Homeಮುಖಪುಟಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

- Advertisement -
- Advertisement -

ವಾಮಾಚಾರ ಮಾಡುತ್ತಿದ್ದ ಆರೋಪದಲ್ಲಿ 55 ವರ್ಷದ ಮಹಿಳೆಯೊಬ್ಬರಿಗೆ ಬಿದಿರಿನ ಕೋಲುಗಳಿಂದ ಮನಬಂದಂತೆ ಥಳಿಸಿ, ಚಿತ್ರಹಿಂಸೆ ಕೊಟ್ಟು ವಿಷ ಕುಡಿಸಿ ಹತ್ಯೆಗೈದ ಹೃದಯ ವಿದ್ರಾವಕ ಘಟನೆ ಜಾರ್ಖಂಡ್‌ನಲ್ಲಿ ಗುರುವಾರ (ಜೂ.9) ಸಂಜೆ ನಡೆದಿದ್ದು, ಪ್ರಕರಣದಲ್ಲಿ 24 ಜನರನ್ನು ಬಂಧಿಸಲಾಗಿದೆ.

ಜಾರ್ಖಂಡ್‌ನ ಲೋಹರ್ದಗಾದ ಗಣೇಶಪುರ ಗ್ರಾಮದಲ್ಲಿ ಹೊಲೊ ದೇವಿ ಎಂದು ಗುರುತಿಸಲಾದ ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು ಆಕೆಯ ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿ ಗ್ರಾಮದ ಸಮೀಪವಿರುವ ಧಾರ್ಧರಿಯಾ ಜಲಪಾತಕ್ಕೆ ಎಸೆದು, ವಿಕೃತಿ ಮೆರೆದಿದ್ದರು.

ಮಹಿಳೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಪೊಲೀಸರು ಗ್ರಾಮಕ್ಕೆ ಆಗಮಿಸಿ ಜಲಪಾತದ ತಳದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ತಕ್ಷಣ ಕಾರ್ಯರೂಪಕ್ಕೆ ಬಂದ ಪೊಲೀಸರು ಸೆರೆಂಗ್‌ಡಾಗ್ ಪೊಲೀಸ್ ಠಾಣೆಯಲ್ಲಿ ಹೆಸರಿಸಲಾದ 27 ಮಂದಿ ಮತ್ತು 20 ಕ್ಕೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ಇದುವರೆಗೆ ಪ್ರಕರಣದಲ್ಲಿ ನಾವು 24 ಆರೋಪಿಗಳನ್ನು ಬಂಧಿಸಿದ್ದೇವೆ, ಇತರರ ಹುಡುಕಾಟ ಇನ್ನೂ ಮುಂದುವರೆದಿದೆ” ಎಂದು ಲೋಹರ್ಡಗಾ ಎಸ್‌ಪಿ ಆರ್.ರಾಮ್‌ಕುಮಾರ್ ಹೇಳಿದ್ದಾರೆ.

ಈ ವರ್ಷದ ಜನವರಿಯಿಂದ ಗ್ರಾಮದಲ್ಲಿ ಐವರು ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಇದಕ್ಕೆ ಮಹಿಳೆ ವಾಮಾಚಾರ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಆದರೆ, ಇದು ಮೂಢನಂಬಿಕೆಗೆ ಸಂಬಂಧಿಸಿದೆ ಎಂದು ಮೃತ ಮಹಿಳೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಮೃತ ಮಹಿಳೆಯ ಕುಟುಂಬದ ಸದಸ್ಯೆ ಚಂದ್ರಮಣಿ ದೇವಿ ಹೇಳುವಂತೆ, “ಗ್ರಾಮಸ್ಥರು ಬೆಳಿಗ್ಗೆ 6 ಗಂಟೆಗೆ ಕರೆದ ಪಂಚಾಯತಿ  ಕರೆದರು,  ಸಂಜೆಯವರೆಗೂ ನಡೆಯಿತು. ಬಳಿಕ ಗ್ರಾಮಸ್ಥರು ಮಹಿಳೆಗೆ ಮರಣದಂಡನೆ ವಿಧಿಸಿದರು. ಆಕೆಗೆ ಮೊದಲು ಎಲ್ಲರು ಹೊಡೆದರು. ಬಳಿಕ  ಬಿದಿರಿನ ಕೋಲುಗಳಿಂದ ಅರ್ಧ ಸಾಯುವಂತೆ ಮಾಡಿ, ನಂತರ ವಿಷ ಕುಡಿಸಿ ಆಕೆಯನ್ನು ಹೊಡೆದು ಕೊಂದರು. ನೀರಿಗಾಗಿ ಕೂಗಾಡುತ್ತಿದ್ದರೂ ಗ್ರಾಮಸ್ಥರು ನೀರು ಕೊಡಲು ಬಿಡಲಿಲ್ಲ’ ಎಂದು ನೋವು ತೋಡಿಕೊಂಡಿದ್ದಾರೆ. ಅವರು ಸತ್ತಿದ್ದಾರೆ ಎಂದು ಗ್ರಾಮಸ್ಥರಿಗೆ ಖಾತ್ರಿಯಾದ ನಂತರ, ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿ ಗ್ರಾಮದ ಸಮೀಪವಿರುವ ಧಾರ್ಧರಿಯಾ ಜಲಪಾತದ ಮೇಲಿನಿಂದ ಆಕೆಯನ್ನು ಎಸೆದರು ಎಂದು ಘಟನೆಯನ್ನು ವಿವರಿಸಿದ್ದಾರೆ.

ಬುಧವಾರ ನಡೆದ ಮತ್ತೊಂದು ಘಟನೆಯಲ್ಲಿ, ಜಾರ್ಖಂಡ್‌ನ ಗುಮ್ಲಾದಲ್ಲಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಇಬ್ಬರು ಬುಡಕಟ್ಟು ಯುವಕರಿಗೆ ಗ್ರಾಮಸ್ಥರುನ ಬೆಂಕಿ ಹಚ್ಚಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಯಿತಾದರೂ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...