Homeಚಳವಳಿಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ.

ಬಿಜೆಪಿ ಮುಖಂಡರು ಪ್ರವಾದಿ ನಿಂದನೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಜಾರ್ಖಂಡ್‌ನ ರಾಂಚಿ ಸೇರಿದಂತೆ ಕೆಲವಡೆ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಮತ್ತು ಮುನ್ಸಿಪಲ್ ಅಧಿಕಾರಿಗಳು ಬುಲ್ಡೋಜರ್‌ ನಿಂದ ಕೆಡವುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳನ್ನು ಸ್ವತಃ ಪೊಲಿಸರೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಭದ್ರತೆಯಲ್ಲಿ ಬುಲ್ಡೋಜರ್‌ಗಳೊಂದಿಗೆ, ಮುನ್ಸಿಪಲ್ ತಂಡಗಳೊಂದಿಗೆ ಬಂದು ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಬಂಧಿಸಲಾದ ಇಬ್ಬರು ಆರೋಪಿಗಳ ಮನೆಗಳ ಭಾಗಗಳನ್ನು ಕೆಡವಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿರುವ ದೃಶ್ಯಗಳಲ್ಲಿ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡಿವೆ. ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಪೊಲೀಸರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸಂಬಂಧಿಸಿರುವ ಆಸ್ತಿಯನ್ನು ಪೊಲೀಸರು ಇಂದು ನೆಲಸಮಗೊಳಿಸಿ, ಭೂ ಮಾಫಿಯಾಕ್ಕೆ ಸಂಬಧಿಸಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ಪ್ರಧಾನ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಅವರು ಶನಿವಾರ ಬೆಳಗ್ಗೆಯೇ ಎಚ್ಚರಿಕೆ ನೀಡಿ ತಮ್ಮ ಟ್ವಿಟರ್‌ನಲ್ಲಿ ಬುಲ್ಡೋಜರ್‌ನ ಫೋಟೋದೊಂದಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದಿದ್ದಾರೆ.

 

ಪ್ರಯಾಗ್‌ರಾಜ್, ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ರಾಂಪುರ ಮತ್ತು ಲಕ್ನೋದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 227 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಂಡಂ ದಶಗುಣಂ ಬುಲ್ಡೆಜರ್ ಕಾನೂನಿಗೆ ನಮ್ಮ ಬೆಂಬಲ ಇದೆ,ಸಾರ್ವಜನಿಕರ ಆಸ್ತಿ ನಷ್ಟ ಮಾಡೋ ಪ್ರತಿಯೊಬ್ಬರಿಗೂ ದೇಶದಲ್ಲಿ ಈ ಕಾನೂನನ್ನು ಜಾರಿಗೆ ತರಬೇಕು,ಸಾರ್ವಜನಿಕರ ಆಸ್ತಿ ನಷ್ಟ ವನ್ನು ಅವರಿಂದಲೇ ವಸೂಲಿ ಮಾಡಿಸಬೇಕು ಜೈ ಯೋಗಿ ಸರ್ಕಾರ್

  2. ತಪ್ಪು ಮಾಡಿರೋ ಪ್ರತಿಯೊಬ್ಬನ ಮನೆ ಮೇಲೂ ಬುಲ್ದೊಜರ ಹತ್ತಿಸಬೇಕು ತಾಕತ್ತಿದ್ರೆ,, ಮಸೀದಿಗಳ ಮೇಲೆ ಹಲ್ಲೆ ಮಾಡಿರೋರೆಲ್ಲ ದೇಶ ಪ್ರೇಮಿಗಳು ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ್ರೆ ದೇಶ ದ್ರೋಹಿಗಳ…? ಈ ದೇಶ ಯಾರಪ್ಪಂದು ಅಲ್ಲ ಇದು ಎಲ್ಲ ಭಾರತೀಯರಿಗೆ ಸೇರಿದ್ದು ಯಾವೋ 4 ಕೋಮು ಕ್ರಿಮಿಗಳಿಂದ ದೇಶ, ದೇಶದ ಮಾನ, ಹಾಳಾಗತಿದೆ. ಕೋಮುವಾದಿಗಳು ಎಂದೂ ದೇಶಪ್ರೇಮಿಗಳಾಗಲು ಸಧ್ಯವಿಲ್ಲ.. ಪುಟಗೋಸಿನು ಕದ್ದು ತೋಡೋ ಕೋಮುಕ್ರಿಮಿಗಳಿಗೇನು ಗೊತ್ತು ಸೌಹಾರ್ದತೆ, ಶಾಂತಿ, ಈ ದೇಶದ, ನೆಲ, ಜಲದ ಬೆಲೆ.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....