Homeಕರ್ನಾಟಕಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

“ತಾಯಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್‌ ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ನೀವು ನನ್ನನ್ನು ದುಃಖಕ್ಕೆ ತಳ್ಳಿದಿರಿ. ಯಾರೂ ಅಳಬೇಡಿ.”

-ಹೀಗೆ ಇಂಗ್ಲಿಷ್‌ನಲ್ಲಿ ಡೆತ್‌ ನೋಟ್ ಬರೆದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್‌- ಮಂಜುಳಾ ದಂಪತಿಯ ಪುತ್ರ ಪೂರ್ವಜ್‌ (14) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಶನಿವಾರ ಪೂರ್ವಜ್ ತಾಯಿಯ ಜನ್ಮದಿನವಿತ್ತು. ಅಮ್ಮನಿಗೆ ಶುಭಕೋರಲು ಬಯಸಿದ್ದ ಪೂರ್ವಜ್‌ಗೆ ಹಾಸ್ಟೆಲ್‌ ವಾರ್ಡನ್ ಅವಕಾಶ ನೀಡಲಿಲ್ಲ. ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್‌ ನೀಡಲು ನಿರಾಕರಿಸಿದ್ದರು ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ  ಪೂರ್ವಜ್‌ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್‌ ಶವ ನೋಡಿ, ವಾರ್ಡನ್‌ ಗಮನಕ್ಕೆ ತಂದಿದ್ದಾನೆ.

ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ (ಸಾವಿಗೀಡಾದ ವಿದ್ಯಾರ್ಥಿಯ ತಾಯಿ) ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಶಾಲಾ ಆಡಳಿತ ಮಂಡಳಿಯ ಕಿರುಕುಳದಿಂದ ಪೂರ್ವಜ್‌ ಆತ್ಮಹತ್ಯೆ ಮಾಡಿದ್ದು, ಶಾಲಾ ಸೇರ್ಪಡೆ ವೇಳೆ ವಿದ್ಯಾರ್ಥಿಯ ಚಲನವಲನವನ್ನು ಪೋಷಕರಿಗೆ ತಿಳಿಸುತ್ತೇನೆ ಅಂದಿದ್ದರೂ ಈವರೆಗೆ ಪೂರ್ವಜ್‌ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ ಪೋಸ್ಟ್‌ ಮಾಡಿದ್ದು, “ಕರ್ನಾಟಕ ರಾಜ್ಯದಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ 826 ವಸತಿ ಶಾಲೆಗಳಿವೆ. ಬಡ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಸರಕಾರ ಸ್ಥಾಪಿಸಿರುವ ಈ ವಸತಿ ಶಾಲೆಗಳು ಇಡಿದೇಶಕ್ಕೆ ಮಾದರಿಯಾಗಿವೆ. ಆದರೆ ಕೇವಲ ಹಣ ಮಾಡುವ ಉದ್ದೇಶಕ್ಕೋಸ್ಕರ ಹುಟ್ಟಿಕೊಂಡಿರುವ ಇಂತಹ ಖಾಸಗಿ ವಸತಿ ಶಾಲೆಗಳು ತಮ್ಮ ಅತಿಯಾದ ನೀತಿ ನಿಯಮಗಳಿಂದಾಗಿ ಇಂತಹ ಶೋಚನೀಯ ಘಟನೆಗಳು ನಡೆಯಲು ಕಾರಣವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಬಂಧಗಳ ಬೆಲೆ ಅರಿಯದೇ ಮಾನವೀಯತೆ ಮರೆತು ವರ್ತಿಸುವ ಇಂತಹ ಧನದಾಹಿ ರಕ್ಕಸ ವಸತಿ ಶಾಲೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಪ್ರತಿಷ್ಟೆಗೆಂದು, ಹಣವಿದೆಯೆಂದು ಇಂತಹ ಶಾಲೆಗಳ ಆಡಳಿತ ಮಂಡಳಿಗೆ ಬೆನ್ನು ಬಗ್ಗಿಸುವ ಪೋಷಕರು ತಮ್ಮ ಮಕ್ಕಳ ಜೀವದ ಬಗ್ಗೆ ಯೋಚಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಣ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರಿಸುವ ಹೆತ್ತವರು ಇನ್ನು ಮುಂದೆಯಾದರೂ ಯೋಚನೆ ಮಾಡಿ… ಇದರ ಒಳ ಮರ್ಮವನ್ನು ದೇವರೇ ಬಲ್ಲ…

  2. ಇತ ಬರೆದಿದ್ದು ಎಲ್ಲಾ ಸುಳ್ಳು ಕಟ್ಟುಕಥೆ, ಪೀರ್ ಪಾಷಾ ಬಂಗ್ಲಾ ಚಾಲುಕ್ಯ ಶೈಲಿಯಲ್ಲಿ 12ನೇ ಶತಮಾನದಲ್ಲಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...