Homeಮುಖಪುಟಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್ ಸಿಜೆ ರೀತಿ ವರ್ತಿಸುತ್ತಿದ್ದಾರೆ: ಓವೈಸಿ

ಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್ ಸಿಜೆ ರೀತಿ ವರ್ತಿಸುತ್ತಿದ್ದಾರೆ: ಓವೈಸಿ

- Advertisement -
- Advertisement -

ಪ್ರಯಾಗ್‌ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಯೋಗಿ ಆದಿತ್ಯನಾಥ್‌ ಅವರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆ) ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಯುಪಿ ಮುಖ್ಯಮಂತ್ರಿ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗುತ್ತಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸಿ, ಅವರ ಮನೆಗಳನ್ನು ಕೆಡವುತ್ತಾರೆಯೇ?” ಎಂದು ಗುಜರಾತ್‌ನ ಕಚ್‌ನಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಓವೈಸಿ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಯಾಗ್‌ರಾಜ್‌ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಆರೋಪಿ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ಅವರ ಮನೆಯನ್ನು ಭಾರೀ ಪೊಲೀಸ್ ನಿಯೋಜನೆಯ ನಡುವೆ ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ಭಾನುವಾರ ನೆಲಸಮಗೊಳಿಸಿದೆ.

ಆರೋಪಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಮತ್ತು ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರ ತಂದೆಯೂ ಹೌದು. ಕಳೆದ ವರ್ಷ ಸಿಎಎ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದವರು ಫಾತಿಮಾ. ಇತ್ತೀಚಿನ ಹಿಂಸಾಚಾರದಲ್ಲಿ ಅಫ್ರಿನ್‌ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಆಕ್ಷೇಪಾರ್ಹ ಪೋಸ್ಟರ್‌ಗಳಿವೆ. ಧ್ವಂಸಕ್ಕೂ ಮುನ್ನ ಭಾನುವಾರ ಬೆಳಗ್ಗೆ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘12 ಬೋರ್’ ಅಕ್ರಮ ಪಿಸ್ತೂಲ್, ‘315 ಬೋರ್’ ಪಿಸ್ತೂಲ್ ಹಾಗೂ ಗೌರವಾನ್ವಿತ ನ್ಯಾಯಾಲಯದ ವಿರುದ್ಧ ಆಕ್ಷೇಪಾರ್ಹ ಅಭಿಪ್ರಾಯಗಳನ್ನು ತೋರಿಸುವ ಕೆಲವು ದಾಖಲೆಗಳನ್ನು ಪತ್ತೆಹಚ್ಚಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್‌ ಕುಮಾರ್ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ ಎಂದು ಆರೋಪಿಸಿ ಅವರ ಮನೆಯ ಹೊರಗೆ ನೋಟಿಸ್ ಅಂಟಿಸಿದ ಬಳಿಕ ಕಟ್ಟಡ ಕೆಡವಲಾಯಿತು. ಕಟ್ಟಡ ನೆಲಸಮಗೊಳಿಸುವ ಆದೇಶವನ್ನು ಮೇ ತಿಂಗಳಲ್ಲಿಯೇ ಕಳುಹಿಸಲಾಗಿದ್ದು, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

“ಜೂನ್ 9ರೊಳಗೆ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸುವಂತೆ ಮೊಹಮ್ಮದ್ ಅವರಿಗೆ ತಿಳಿಸಲಾಯಿತು. ವಿಫಲವಾದರೆ ಜೂನ್ 12ರಂದು ಬೆಳಿಗ್ಗೆ 11 ಗಂಟೆಯೊಳಗೆ ಮನೆಯನ್ನು ಖಾಲಿ ಮಾಡುವಂತೆ ಅವರಿಗೆ ಸೂಚಿಸಲಾಗಿದೆ” ಎಂದು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

ಜಾವೇದ್ ಮೊಹಮ್ಮದ್ ಅವರ ವಕೀಲರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದು, ಪಿಡಿಎ ಪ್ರತಿಪಾದನೆಯನ್ನು ಅಲ್ಲಗಳೆದಿದ್ದಾರೆ. ಅಧಿಕಾರಿಗಳು ನಿಯಮಗಳನ್ನು ಪಾಲಿಸಿಲ್ಲ. ಮನೆಯು ಜಾವೇದ್‌ ಅವರ ಪತ್ನಿಯ ಹೆಸರಲ್ಲಿದ್ದು, ಅಕ್ರಮ ನಿರ್ಮಾಣದ ಬಗ್ಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರವಾದಿ ಮುಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು. ಆದರೆ ಪ್ರತಿಭಟನೆಗಳು ಹಿಂಸೆಗೆ ತಿರುಗಿದವು.

ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಿಂದ 300 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ಬುಲ್ಡೋಸ್‌’ ರಾಜಕೀಯ ಮಾಡುತ್ತಿದ್ದಾರೆಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. UP ಸರ್ಕಾರ ಓವೈಸಿ ಪಾಲಿನ ಯಮ ಇದ್ದಂತೆ ,ಮಾತಾಡಿದರೆ ಹೆಣಬೀಳುತ್ತೇ, ಜೈ ಹಿಂದೂ ರಾಷ್ಟ್ರ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...