Homeರಾಷ್ಟ್ರೀಯನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಸಾಮ್ರಾಜ್ಯವನ್ನು ಸ್ಥಾಪಿಸಿದ್ದನು, ಆದರೆ ಈ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದು, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

‘‘ಮಹಾರಾಣಾ: ಸಹಸ್ತ್ರ ವರ್ಷ ಕಾ ಧರ್ಮ ಯುದ್ಧ” ಎಂಬ ಪುಸ್ತಕವನ್ನು ಬಿಡುಗಡೆ ಮಾಡುತ್ತಾ ಮಾತನಾಡಿದ ಅಮಿತ್‌ ಶಾ, ಗತಕಾಲದ ವೈಭವವನ್ನು ವರ್ತಮಾನಕ್ಕೆ ಪುನರುಜ್ಜೀವನಗೊಳಿಸುವಂತೆ ಇತಿಹಾಸಕಾರರನ್ನು ಕೋರಿದ್ದಾರೆ. “ಇತಿಹಾಸವನ್ನು ಸರ್ಕಾರಗಳು ಮತ್ತು ಇತರ ಪುಸ್ತಕಗಳ ಆಜ್ಞೆಯ ಮೇರೆಗೆ ಬರೆಯುವುದಲ್ಲ, ವಾಸ್ತವಿಕ ಘಟನೆಗಳ ಆಧಾರದ ಮೇಲೆ ಬರೆಯಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅನೇಕ ಭಾರತೀಯ ರಾಜರು ಆಕ್ರಮಣಕಾರರ ವಿರುದ್ಧ ಹೋರಾಡಿದ್ದು, ಅವರನ್ನು ಧೈರ್ಯದಿಂದ ಸೋಲಿಸುವ ಮೂಲಕ ತಮ್ಮ ಪ್ರದೇಶಗಳನ್ನು ರಕ್ಷಿಸಿದ್ದಾರೆ. ಆದರೆ ದುರದೃಷ್ಟವಶಾತ್ ಇದುವರೆಗಿನ ಇತಿಹಾಸದಲ್ಲಿ ಈ ಬಗ್ಗೆ ಹೆಚ್ಚಿನ ವಿವರಗಳು ಸ್ಥಾನ ಪಡೆದಿಲ್ಲ” ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

“1,000 ವರ್ಷಗಳಿಂದ ಸಂಸ್ಕೃತಿ, ಭಾಷೆ ಮತ್ತು ಧರ್ಮದ ರಕ್ಷಣೆಗಾಗಿ ನಡೆಸಿದ ಹೋರಾಟವು ವ್ಯರ್ಥವಾಗಲಿಲ್ಲ. ಭಾರತವು ಈಗ ಪ್ರಪಂಚದ ಮುಂದೆ ಮತ್ತೆ ಗೌರವದಿಂದ ನಿಂತಿದೆ. ದೇಶದ ಕೀರ್ತಿಯನ್ನು ಗುರುತಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ” ಎಂದು ಅಮಿತ್‌ ಶಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕಾಲ್ಪನಿಕ ಕಥೆಗಳ ಹರಿಕಾರರು… ಬೊಡ ಬರ್ಕೊ ಆದ್ರೆ ಮಕ್ಕಳಿಗೆ ಓಡಿಸೋಕೆ ಶಾಲೆಗಳ ಮೇಲೆ ಬಲವಂತವಾಗಿ ಹೇರಬೇಡ…. ಇಲ್ಲ ಅಂದ್ರೆ ಚರಂಡಿಗೆ ಪೈಪ್ ಹಾಕಿ ಗ್ಯಾಸ್ ಮಾಡಿ ಸ್ಟೋವ್ ಊರಿಸಬಹುದು ಅಂತ ಬುರುಡೆ ಬಿಡ್ತಾರೆ… ಹುಷಾರ್…..

  2. ನೀನಾಗಲಿ ನಿನ್ನ ಪಕ್ಷ, ಪಕ್ಷದಲ್ಲಿರೋ ಡೋಂಗಿಗಳೇ ಒಂದು ಇತಿಹಾಸ ಆಗತೀರ ಹೊರತು ನಿಮ್ಮಿಂದ ಯಾವ ಇತಿಹಾಸ ಬರೆಯೋಕು ಆಗಲ್ಲ,, ದೇಶದ ಮಾನ ಮರ್ಯಾದೆ ತೆಗದಿದ್ದು ಸಾಕು ಎಲ್ಲ ರಾಜೀನಾಮೆ ಕೊಟ್ಟು ತೊಲಗಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...