Homeಕರ್ನಾಟಕ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

- Advertisement -
- Advertisement -

ಕನ್ನಡ ನೆಲದಲ್ಲಿ ನಡೆದ ಭಕ್ತಿ ಪಂಥ ಚಳವಳಿಯಲ್ಲಿ ದಾಸವರೇಣ್ಯರ ಕೊಡುಗೆಯನ್ನೂ ಯಾರೂ ಅಲ್ಲಗಳೆಯಲಾರರು. ಆದರೆ ಚಕ್ರತೀರ್ಥ ಪುಸ್ತಕ ಪರಿಶೀಲನಾ ಸಮಿತಿಯು 9ನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ನೀಡಿರುವ ‘ಭಕ್ತಪಂಥ’ ಪಾಠದಲ್ಲಿ ದಾಸವರೇಣ್ಯರ ವ್ಯಕ್ತಿಚಿತ್ರಣವನ್ನು ಕಿತ್ತು ಬಿಸಾಡಿದೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠದಲ್ಲಿ ಆರಂಭದಲ್ಲಿ- ‘ಈ ಅಧ್ಯಾಯದಲ್ಲಿ ಕೆಳಗಿನ ಅಂಶಗಳನ್ನು ತಿಳಿಯುತ್ತೇವೆ’ ಎಂದು ಪ್ರಸ್ತಾಪಿಸುತ್ತಾ “ರಮಾನಂದ, ಚೈತನ್ಯ, ಗುರುನಾನಕ್‌ರ ಬಗ್ಗೆ, ಕರ್ನಾಟಕದಲ್ಲಿ ಭಕ್ತಿ ಪಂಥ, ಭಕ್ತಿ ಪಂಥದ ಪರಿಣಾಮಗಳು, ಭಕ್ತಿಪಂಥದ ಪ್ರಮುಖ ಅಂಶಗಳು” ಈ ವಿಚಾರಗಳನ್ನು ತಿಳಿಯುತ್ತೇವೆ ಎಂದು ಸೂಚಿಸಲಾಗಿದೆ. ಆದರೆ ಬರಗೂರರ ಸಮಿತಿ ರೂಪಿಸದ ಪಠ್ಯದಲ್ಲಿಯೇ ಈ ಅಂಶಗಳನ್ನು ನಮೂದಿಸಲಾಗಿತ್ತು. ಅವುಗಳನ್ನು ಯಥಾವತ್ತು ಉಳಿಸಿಕೊಂಡಿರುವ ಚಕ್ರತೀರ್ಥ ಸಮಿತಿ, ಕರ್ನಾಟಕದ ಭಕ್ತಿಪಂಥ ಚಳವಳಿಯ ಬಗ್ಗೆ ವಿವರಣೆಯನ್ನೇ ನೀಡಿಲ್ಲ! ‘ಸೂಫಿಸಂ’ ಬಗ್ಗೆ ಒಂದು ಪ್ಯಾರಾ ಪಾಠವಿದ್ದರೂ ಅದು ಕರ್ನಾಟಕ್ಕಷ್ಟೇ ಸೀಮಿತವಾಗಿ ನಿಲ್ಲುವುದಿಲ್ಲ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ರೋಹಿತ್ ಚಕ್ರತೀರ್ಥ ಸಮಿತಿ ಹೊಸದಾಗಿ ಸೇರಿಸಿದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿಯ ಅಧ್ವಾನಗಳು: ಅಕ್ಷರದವ್ವನಿಗೆ ‘ಅವಳು’, ‘ಇವಳು’ ಪದಬಳಕೆ

ಮೀರಾಬಾಯಿಯವರ ಕುರಿತು ಇರುವ ಭಾಗದಲ್ಲಿಯೇ ಕರ್ನಾಟಕದಲ್ಲಿ ಭಕ್ತಿಪಂಥ ಚಳವಳಿ ಬೀರಿದ ಪ್ರಭಾವದ ಕುರಿತು ಎರಡು ವಾಕ್ಯಗಳನ್ನು ತುರುಕಲಾಗಿದೆ. “ಪುರಂದರದಾಸರು ಮತ್ತು ಕನಕದಾಸರು ಕರ್ನಾಟಕದ ಭಕ್ತಿ ಚಳವಳಿಯ ಪ್ರಮುಖರಾಗಿದ್ದರು. ಪುರಂದರದಾಸರು ‘ಕೀರ್ತನೆ’ಗಳನ್ನು ರಚಿಸಿದರೆ, ಕನಕದಾಸರು, ‘ಮೋಹನ ತರಂಗಿಣಿ’ ಎಂಬ ಕಾವ್ಯವನ್ನು ಮತ್ತು ಕೀರ್ತನೆಗಳನ್ನು ಕನ್ನಡದಲ್ಲಿ ರಚನೆ ಮಾಡಿದರು”- ಇದಿಷ್ಟೇ ಮಾಹಿತಿ!

ಶಿಶುನಾಳ ಶರೀಫರು, ಕನಕ ಹಾಗೂ ಪುರಂದರದಾಸರ ವ್ಯಕ್ತಿ ಚಿತ್ರಣವನ್ನು ಬರಗೂರು ನೇತೃತ್ವದ ಸಮಿತಿ ನೀಡಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಕ್ರತೀರ್ತನ ಗ್ಯಾಂಗು ಮಾಡಿರುವ ಪರಿಷ್ಕರಣೆಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...