Homeಮುಖಪುಟಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಮೋದಿ ಒತ್ತಡಕ್ಕೆ ಮಣಿದು ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ಗೌತಮ್ ಅದಾನಿ ಗುಂಪಿಗೆ ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಿದ್ದಾರೆ. ಮೋದಿ ಒತ್ತಡಕ್ಕೆ ಮಣಿದು ಗೌತಮ್ ಅದಾನಿ ಗುಂಪಿಗೆ ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪವನ ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ಮೋದಿ ಒತ್ತಡ ಹೇರಿದ್ದಾರೆ ಎಂದು ಅಧ್ಯಕ್ಷ ರಾಜಪಕ್ಸೆ ಅವರು ತಮಗೆ ಹೇಳಿರುವುದಾಗಿ ತಿಳಿಸಿದ್ದ ಶ್ರೀಲಂಕಾದ ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ 500-ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಯೋಜನೆಗೆ ಸಂಬಂಧಿಸಿದಂತೆ ಈ ಆರೋಪ ಮಾಡಲಾಗಿತ್ತು. ಸಾರ್ವಜನಿಕ ಉದ್ಯಮಗಳ ಸಮಿತಿಯ (COPE) ಮುಕ್ತ ವಿಚಾರಣೆಯಲ್ಲಿ ಫರ್ಡಿನಾಂಡೋ ಮಾತನಾಡಿರುವುದಾಗಿ ವರದಿಯಾಗಿತ್ತು. “ಮೋದಿಯವರ ಒತ್ತಡಕ್ಕೆ ಒಳಗಾಗಿರುವುದಾಗಿ ರಾಜಪಕ್ಸೆ ನನಗೆ ಹೇಳಿದರು” ಎಂದು ಫರ್ಡಿನಾಂಡೋ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು.

ಆ ಆರೋಪಗಳನ್ನು ಮಾಡಿದ ಮೂರು ದಿನಗಳ ನಂತರ ಫರ್ಡಿನಾಂಡೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಸಂಜೆ ಟ್ವಿಟರ್‌ನಲ್ಲಿ ಅಧ್ಯಕ್ಷ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಫರ್ಡಿನಾಂಡೋ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಫರ್ಡಿನಾಂಡೋ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷರ ಕಚೇರಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆರೋಪಗಳನ್ನು ಸಂಪೂರ್ಣ ನಿರಾಕರಿಸಲಾಗಿದೆ. ಮನ್ನಾರ್‌ನಲ್ಲಿ ಪವನ ವಿದ್ಯುತ್ ಯೋಜನೆಯನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಗೆ ನೀಡಲು ತಾನು ಯಾವುದೇ ಸಮಯದಲ್ಲಿ ಅಧಿಕಾರ ನೀಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶ್ರೀಲಂಕಾ ದೇಶವು ಪ್ರಸ್ತುತ ಇಂಧನ ಕೊರತೆಯನ್ನು ತೀವ್ರತರನಾಗಿ ಎದುರಿಸುತ್ತಿದೆ. ಸಾಧ್ಯವಾದಷ್ಟು ಬೇಗ ಮೆಗಾ ಪವರ್ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕಿದೆ. ಇಷ್ಟಾಗಿಯೂ ಅಂತಹ ಯೋಜನೆಗಳನ್ನು ನೀಡುವಲ್ಲಿ ಯಾವುದೇ ಅನಗತ್ಯ ಪ್ರಭಾವವನ್ನು ಬಳಸಲಾಗುವುದಿಲ್ಲ. ದೊಡ್ಡ-ಪ್ರಮಾಣದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರಸ್ತಾಪಗಳು ಸೀಮಿತವಾಗಿವೆ. ಸಂಸ್ಥೆಗಳ ಆಯ್ಕೆಗೆ ವಿಶೇಷ ಗಮನ ನೀಡಲಾಗುವುದು. ಸರ್ಕಾರ ಪಾರದರ್ಶಕವಾಗಿರಲಿದೆ” ಎಂದು ಅಧ್ಯಕ್ಷ ರಾಜಪಕ್ಸೆ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ.

ಶ್ರೀಲಂಕಾದ ದಿನಪತ್ರಿಕೆ ‘ದಿ ಮಾರ್ನಿಂಗ್‌’ಗೆ ಒಂದು ದಿನದ ನಂತರ ಹೇಳಿಕೆ ನೀಡಿರುವ ಫರ್ಡಿನಾಂಡೋ ಕ್ಷಮೆಯಾಚಿಸಿದ್ದಾರೆ. ಅನಿರೀಕ್ಷಿತ ಒತ್ತಡ ಹಾಗೂ ಭಾವನೆಗಳಿಂದಾಗಿ ಮೋದಿಯವರ ಹೆಸರು ಬಂತು ಎಂದಿದ್ದಾರೆ.

ಶ್ರೀಲಂಕಾ ತನ್ನ ಕಾನೂನುಗಳನ್ನು ಬದಲಾಯಿಸಿದ ಒಂದು ದಿನದ ನಂತರ ಮತ್ತು ಇಂಧನ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ವ್ಯವಸ್ಥೆ ಕೈಬಿಟ್ಟ ನಂತರ ವಿವಾದ ಉಂಟಾಗಿದೆ. ಅದಾನಿ ಗ್ರೂಪ್‌ಗೆ ನೀಡಿರುವ ಮನ್ನಾರ್ ಎನರ್ಜಿ ಪ್ರಾಜೆಕ್ಟ್ ಗುತ್ತಿಗೆಯನ್ನು ಸುಗಮಗೊಳಿಸಲು ಸರ್ಕಾರ ಈ ಬದಲಾವಣೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿರಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ವಿದ್ಯುತ್ ತಿದ್ದುಪಡಿ ಮಸೂದೆಯ ಸಂಸತ್ತಿನ ಚರ್ಚೆಯಲ್ಲಿ ಅದಾನಿ ಗುಂಪಿನ ವಿಚಾರ ಬಂದಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಮಸೂದೆ ಅಂಗೀಕಾರವಾಗಿದೆ.

ಲಂಕಾದಲ್ಲಿನ ಪ್ರಮುಖ ಪ್ರತಿಪಕ್ಷ ಎಸ್‌ಜೆಬಿ ಪ್ರತಿಕ್ರಿಯೆ ನೀಡಿದ್ದು, “10 ಮೆಘಾವ್ಯಾಟ್‌ ಸಾಮರ್ಥ್ಯದ ಆಚೆಗಿನ ಯೋಜನೆಗಳು ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ಮೂಲಕ ನಿರ್ಧಾರವಾಗಬೇಕು” ಎಂದು ಒತ್ತಾಯಿಸಿತು. ಆದರೆ ಸರ್ಕಾರದ ಬಹುಪಾಲು ಸಂಸದರು ಈ ಷರತ್ತಿನ ವಿರುದ್ಧ ಮತ ಚಲಾಯಿಸಿದರು.

ಮನ್ನಾರ್ ಮತ್ತು ಪೂನೆರಿನ್‌ನಲ್ಲಿ ಎರಡು ಪವನ ವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಗುತ್ತಿಗೆಗಳನ್ನು ಅದಾನಿ ಗ್ರೂಪ್ ಡಿಸೆಂಬರ್‌ನಲ್ಲಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಅಕ್ಟೋಬರ್‌ನಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...