Homeಕರ್ನಾಟಕನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

- Advertisement -
- Advertisement -

‘ಪಠ್ಯಪುಸ್ತಕ ಮುದ್ರಣಕ್ಕೆ ಘಟನೋತ್ತರ ಆದೇಶ ಹೊರಡಿಸಿರುವುದು ಶಾಸನ ಸಭೆಗೆ ದೊರೆತಿರುವ ಸಂವಿಧಾನ ಬದ್ಧ ಅವಕಾಶ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಸಮರ್ಥಿಸಿದರು.

‘ಪಠ್ಯ ಪರಿಷ್ಕರಣೆ: ಸಾರ್ವಜನಿಕರ ಆಕ್ಷೇಪಕ್ಕೆ ಆಹ್ವಾನ ಬೇಕಾ?’ ಎಂಬ ವಿಷಯದ ಕುರಿತು ‘ಪ್ರಜಾವಾಣಿ’ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಘಟನೋತ್ತರ ಆದೇಶಕ್ಕೆ ಅವಕಾಶವಿದೆ. ಇದನ್ನು ಬಾಲಿಷ ನಿರ್ಧಾರ ಎನ್ನಬಾರದು” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, “ಘಟನೋತ್ತರ ಆದೇಶಗಳಿಗೆ ಅವಕಾಶವಿರುವ ಅನೇಕ ಸಂದರ್ಭಗಳಿರಬಹುದು. ಆದರೆ ಯಾವ ವಿಷಯಕ್ಕೆ ಘಟನೋತ್ತರ ಆದೇಶ ನೀಡುತ್ತಿದ್ದೇವೆ ಎಂಬುದನ್ನು ಗಮನಿಸಬೇಕು. ಇದು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ವಿಷಯ. ಇದಕ್ಕೆಲ್ಲ ಘಟನೋತ್ತರ ಆದೇಶ ಸರಿಯಲ್ಲ” ಎಂದು ಪ್ರತಿಪಾದಿಸಿದರು.

“ಈವರೆಗೆ ರಚನೆಯಾದ ಪಠ್ಯಪುಸ್ತಕಗಳೆಲ್ಲ ಸರಿ ಇದ್ದವು, ಬರಗೂರರ ಸಮಿತಿ ಮಾಡಿದ್ದೆಲ್ಲವೂ ಸರಿ ಎಂದು ನಾವು ಪ್ರತಿಪಾದಿಸುತ್ತಿಲ್ಲ. ಆದರೆ ಪಠ್ಯಪುಸ್ತಕಗಳನ್ನು ತಜ್ಞರು ರೂಪಿಸುತ್ತಾರೆ. ಅದನ್ನು ಸಾರ್ವಜನಿಕ ಚರ್ಚೆಗೆ ತರುವುದು ಸರಿಯಾದ ನಡೆಯಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪೋಷಕರು, ಶಿಕ್ಷಕರ ಸಂಘಟನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು” ಎಂದು ತಿಳಿಸಿದರು.

“ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸಿಆರ್‌ಸಿ, ಬಿಆರ್‌ಸಿ, ಡಯಟ್‌ಗಳಂತಹ ಸಂಸ್ಥೆಗಳಿಂದ ಅನುಮೋದನೆಯನ್ನು ಸಮಿತಿ ಪಡೆಯಬೇಕಿತ್ತು.  ಈ ಪ್ರಶ್ನೆಗಳನ್ನು ಎತ್ತಿದ ನಮ್ಮನ್ನು ಚಿಲ್ಲರೆ ಜನ ಎಂದು ಸಚಿವರು ಕರೆದರು. ಒಬ್ಬಾತ ಬಿಜೆಪಿ ನಾಯಕ- ಸರಿಯಾಗಿ ಮರ್ಮಾಂಗಕ್ಕೆ ಹೊಡೆದಿದ್ದೇವೆ. ವಿಲವಿಲ ಒದ್ದಾಡುತ್ತಿದ್ದಾರೆ- ಎಂದು ಹೇಳಿಕೆ ನೀಡಿದರು. ಇದು ಸರಿಯೇ?” ಎಂದು ವಿನಯ್‌ ಬಿದರೆಯವರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

“ಬರಗೂರರ ಸಮಿತಿಯ ಕುರಿತು ಬಂದಿರುವ ಆಕ್ಷೇಪಗಳನ್ನು ಪರಿಶೀಲಿಸಲೆಂದು ರೂಪಿಸಲಾಗಿದ್ದ ಸಮಿತಿ ಪರಿಷ್ಕರಣೆಯನ್ನೇ ಮಾಡಿದೆ. ಮೌಖಿಕ ಆದೇಶದ ಮೂಲಕ ಪರಿಷ್ಕರಣೆ ನಡೆದಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಪರಿಷ್ಕರಣೆ ಮಾಡಿದ್ದು ಹೇಗೆ? ಇದು ಸರಿಯಾದ ನಡೆಯೇ?” ಎಂದು ಕೇಳಿದರು.

ಹಿರಿಯ ಪತ್ರಕರ್ತರಾದ ವೈ.ಗ.ಜಗದೀಶ್ ಸಂವಾದವನ್ನು ನಡೆಸಿಕೊಟ್ಟರು. ಲೇಖಕಿ ಪಲ್ಲವಿ ಇಡೂರು, ಬಲಪಂಥೀಯ ಬರಹಗಾರ ಸುಧಾಕರ್‌ ಹೊಸಳ್ಳಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಈ ವಿದ್ಯಾ ಸಚಿವನಿಗೇನಾದರು ಜವಾಬ್ದಾರಿ ಇದೆಯೇ? ನೀನು ಮನಸ್ಸಿಗೆ ಬಂದಂತೆ ಒಂದು ಸಮುದಾಯದ ಅಶಯಗಳನ್ಳ ತಿರುಚು,ಉಳಿದ ಸಮುದಾಯಗಳ ಆಶಯ,ಸಂಸ್ಕೃತಿ, ನೈಜ ಇತಿಹಾಸ ನಾಶವಾದರು ಸರಿ,ಇಲ್ಲವೇ ಆ ಸಮುದಾಯಗಳ ಅಸ್ಮಿತೆಗಳಿಗೆ ಮಸಿ ಬಳಿದಾದರು ಪಠ್ಯ ಪರಿಸ್ಕರಿಸು ,ನಾವು ಘಟನೋತ್ತರ ಮಂಜೂರಾತಿ ನೀಡುತ್ತೇವೆ ಎಂಬಂತೆ ಇದೆ.ನಾಚಿಕೆಯಾಗಬೇಕು ಈ ಘಟನೋತ್ತರ ಅದೇಶವನ್ನ ಸಮರ್ಥನೆ ಮಾಡಿಕೊಳ್ಳುವವರಿಗೆ ಅದಕ್ಕೆ ಸಂವಿಧಾನದ ಉಲ್ಲಂಘನೆ ಯಾಗಿಲ್ಲವೆಂಬ ಸಬೂಬು ಬೇರೆ.ಹೋಗಲಿ, ನೀವು ಯಾವಾಗ ಸಂವಿಧಾನಕ್ಕೆ ಗೌರವ ನೀಡಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...