Homeಚಳವಳಿಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ - ಕಿಮ್ಮನೆ ರತ್ನಾಕರ್

ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

- Advertisement -
- Advertisement -

ಪಠ್ಯ ಪರಿಷ್ಕರಣ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ನಾಡಗೀತೆ ಹಾಗೂ ಕುವೆಂಪುರವರಿಗೆ ಅವಮಾನಿಸಿರುವುದನ್ನು ಖಂಡಿಸಿ ಜೂನ್ 15 ರಂದು ಕುಪ್ಪಳ್ಳಿಯ ಕವಿಶೈಲದ ಕುವೆಂಪು ಸಮಾಧಿಯ ಸ್ಥಳದಿಂದ ತೀರ್ಥಹಳ್ಳಿವರೆಗು ‘ಸಾಂಸ್ಕೃತಿಕ ಸೌಹಾರ್ದ ಜಾಗೃತ ಪಯಣ’ ನಡೆಸುತ್ತೇವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಸಾಹಿತಿಗಳು, ಕನ್ನಡ ಪರ ಸಂಘಟನೆಗಳು, ನಾಗರೀಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಸೇರಿದಂತೆ ಪಕ್ಷಾತೀತವಾಗಿ ಈ ಹೋರಾಟವನ್ನು ರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಠ್ಯಗಳ ಪರಿಷ್ಕರಣೆ ಕಾರ್ಯ ನಿರ್ಮಲ ಮನಸ್ಸಿನಿಂದ ವ್ಯವಸ್ಥಿತವಾಗಿ ಮತ್ತು ಕ್ರಮಬದ್ದವಾಗಿ ಮಾಡಬೇಕಾದ ಒಂದು ಕೆಲಸ. ಇದು ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತದೆ. ಆದರೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಜಾತಿ, ಧರ್ಮ, ಪಕ್ಷ ಎಲ್ಲವನ್ನೂ ಆಧಾರವಾಗಿಟ್ಟುಕೊಂಡು ಹರಿಬರಿಯಲ್ಲಿ ಸಂಕುಚಿತವಾದ ಭಾವನೆಯಿಂದ ಪಠ್ಯಗಳ ಪರಿಷ್ಕರಣೆ ನಡೆಸಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜಗಳನ್ನು ಬಿತ್ತುವ ಕೆಲಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ರಾಜ್ಯದ ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ಪಠ್ಯ ಪರಿಷ್ಕರಣೆಯಲ್ಲಿ ಅಡಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್, ನಾರಾಯಣಗುರು, ಮಹಾವೀರರು, ಪುರಂದರದಾಸರು,‌ ಕನಕದಾಸರು, ಶಂಕರಾಚಾರ್ಯ ಮುಂತಾದ ಮಹಾ ಪುರುಷರಿಗೆ ಅವಮಾನ ಮಾಡಲಾಗಿದೆ. ಬಿಜೆಪಿ ಪಕ್ಷದ ಅನೇಕ ಶಾಸಕರೇ ಇದರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ರತ್ನಾಕರ್ ಹೇಳಿದ್ದಾರೆ.

ಈ ಪಯಣದಲ್ಲಿ ಸಾಹಿತಿಗಳಾದ ಪ್ರೊ. ಎಸ್‌.ಜಿ ಸಿದ್ದರಾಮಯ್ಯ, ರಾಜೇಂದ್ರ ಚೆನ್ನಿ, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಮಂಜುನಾಥ್, ದಲಿತ ಸಂಘರ್ಷ ಸಮಿತಿ ಅಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಹಾಗೂ ಜಿಲ್ಲಾಧ್ಯಕ್ಷರು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದರು.

ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ, ಮಾಜಿ ವಿಧಾನಸಭಾ ಅಧ್ಯಕ್ಷ ರಮೇಶ್ ಕುಮಾರ್, ರಾಜ್ಯ ಸಭಾ ಸದಸ್ಯ ಹನುಮಂತಯ್ಯ, ಡಿ.ಕೆ.ಶಿವಕುಮಾರ್, ವೈ.ಎಸ್.ವಿ.ದತ್ತಾ ಹಾಗೂ ಇನ್ನಿತರ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ಜೂ.15 ರಂದು ಬೆಳಿಗ್ಗೆ 7 ಗಂಟೆಗೆ ಕುಪ್ಪಳಿಯ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಈ 20 ಕಿ.ಮೀ.ಗಳ ಪಯಣ ಆರಂಭವಾಗಲಿದೆ. ಮಧ್ಯಾಹ್ನದ ನಂತರ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸಾರ್ವಜನಿಕ ಸಭೆ ಜರಗಲಿದೆ ಎಂದು ಮಾಜಿ ಸಚಿವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....