Homeಮುಖಪುಟಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಮೋದಿ ಒತ್ತಡಕ್ಕೆ ಮಣಿದು ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ಗೌತಮ್ ಅದಾನಿ ಗುಂಪಿಗೆ ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಿದ್ದಾರೆ. ಮೋದಿ ಒತ್ತಡಕ್ಕೆ ಮಣಿದು ಗೌತಮ್ ಅದಾನಿ ಗುಂಪಿಗೆ ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪವನ ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ಮೋದಿ ಒತ್ತಡ ಹೇರಿದ್ದಾರೆ ಎಂದು ಅಧ್ಯಕ್ಷ ರಾಜಪಕ್ಸೆ ಅವರು ತಮಗೆ ಹೇಳಿರುವುದಾಗಿ ತಿಳಿಸಿದ್ದ ಶ್ರೀಲಂಕಾದ ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ 500-ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಯೋಜನೆಗೆ ಸಂಬಂಧಿಸಿದಂತೆ ಈ ಆರೋಪ ಮಾಡಲಾಗಿತ್ತು. ಸಾರ್ವಜನಿಕ ಉದ್ಯಮಗಳ ಸಮಿತಿಯ (COPE) ಮುಕ್ತ ವಿಚಾರಣೆಯಲ್ಲಿ ಫರ್ಡಿನಾಂಡೋ ಮಾತನಾಡಿರುವುದಾಗಿ ವರದಿಯಾಗಿತ್ತು. “ಮೋದಿಯವರ ಒತ್ತಡಕ್ಕೆ ಒಳಗಾಗಿರುವುದಾಗಿ ರಾಜಪಕ್ಸೆ ನನಗೆ ಹೇಳಿದರು” ಎಂದು ಫರ್ಡಿನಾಂಡೋ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು.

ಆ ಆರೋಪಗಳನ್ನು ಮಾಡಿದ ಮೂರು ದಿನಗಳ ನಂತರ ಫರ್ಡಿನಾಂಡೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಸಂಜೆ ಟ್ವಿಟರ್‌ನಲ್ಲಿ ಅಧ್ಯಕ್ಷ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಫರ್ಡಿನಾಂಡೋ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಫರ್ಡಿನಾಂಡೋ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷರ ಕಚೇರಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆರೋಪಗಳನ್ನು ಸಂಪೂರ್ಣ ನಿರಾಕರಿಸಲಾಗಿದೆ. ಮನ್ನಾರ್‌ನಲ್ಲಿ ಪವನ ವಿದ್ಯುತ್ ಯೋಜನೆಯನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಗೆ ನೀಡಲು ತಾನು ಯಾವುದೇ ಸಮಯದಲ್ಲಿ ಅಧಿಕಾರ ನೀಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶ್ರೀಲಂಕಾ ದೇಶವು ಪ್ರಸ್ತುತ ಇಂಧನ ಕೊರತೆಯನ್ನು ತೀವ್ರತರನಾಗಿ ಎದುರಿಸುತ್ತಿದೆ. ಸಾಧ್ಯವಾದಷ್ಟು ಬೇಗ ಮೆಗಾ ಪವರ್ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕಿದೆ. ಇಷ್ಟಾಗಿಯೂ ಅಂತಹ ಯೋಜನೆಗಳನ್ನು ನೀಡುವಲ್ಲಿ ಯಾವುದೇ ಅನಗತ್ಯ ಪ್ರಭಾವವನ್ನು ಬಳಸಲಾಗುವುದಿಲ್ಲ. ದೊಡ್ಡ-ಪ್ರಮಾಣದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರಸ್ತಾಪಗಳು ಸೀಮಿತವಾಗಿವೆ. ಸಂಸ್ಥೆಗಳ ಆಯ್ಕೆಗೆ ವಿಶೇಷ ಗಮನ ನೀಡಲಾಗುವುದು. ಸರ್ಕಾರ ಪಾರದರ್ಶಕವಾಗಿರಲಿದೆ” ಎಂದು ಅಧ್ಯಕ್ಷ ರಾಜಪಕ್ಸೆ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ.

ಶ್ರೀಲಂಕಾದ ದಿನಪತ್ರಿಕೆ ‘ದಿ ಮಾರ್ನಿಂಗ್‌’ಗೆ ಒಂದು ದಿನದ ನಂತರ ಹೇಳಿಕೆ ನೀಡಿರುವ ಫರ್ಡಿನಾಂಡೋ ಕ್ಷಮೆಯಾಚಿಸಿದ್ದಾರೆ. ಅನಿರೀಕ್ಷಿತ ಒತ್ತಡ ಹಾಗೂ ಭಾವನೆಗಳಿಂದಾಗಿ ಮೋದಿಯವರ ಹೆಸರು ಬಂತು ಎಂದಿದ್ದಾರೆ.

ಶ್ರೀಲಂಕಾ ತನ್ನ ಕಾನೂನುಗಳನ್ನು ಬದಲಾಯಿಸಿದ ಒಂದು ದಿನದ ನಂತರ ಮತ್ತು ಇಂಧನ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ವ್ಯವಸ್ಥೆ ಕೈಬಿಟ್ಟ ನಂತರ ವಿವಾದ ಉಂಟಾಗಿದೆ. ಅದಾನಿ ಗ್ರೂಪ್‌ಗೆ ನೀಡಿರುವ ಮನ್ನಾರ್ ಎನರ್ಜಿ ಪ್ರಾಜೆಕ್ಟ್ ಗುತ್ತಿಗೆಯನ್ನು ಸುಗಮಗೊಳಿಸಲು ಸರ್ಕಾರ ಈ ಬದಲಾವಣೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿರಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ವಿದ್ಯುತ್ ತಿದ್ದುಪಡಿ ಮಸೂದೆಯ ಸಂಸತ್ತಿನ ಚರ್ಚೆಯಲ್ಲಿ ಅದಾನಿ ಗುಂಪಿನ ವಿಚಾರ ಬಂದಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಮಸೂದೆ ಅಂಗೀಕಾರವಾಗಿದೆ.

ಲಂಕಾದಲ್ಲಿನ ಪ್ರಮುಖ ಪ್ರತಿಪಕ್ಷ ಎಸ್‌ಜೆಬಿ ಪ್ರತಿಕ್ರಿಯೆ ನೀಡಿದ್ದು, “10 ಮೆಘಾವ್ಯಾಟ್‌ ಸಾಮರ್ಥ್ಯದ ಆಚೆಗಿನ ಯೋಜನೆಗಳು ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ಮೂಲಕ ನಿರ್ಧಾರವಾಗಬೇಕು” ಎಂದು ಒತ್ತಾಯಿಸಿತು. ಆದರೆ ಸರ್ಕಾರದ ಬಹುಪಾಲು ಸಂಸದರು ಈ ಷರತ್ತಿನ ವಿರುದ್ಧ ಮತ ಚಲಾಯಿಸಿದರು.

ಮನ್ನಾರ್ ಮತ್ತು ಪೂನೆರಿನ್‌ನಲ್ಲಿ ಎರಡು ಪವನ ವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಗುತ್ತಿಗೆಗಳನ್ನು ಅದಾನಿ ಗ್ರೂಪ್ ಡಿಸೆಂಬರ್‌ನಲ್ಲಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಅಕ್ಟೋಬರ್‌ನಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...