Homeಮುಖಪುಟಯುಪಿ: 9 ಜನರ ಮೇಲೆ ಪೊಲೀಸರ ಅಮಾನವೀಯ ಹಲ್ಲೆ, ರಿಟರ್ನ್ ಗಿಫ್ಟ್ ಎಂದ ಬಿಜೆಪಿ ಶಾಸಕ

ಯುಪಿ: 9 ಜನರ ಮೇಲೆ ಪೊಲೀಸರ ಅಮಾನವೀಯ ಹಲ್ಲೆ, ರಿಟರ್ನ್ ಗಿಫ್ಟ್ ಎಂದ ಬಿಜೆಪಿ ಶಾಸಕ

- Advertisement -
- Advertisement -

ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ವರ್ತನೆಗೆ ಜನರು ಆಕ್ರೋಶ ಹಾಕಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂಬ ಶೀರ್ಷಿಕೆಯೊಂದಿಗೆ ತಮ್ಮ ಟ್ವಿಟ್ಟರ್‌ನಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ತ್ರಿಪಾಠಿ ಈ ಘಟನೆ ಎಲ್ಲಿ ಮತ್ತು ಯಾವಾಗ ನಡೆಯಿತು ಎಂಬುದರ ಕುರಿತು ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ.

ಶಾಸಕ ಶಲಭ್ ಮಣಿ ತ್ರಿಪಾಠಿ ಮಾಜಿ ಪತ್ರಕರ್ತರಾಗಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರರಾಗಿದ್ದರು. ಈ ಘಟನೆಯ ವೀಡಿಯೊವು ಪೊಲೀಸರ ವಿರುದ್ಧ ಆಕ್ರೋಶವನ್ನು ಹುಟ್ಟುಹಾಕಿದ್ದು, ಪ್ರತಿಪಕ್ಷಗಳು ಪೊಲೀಸ್ ದೌರ್ಜನ್ಯದ ಆರೋಪಗಳನ್ನು ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ವರದಿಗಳ ಪ್ರಕಾರ, ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಇಬ್ಬರು ಮಾಜಿ ಬಿಜೆಪಿ ವಕ್ತಾರರ ವಿರುದ್ಧ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗಳು ಮತ್ತು ಘರ್ಷಣೆಗಳು ಭುಗಿಲೆದ್ದಿರುವ ಯುಪಿಯ ಸಹರಾನ್‌ಪುರದ ಪೊಲೀಸ್ ಠಾಣೆಯಲ್ಲಿ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಇಂತಹ ಘಟನೆಗಳು ನ್ಯಾಯ ವ್ಯವಸ್ಥೆಯ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ. ಇಂತಹ ಪೊಲೀಸ್ ಠಾಣೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಬೇಕು. ಲಾಕಪ್‌ ಡೇತ್‌ಗಳಲ್ಲಿ ಯುಪಿ ನಂ. 1 ಆಗಿದೆ, ಇದು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಲಿತರ ಮೇಲಿನ ದೌರ್ಜನ್ಯದಲ್ಲಿ ಅಗ್ರಸ್ಥಾನದಲ್ಲಿದೆ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.

ಶುಕ್ರವಾರದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಿಂದ 300 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುವವರ ವಿರುದ್ಧ “ಕಠಿಣ” ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಸಹರಾನ್‌ಪುರ ಮತ್ತು ಪ್ರಯಾಗ್‌ರಾಜ್‌ನಲ್ಲಿ, ಕಟ್ಟುನಿಟ್ಟಾದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲ್ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನರ ಕಟ್ ಮಾಡಬೇಕಿತ್ತು .ಈ ದಂಗೆ ಕೋರ ಭಶೀರರಿಗೆ ,ಈ ಶಿಕ್ಷೆ ಅವರಿಗೆ ಏನೇನೂ ಸಾಲದು ,ಸಾರ್ವಜನಿಕರ ಆಸ್ತಿ ಅಂದರೆ ಇನ್ನೊಮ್ಮೆ ಮುಟ್ಟಕ್ಕೂ ಎದರಬೇಕು ಕನಸ್ಸು ಮನಸ್ಸಲ್ಲಿ ಸಹ

  2. ಕೋಮುವಾದಿ ಹಲ್ಕಟ್ ಬಡ್ಡಿ ಮಕ್ಕಳು ತುಂಬಾ ಇದಾರೆ ಎಲ್ಲರಿಗೂ ಗಲ್ಲಿಗೆ ಎರಸಬೇಕು ಬೇವರ್ಸಿಗಳಿಗೆ 😡😡😡ಪ್ರತಿಭಟನೆ ಪ್ರತಿಯೊಬ್ಬ ಪ್ರಜೆಯ ಹಕ್ಕು ಅದನ್ನ ಹತ್ತಿಕ್ಕಲು ಇವರು ಯಾರು ಡೋಂಗಿಗಳು,, ಇಂತವರಿಗೆ ಪಾಠ ಕಲಿಸೋ ದಿನ ದೂರ ಇಲ್ಲ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...