ ಕೆಲವಡೆ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಮತ್ತು ಮುನ್ಸಿಪಲ್ ಅಧಿಕಾರಿಗಳು ಬುಲ್ಡೋಜರ್‌ ನಿಂದ ಕೆಡವುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳನ್ನು ಸ್ವತಃ ಪೊಲಿಸರೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಭದ್ರತೆಯಲ್ಲಿ ಬುಲ್ಡೋಜರ್‌ಗಳೊಂದಿಗೆ, ಮುನ್ಸಿಪಲ್ ತಂಡಗಳೊಂದಿಗೆ ಬಂದು ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಬಂಧಿಸಲಾದ ಇಬ್ಬರು ಆರೋಪಿಗಳ ಮನೆಗಳ ಭಾಗಗಳನ್ನು ಕೆಡವಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿರುವ ದೃಶ್ಯಗಳಲ್ಲಿ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡಿವೆ. ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಪೊಲೀಸರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸಂಬಂಧಿಸಿರುವ ಆಸ್ತಿಯನ್ನು ಪೊಲೀಸರು ಇಂದು ನೆಲಸಮಗೊಳಿಸಿ, ಭೂ ಮಾಫಿಯಾಕ್ಕೆ ಸಂಬಧಿಸಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ಪ್ರಧಾನ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಅವರು ಶನಿವಾರ ಬೆಳಗ್ಗೆಯೇ ಎಚ್ಚರಿಕೆ ನೀಡಿ ತಮ್ಮ ಟ್ವಿಟರ್‌ನಲ್ಲಿ ಬುಲ್ಡೋಜರ್‌ನ ಫೋಟೋದೊಂದಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದಿದ್ದಾರೆ.

 

ಪ್ರಯಾಗ್‌ರಾಜ್, ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ರಾಂಪುರ ಮತ್ತು ಲಕ್ನೋದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 227 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಂಡಂ ದಶಗುಣಂ ಬುಲ್ಡೆಜರ್ ಕಾನೂನಿಗೆ ನಮ್ಮ ಬೆಂಬಲ ಇದೆ,ಸಾರ್ವಜನಿಕರ ಆಸ್ತಿ ನಷ್ಟ ಮಾಡೋ ಪ್ರತಿಯೊಬ್ಬರಿಗೂ ದೇಶದಲ್ಲಿ ಈ ಕಾನೂನನ್ನು ಜಾರಿಗೆ ತರಬೇಕು,ಸಾರ್ವಜನಿಕರ ಆಸ್ತಿ ನಷ್ಟ ವನ್ನು ಅವರಿಂದಲೇ ವಸೂಲಿ ಮಾಡಿಸಬೇಕು ಜೈ ಯೋಗಿ ಸರ್ಕಾರ್

  2. ತಪ್ಪು ಮಾಡಿರೋ ಪ್ರತಿಯೊಬ್ಬನ ಮನೆ ಮೇಲೂ ಬುಲ್ದೊಜರ ಹತ್ತಿಸಬೇಕು ತಾಕತ್ತಿದ್ರೆ,, ಮಸೀದಿಗಳ ಮೇಲೆ ಹಲ್ಲೆ ಮಾಡಿರೋರೆಲ್ಲ ದೇಶ ಪ್ರೇಮಿಗಳು ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ್ರೆ ದೇಶ ದ್ರೋಹಿಗಳ…? ಈ ದೇಶ ಯಾರಪ್ಪಂದು ಅಲ್ಲ ಇದು ಎಲ್ಲ ಭಾರತೀಯರಿಗೆ ಸೇರಿದ್ದು ಯಾವೋ 4 ಕೋಮು ಕ್ರಿಮಿಗಳಿಂದ ದೇಶ, ದೇಶದ ಮಾನ, ಹಾಳಾಗತಿದೆ. ಕೋಮುವಾದಿಗಳು ಎಂದೂ ದೇಶಪ್ರೇಮಿಗಳಾಗಲು ಸಧ್ಯವಿಲ್ಲ.. ಪುಟಗೋಸಿನು ಕದ್ದು ತೋಡೋ ಕೋಮುಕ್ರಿಮಿಗಳಿಗೇನು ಗೊತ್ತು ಸೌಹಾರ್ದತೆ, ಶಾಂತಿ, ಈ ದೇಶದ, ನೆಲ, ಜಲದ ಬೆಲೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...