Homeಮುಖಪುಟಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

- Advertisement -
- Advertisement -

“ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಇ.ಡಿ. ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯವಾದವೇ ಇವರ ಬಂಡವಾಳ!” ಎಂಬ ಪ್ರತಿಪಾದನೆಯೊಂದಿಗೆ ಬಿಜೆಪಿ ಕರ್ನಾಟಕ ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವ ವಿಡಿಯೊವನ್ನು ಟ್ರೋಲ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಅಣಕಿಸುತ್ತಿದ್ದಾರೆ. ಆದರೆ ಬಿ.ವಿ.ಶ್ರೀನಿವಾಸ್ ಈ ವಿಡಿಯೊ ಹಿಂದಿನ ಅಸಲಿ ಕಥೆಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌, “ಪೊಲೀಸರ ಉದ್ದೇಶ ಸರಿ ಇದ್ದರೆ ಖಂಡಿತವಾಗಿಯೂ ನಾನು ಅವರ ಜೊತೆಯಲ್ಲಿ ಹೋಗಲು ತಯಾರಿದ್ದೆ. ಅವರ ಉದ್ದೇಶ ಬೇರೆಯಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿಯೇ ಅರೆಸ್ಟ್‌ ಮಾಡಲು ಯೋಜಿಸಿದ್ದರು. ಬಿಜೆಪಿಯವರಿಗೆ ಕಾಮನ್‌ ಸೆನ್ಸ್‌ ಇಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಳಿಗ್ಗೆ ಏಳು ಗಂಟೆಯ ಸಮಯದಲ್ಲಿ ಪೊಲೀಸರು ನನ್ನನ್ನು ಅರೆಸ್ಟ್ ಮಾಡಲು ಪ್ರಯತ್ನಪಟ್ಟರು. ರಾತ್ರಿ ಎರಡು ಸಲ ಪ್ರಯತ್ನಪಟ್ಟರು. ಬೆಳಿಗ್ಗೆ ಎಂಟು ಗಂಟೆಗೆ ಮತ್ತೊಮ್ಮೆ ಪೊಲೀಸರು ಯತ್ನಿಸಿದಾಗ ನಾನು ಗೆರಿಲ್ಲಾ ಮಾದರಿಯಲ್ಲಿ ಎಸ್ಕೇಪ್‌ ಆದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಹುಲ್‌ ಗಾಂಧಿಯವರಿಗೆ ಇ.ಡಿ. ಸಮನ್ಸ್ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಇ.ಡಿ. ಕಚೇರಿ ಬಳಿಗೆ ತೆರಳಿ ಕಾರ್ಯಕರ್ತರೊಂದಿಗೆ ನಾನು ಸೇರಿಕೊಳ್ಳಬೇಕಿತ್ತು. ಹೀಗಾಗಿ ತಪ್ಪಿಸಿಕೊಂಡು ಓಡಿದೆ. ನಂತರದ ಪ್ರತಿಭಟನೆಯಲ್ಲಿ ನನ್ನ ಹಾಜರಿ ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಷನಲ್‌ ಟಿ.ವಿ. ಚಾನೆಲ್‌ಗಳಲ್ಲೂ ಇದು ಲೈವ್ ಆಗಿದೆ. ಈ ಬಿಜೆಪಿವರು ಸುಳ್ಳಿನ ಫ್ಯಾಕ್ಟರಿ ಗಿರಾಕಿಗಳು. ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಏನು ಎಂಬುದು ನ್ಯೂಯಾರ್ಕ್ ಟೈಮ್ಸ್‌ನವರು ಬರೆದಿದ್ದಾರೆ. ಸಂವಿಧಾನದ ಉಳಿವಿವಾಗಿ ಹೋರಾಡಿ 130 ಕೇಸು ಹಾಕಿಸ್ಕೊಂಡಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

“ಸಿ.ಟಿ.ರವಿ ನನ್ನ ಬಗ್ಗೆ ಮಾತನಾಡಿದ್ದಾರಂತೆ. ನಾನು ಓ.ಟಿ. ಹಾಕಿಕೊಂಡು ಕಾರು ಅಪಘಾತ ಮಾಡಿ ಓಡಿ ಹೋಗಿಲ್ಲ. ಓಡಿ ಹೋಗುವವರು ಬಿಜೆಪಿ ನಾಯಕರು ಮಾತ್ರ” ಎಂದು ಕುಟುಕಿದರು.

“ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದ ಸ್ಥಳಕ್ಕೆ ಐದಾರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದೇ ರೀತಿಯಲ್ಲಿ ದೊಡ್ಡ ಮಟ್ಟದ ಪೊಲೀಸರನ್ನು ಅರುಣಾಚಲಪ್ರದೇಶಕ್ಕೆ ನಿಯೋಜಿಸಿದ್ದರೆ ಚೈನಾದವರು ನಮ್ಮ ದೇಶದ ಒಳಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂಗಳು ಎನ್ನುತ್ತಾರೆ. ಆದರೆ ಜಮ್ಮು ಕಾಶ್ಮೀರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಿದ್ದರೆ ಹಿಂದೂಗಳು ಸಾಯುತ್ತಿರಲಿಲ್ಲ. ಸರ್ಕಾರ ಇವರದ್ದೇ ಅಲ್ಲವೇ?” ಎಂದು ಪ್ರಶ್ನಿಸಿದರು.

“ನನ್ನ ಹಿನ್ನಲೆ ಏನೆಂಬುದು ದೇಶಕ್ಕೆ ಗೊತ್ತಿದೆ. ಈ ಸಿ.ಟಿ.ರವಿಯಂಥವರಿಂದ ಪಾಠ ಕಲಿಯುವ ಅವಶ್ಯಕತೆ  ನನಗಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಜ ಹೇಳಿದ್ದಾರೆ ಶ್ರೀನಿವಾಸ್ ರವರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು,, ಅವರು ಹೇಳಿದ ಹಾಗೆ ಬಿಜೆಪಿ ಯವರು ಸುಳ್ಳು ಸೃಷ್ಟಿಸುವ ಕಾರ್ಖಾನೆಗಳಾಗಿವೆ,, ಕೆಲವೊಂದು ಬಾಲ್ ಗಳು ಆದೆ ಸತ್ಯ ಅಂತ ಬೊಬ್ಬೆ ಹೊಡೀತಾವೆ ಅವಿವೇಕಿಗಳು 😂😂😂

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...