Homeಚಳವಳಿರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಸಮುದಾಯದ ಯುವಕನ ಮೇಲೆ ನಾಲ್ವರು ಸವರ್ಣಿಯ ಸಮುದಾಯದ ಯುವಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ವಿಡಿಯೋದಲ್ಲಿ ನಾಲ್ವರು ಯುವಕರು ಸಂತ್ರಸ್ತ ಪ್ರಕಾಶ್ ಲೋಗಾರ್ (30) ಎಂಬಾತನ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿದ್ದಾರೆ. ಶೂ ಧರಿಸಿದ ಕಾಲುಗಳಿಂದ ಒದೆಯುತ್ತಿರುವುದು, ಕೋಲು ಮುರಿದರೂ ಬಿಡದೆ ಥಳಿಸುತ್ತಿರುವುದು ಕಾಣಿಸಿದೆ. ಇಷ್ಟು ಹಲ್ಲೆ ನಡೆಯುತ್ತಿದ್ದರೂ ಎದೆಗುಂದದ ಯುವಕ ಧೈರ್ಯದಿಂದ ನನ್ನನ್ನು ಮುಟ್ಟಬೇಡಿ ಎಂದು ಎಚ್ಚರಿಕೆ ನೀಡುತ್ತಿದ್ದಾರೆ. ಈ ಘಟನೆ ಜೂನ್ 3 ರಂದು ನಡೆದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಲ್ಲೆಯ ವಿಡಿಯೋ ವೈರಲ್ ಆಗಿ ದಲಿತಪರ ಸಂಘಟನೆಗಲು, ನಾಯಕರು ಸೇರಿದಂತೆ ಹಲವು ಮಂದಿ ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಜಯ್ ಸಿಂಗ್, ರಘುನಾಥ್ ಸಿಂಗ್ ಮತ್ತು ಯಶಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ನಾಲ್ಕನೇ ಆರೋಪಿಗಾಗಿ ಶೋಧ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ಘಟನೆ ವಿವರ:

ಜೂನ್ 3 ರಂದು ಕೂಲಿ ಕೆಲಸ ಮಾಡುವ ಪ್ರಕಾಶ್ ಲೋಗಾರ್ (30) ಕೆಲಸ ಮುಗಿಸಿ ಸಪೇಟಿಯಾದಿಂದ ತಮ್ಮ ಮನೆಗೆ ಹೋಗುತ್ತಿದ್ದರು. ಆಗ ಗುಡಾ ರಸ್ತೆ ಬಳಿಯ ಜಿತೇಂದ್ರ ಸಿಂಗ್ ಝಾಲಾ ಅವರ ಮದ್ಯದಂಗಡಿಯಲ್ಲಿ ಕುಳಿತಿದ್ದ ವಿಜಯ್ ಸಿಂಗ್ ಅಲಿಯಾಸ್ ವಿಜೇಂದ್ರ ಸಿಂಗ್ ಝಾಲಾ (26) ಮತ್ತು ರಘುನಾಥ್ ಸಿಂಗ್ ಚೌಹಾಣ್ (25) ಅವರನ್ನು ತಡೆದು,ಅಂಗಡಿಯೊಳಗೆ ಕರೆದಿದ್ದಾರೆ. ಅಂಗಡಿಯಲ್ಲಿ ಜಿತೇಂದ್ರ ಸಿಂಗ್ ಝಾಲಾ ಮತ್ತು ಯಶಪಾಲ್ ಸಿಂಗ್ (25) ಕೂಡ ಇದ್ದರು. ಈ ನಾಲ್ವರು ಪ್ರಕಾಶ್‌ಗೆ ಮದ್ಯಪಾನ ಮಾಡಲು ಒತ್ತಾಯಿಸಿದ್ದಾರೆ. ಪ್ರಕಾಶ್ ಮದ್ಯ ಸೇವಿಸಲು ನಿರಾಕರಿಸಿದಾಗ ಆತನ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ.

Image
ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋ ಶೇರ್ ಆದ ನಂತರ ಸಂತ್ರಸ್ತರ ಸಂಬಂಧಿಕರು ಮತ್ತು ಗ್ರಾಮಸ್ಥರ ಒತ್ತಾಯದ ಮೇರೆಗೆ ಪೊಲೀಸ್ ಠಾಣೆಗೆ ಬಮದು ದೂರು ನೀಡಿದ್ದಾರೆ. ವಿಷಯದ ಗಂಭೀರತೆಯನ್ನು ಕಂಡ ಪೊಲೀಸರು ಕೇವಲ ಎರಡು ಗಂಟೆಗಳಲ್ಲಿ ಮೂವರು ಆರೋಪಿಗಳಾದ ವಿಜಯ್ ಸಿಂಗ್, ರಘುನಾಥ್ ಸಿಂಗ್ ಮತ್ತು ಯಶಪಾಲ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಮದ್ಯದ ಅಮಲಿನಲ್ಲಿ ಹಲ್ಲೆ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ.

ಘಟನೆಗೆ ಸಾಮಾಜಿಕ ಕಾರ್ಯಕರ್ತ ಸೂರಜ್ ಕುಮಾರ್‌ ಬೌದ್ಧ, ಸುಧೀಂದ್ರ ಭದೋರಿಯಾ ಸೇರಿದಂತೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಅಧ್ಯಕ್ಷ ವಿಜಯಸ ಸಂಪ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಹಲ್ಕಟ್ ಮುಂಡೆ ಮಕ್ಕಳಿಗೆ ಲಾಠಿಗೆ ಖಾರದ ಪುಡಿ ಹಚ್ಚಿ ಒಳ್ಳೆ ಜಾಗಕ್ಕೆ ಏರಸಬೇಕು ಆವಾಗ್ಲೇ ಗೊತ್ತಾಗುತ್ತೆ ಇನ್ನೊಬ್ಬರ ನೋವು ಏನಂತ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...