Homeಮುಖಪುಟನಾಳೆ ಇ.ಡಿ. ಎದುರು ರಾಹುಲ್‌ ಹಾಜರಿ: ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ನಾಳೆ ಇ.ಡಿ. ಎದುರು ರಾಹುಲ್‌ ಹಾಜರಿ: ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಲಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದೆ.

“ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ದೇಶಾದ್ಯಂತ ತನಿಖಾ ಸಂಸ್ಥೆಯ ಸುಮಾರು 25 ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಳೆ ರಾಷ್ಟ್ರ ರಾಜಧಾನಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ರಾಹುಲ್‌ ಗಾಂಧಿ ಬರಲಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕರು ಮೆರವಣಿಗೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ‘ನಕಲಿ’ ಪ್ರಕರಣದಲ್ಲಿ ಸಿಲುಕಿಸಲು ಸರ್ಕಾರವು ಸಂಚು ರೂಪಿಸುತ್ತಿದೆ ಎಂದು ಟ್ಯಾಗೋರ್ ಆರೋಪಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ರಾಜಕೀಯ ವಿರೋಧಿಗಳನ್ನು ದುರ್ಬಲಗೊಳಿಸಲು ಜಾರಿ ಇ.ಡಿ. ಮತ್ತು ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಅವರು ದೂರಿದ್ದಾರೆ.

ತನ್ನ ನಾಯಕರ ಮೇಲಿನ ಆರೋಪಗಳು “ನಕಲಿ ಮತ್ತು ಆಧಾರ ರಹಿತ” ಎಂದು ಕಾಂಗ್ರೆಸ್‌ ಸಮರ್ಥಿಸಿಕೊಂಡಿದೆ. ಸಮನ್ಸ್‌ಗಳು ಬಿಜೆಪಿಯ “ಸೇಡಿನ ರಾಜಕೀಯ”ದ ಭಾಗವಾಗಿವೆ ಎಂದು ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿರಿ: ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ದೇಶಾದ್ಯಂತ ವಿರೋಧ ಪಕ್ಷಗಳ ನಾಯಕರ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಜೆಪಿಯ ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಲಿದೆ ಎಂದು ಪಕ್ಷದ ನಾಯಕರು ಹೇಳಿಕೆ ನೀಡಿದ್ದಾರೆ.

ವಿಚಾರಣೆಗೆ ಸಮನ್ಸ್ ಪಡೆದಿರುವ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ.

ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ತನಿಖೆ ನಡೆಸಲಾಗುತ್ತಿದೆ. 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಪರಿಗಣಿಸಿದ ನಂತರ ಇ.ಡಿ.ಯು ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...