Homeಮುಖಪುಟಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

- Advertisement -
- Advertisement -

“ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಇ.ಡಿ. ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯವಾದವೇ ಇವರ ಬಂಡವಾಳ!” ಎಂಬ ಪ್ರತಿಪಾದನೆಯೊಂದಿಗೆ ಬಿಜೆಪಿ ಕರ್ನಾಟಕ ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವ ವಿಡಿಯೊವನ್ನು ಟ್ರೋಲ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಅಣಕಿಸುತ್ತಿದ್ದಾರೆ. ಆದರೆ ಬಿ.ವಿ.ಶ್ರೀನಿವಾಸ್ ಈ ವಿಡಿಯೊ ಹಿಂದಿನ ಅಸಲಿ ಕಥೆಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌, “ಪೊಲೀಸರ ಉದ್ದೇಶ ಸರಿ ಇದ್ದರೆ ಖಂಡಿತವಾಗಿಯೂ ನಾನು ಅವರ ಜೊತೆಯಲ್ಲಿ ಹೋಗಲು ತಯಾರಿದ್ದೆ. ಅವರ ಉದ್ದೇಶ ಬೇರೆಯಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿಯೇ ಅರೆಸ್ಟ್‌ ಮಾಡಲು ಯೋಜಿಸಿದ್ದರು. ಬಿಜೆಪಿಯವರಿಗೆ ಕಾಮನ್‌ ಸೆನ್ಸ್‌ ಇಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಳಿಗ್ಗೆ ಏಳು ಗಂಟೆಯ ಸಮಯದಲ್ಲಿ ಪೊಲೀಸರು ನನ್ನನ್ನು ಅರೆಸ್ಟ್ ಮಾಡಲು ಪ್ರಯತ್ನಪಟ್ಟರು. ರಾತ್ರಿ ಎರಡು ಸಲ ಪ್ರಯತ್ನಪಟ್ಟರು. ಬೆಳಿಗ್ಗೆ ಎಂಟು ಗಂಟೆಗೆ ಮತ್ತೊಮ್ಮೆ ಪೊಲೀಸರು ಯತ್ನಿಸಿದಾಗ ನಾನು ಗೆರಿಲ್ಲಾ ಮಾದರಿಯಲ್ಲಿ ಎಸ್ಕೇಪ್‌ ಆದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಹುಲ್‌ ಗಾಂಧಿಯವರಿಗೆ ಇ.ಡಿ. ಸಮನ್ಸ್ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಇ.ಡಿ. ಕಚೇರಿ ಬಳಿಗೆ ತೆರಳಿ ಕಾರ್ಯಕರ್ತರೊಂದಿಗೆ ನಾನು ಸೇರಿಕೊಳ್ಳಬೇಕಿತ್ತು. ಹೀಗಾಗಿ ತಪ್ಪಿಸಿಕೊಂಡು ಓಡಿದೆ. ನಂತರದ ಪ್ರತಿಭಟನೆಯಲ್ಲಿ ನನ್ನ ಹಾಜರಿ ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಷನಲ್‌ ಟಿ.ವಿ. ಚಾನೆಲ್‌ಗಳಲ್ಲೂ ಇದು ಲೈವ್ ಆಗಿದೆ. ಈ ಬಿಜೆಪಿವರು ಸುಳ್ಳಿನ ಫ್ಯಾಕ್ಟರಿ ಗಿರಾಕಿಗಳು. ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಏನು ಎಂಬುದು ನ್ಯೂಯಾರ್ಕ್ ಟೈಮ್ಸ್‌ನವರು ಬರೆದಿದ್ದಾರೆ. ಸಂವಿಧಾನದ ಉಳಿವಿವಾಗಿ ಹೋರಾಡಿ 130 ಕೇಸು ಹಾಕಿಸ್ಕೊಂಡಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

“ಸಿ.ಟಿ.ರವಿ ನನ್ನ ಬಗ್ಗೆ ಮಾತನಾಡಿದ್ದಾರಂತೆ. ನಾನು ಓ.ಟಿ. ಹಾಕಿಕೊಂಡು ಕಾರು ಅಪಘಾತ ಮಾಡಿ ಓಡಿ ಹೋಗಿಲ್ಲ. ಓಡಿ ಹೋಗುವವರು ಬಿಜೆಪಿ ನಾಯಕರು ಮಾತ್ರ” ಎಂದು ಕುಟುಕಿದರು.

“ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದ ಸ್ಥಳಕ್ಕೆ ಐದಾರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದೇ ರೀತಿಯಲ್ಲಿ ದೊಡ್ಡ ಮಟ್ಟದ ಪೊಲೀಸರನ್ನು ಅರುಣಾಚಲಪ್ರದೇಶಕ್ಕೆ ನಿಯೋಜಿಸಿದ್ದರೆ ಚೈನಾದವರು ನಮ್ಮ ದೇಶದ ಒಳಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂಗಳು ಎನ್ನುತ್ತಾರೆ. ಆದರೆ ಜಮ್ಮು ಕಾಶ್ಮೀರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಿದ್ದರೆ ಹಿಂದೂಗಳು ಸಾಯುತ್ತಿರಲಿಲ್ಲ. ಸರ್ಕಾರ ಇವರದ್ದೇ ಅಲ್ಲವೇ?” ಎಂದು ಪ್ರಶ್ನಿಸಿದರು.

“ನನ್ನ ಹಿನ್ನಲೆ ಏನೆಂಬುದು ದೇಶಕ್ಕೆ ಗೊತ್ತಿದೆ. ಈ ಸಿ.ಟಿ.ರವಿಯಂಥವರಿಂದ ಪಾಠ ಕಲಿಯುವ ಅವಶ್ಯಕತೆ  ನನಗಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಜ ಹೇಳಿದ್ದಾರೆ ಶ್ರೀನಿವಾಸ್ ರವರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು,, ಅವರು ಹೇಳಿದ ಹಾಗೆ ಬಿಜೆಪಿ ಯವರು ಸುಳ್ಳು ಸೃಷ್ಟಿಸುವ ಕಾರ್ಖಾನೆಗಳಾಗಿವೆ,, ಕೆಲವೊಂದು ಬಾಲ್ ಗಳು ಆದೆ ಸತ್ಯ ಅಂತ ಬೊಬ್ಬೆ ಹೊಡೀತಾವೆ ಅವಿವೇಕಿಗಳು 😂😂😂

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....