Homeಕರ್ನಾಟಕಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

“ತಾಯಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್‌ ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ನೀವು ನನ್ನನ್ನು ದುಃಖಕ್ಕೆ ತಳ್ಳಿದಿರಿ. ಯಾರೂ ಅಳಬೇಡಿ.”

-ಹೀಗೆ ಇಂಗ್ಲಿಷ್‌ನಲ್ಲಿ ಡೆತ್‌ ನೋಟ್ ಬರೆದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್‌- ಮಂಜುಳಾ ದಂಪತಿಯ ಪುತ್ರ ಪೂರ್ವಜ್‌ (14) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಶನಿವಾರ ಪೂರ್ವಜ್ ತಾಯಿಯ ಜನ್ಮದಿನವಿತ್ತು. ಅಮ್ಮನಿಗೆ ಶುಭಕೋರಲು ಬಯಸಿದ್ದ ಪೂರ್ವಜ್‌ಗೆ ಹಾಸ್ಟೆಲ್‌ ವಾರ್ಡನ್ ಅವಕಾಶ ನೀಡಲಿಲ್ಲ. ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್‌ ನೀಡಲು ನಿರಾಕರಿಸಿದ್ದರು ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ  ಪೂರ್ವಜ್‌ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್‌ ಶವ ನೋಡಿ, ವಾರ್ಡನ್‌ ಗಮನಕ್ಕೆ ತಂದಿದ್ದಾನೆ.

ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ (ಸಾವಿಗೀಡಾದ ವಿದ್ಯಾರ್ಥಿಯ ತಾಯಿ) ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಶಾಲಾ ಆಡಳಿತ ಮಂಡಳಿಯ ಕಿರುಕುಳದಿಂದ ಪೂರ್ವಜ್‌ ಆತ್ಮಹತ್ಯೆ ಮಾಡಿದ್ದು, ಶಾಲಾ ಸೇರ್ಪಡೆ ವೇಳೆ ವಿದ್ಯಾರ್ಥಿಯ ಚಲನವಲನವನ್ನು ಪೋಷಕರಿಗೆ ತಿಳಿಸುತ್ತೇನೆ ಅಂದಿದ್ದರೂ ಈವರೆಗೆ ಪೂರ್ವಜ್‌ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ ಪೋಸ್ಟ್‌ ಮಾಡಿದ್ದು, “ಕರ್ನಾಟಕ ರಾಜ್ಯದಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ 826 ವಸತಿ ಶಾಲೆಗಳಿವೆ. ಬಡ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಸರಕಾರ ಸ್ಥಾಪಿಸಿರುವ ಈ ವಸತಿ ಶಾಲೆಗಳು ಇಡಿದೇಶಕ್ಕೆ ಮಾದರಿಯಾಗಿವೆ. ಆದರೆ ಕೇವಲ ಹಣ ಮಾಡುವ ಉದ್ದೇಶಕ್ಕೋಸ್ಕರ ಹುಟ್ಟಿಕೊಂಡಿರುವ ಇಂತಹ ಖಾಸಗಿ ವಸತಿ ಶಾಲೆಗಳು ತಮ್ಮ ಅತಿಯಾದ ನೀತಿ ನಿಯಮಗಳಿಂದಾಗಿ ಇಂತಹ ಶೋಚನೀಯ ಘಟನೆಗಳು ನಡೆಯಲು ಕಾರಣವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಬಂಧಗಳ ಬೆಲೆ ಅರಿಯದೇ ಮಾನವೀಯತೆ ಮರೆತು ವರ್ತಿಸುವ ಇಂತಹ ಧನದಾಹಿ ರಕ್ಕಸ ವಸತಿ ಶಾಲೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಪ್ರತಿಷ್ಟೆಗೆಂದು, ಹಣವಿದೆಯೆಂದು ಇಂತಹ ಶಾಲೆಗಳ ಆಡಳಿತ ಮಂಡಳಿಗೆ ಬೆನ್ನು ಬಗ್ಗಿಸುವ ಪೋಷಕರು ತಮ್ಮ ಮಕ್ಕಳ ಜೀವದ ಬಗ್ಗೆ ಯೋಚಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಣ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರಿಸುವ ಹೆತ್ತವರು ಇನ್ನು ಮುಂದೆಯಾದರೂ ಯೋಚನೆ ಮಾಡಿ… ಇದರ ಒಳ ಮರ್ಮವನ್ನು ದೇವರೇ ಬಲ್ಲ…

  2. ಇತ ಬರೆದಿದ್ದು ಎಲ್ಲಾ ಸುಳ್ಳು ಕಟ್ಟುಕಥೆ, ಪೀರ್ ಪಾಷಾ ಬಂಗ್ಲಾ ಚಾಲುಕ್ಯ ಶೈಲಿಯಲ್ಲಿ 12ನೇ ಶತಮಾನದಲ್ಲಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...