Homeಕರ್ನಾಟಕರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

ರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಕರ್ನಾಟಕದ ಮಕ್ಕಳ ಭವಿಷ್ಯವನ್ನು ಕಸಿದುಕೊಂಡಿದ್ದಾರೆ ಎಂದು ‘ಬಹುತ್ವ ಕರ್ನಾಟಕ’ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು ಎಂದು ವೇದಿಕೆ ಸೋಮವಾರ ಆಗ್ರಹಿಸಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ಬಹುತ್ವ ಕರ್ನಾಟಕ’ ವೇದಿಕೆಯು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂಬ ಒತ್ತಾಯಕ್ಕೆ 6 ಕಾರಣಗಳನ್ನು ನೀಡಿದೆ. ಸಚಿವರು ತಮ್ಮ ಪಾತ್ರವನ್ನು ಸಕ್ರಿಯವಾಗಿ ಪಾಲಿಸಲು ವಿಫಲರಾಗಿದ್ದು, ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಅದು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿಯಿಂದಲೂ ಸತತವಾಗಿ ಮಕ್ಕಳ ಶಿಕ್ಷಣವನ್ನು ಪಣಕ್ಕೆ ಒಡ್ಡಿದ ಸಚಿವರು ರಾಜ್ಯದ ಶಿಕ್ಷಣವನ್ನು ಬಿಕ್ಕಟಿನಲ್ಲಿ ಸಿಲುಕಿಸಿದ್ದಾರೆ. ಹಾಗೆಯೇ ಅಪೌಷ್ಠಿಕಾಂಶ ಮಟ್ಟ ಹೆಚ್ಚುತ್ತಿದ್ದರೂ ಅದನ್ನು ನಿಯಂತ್ರಿಸಲು ಯಾವುದೇ ಕ್ರಮವನ್ನು ತೆಗೆದುಕೊಂಡಿರುವುದಿಲ್ಲ ಮತ್ತು ಶಿಕ್ಷಣವನ್ನು ಬ್ರಾಹ್ಮಣವಾದಿ ಹಿಡಿತಕ್ಕೆ ಸಿಲುಕಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಬಹುತ್ವ ಕರ್ನಾಟಕ ಆಕ್ರೊಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರೂ ಟಾರ್ಗೆಟ್‌?

ಸಚಿವರ ರಾಜೀನಾಮೆಗೆ ‘ಬಹುತ್ವ ಕರ್ನಾಟಕ’ ನೀಡಿರುವ ಕಾರಣಗಳು:

  • ಕೋವಿಡ್‌ -19 ಶಿಕ್ಷಣದ ಮೇಲೆ ಬೀರಿದೆ ಪರಿಣಾಮವನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    ಕೋವಿಡ್‌ – 19 ತಡೆಗಟ್ಟಲು ಜಾರಿಗೊಳಿಸಿದ್ದ ಲಾಕ್‌ ಡೌನ್‌ ಸಮಯದಲ್ಲಿ ಲಕ್ನಾ೦ತರ ಮಕ್ಕಳು ಎರಡು ವರ್ಷದ ಶಿಕ್ಷಣವನ್ನು ಕಳೆದುಕೂಂಡಿದ್ದಾರೆ. ಈ ಕಾರಣ ಹಲವಾರು ಮಕ್ಕಳು ಶಿಕ್ಷಣಕ್ಕೆ ತಿಲಾಂಜಲಿ ನೀಡುವ ಪರಿಸ್ಥಿತಿಗೆ ನೂಕಲಾಗಿದೆ ಮತ್ತು ಇಂತಹ ಮಕ್ಕಳನ್ನು ಶಾಲೆಗಳಿಗೆ ವಾಪಸ್ಸು ಕರೆತರಲು ಯಾವುದೇ ರೀತಿಯ ಕ್ರಮವನ್ನು ಜರುಗಿಸಿರುವುದಿಲ್ಲ. ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸದೆ ಸರ್ಕಾರವು ತನ್ನ ಜವಾಬ್ದಾರಿಗಳನ್ನು ಕೈಬಿಟ್ಟಂತಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಸಾವಿರಾರು ಮಕ್ಕಳು ಶಾಲೆಯನ್ನು ಬಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಒದಗಿಸಲು ಸರ್ಕಾರವು ವಿಫಲವಾಗಿದೆ. ಈ ಮಕ್ಕಳ ಕಲಿಕೆಗೆ ಧಕ್ಕೆ ಉಂಟಾಗುವುದಿಲ್ಲವೇ?
    ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಶಿಕ್ಷಕಿಯರನ್ನು ನೇಮಿಸಬೇಕೆಂದು ಇದ್ದರೂ, ಶಿಕ್ಷಕಿಯರ, ಆಡಳಿತ ಸಿಬ್ಬಂದಿಗಳ ನೇಮಕಾತಿ ಮಾಡದೆ, ಮಕ್ಕಳಿಗೆ ದೊರಕುವ ಕಲಿಯುವಿಕೆಗೆ ಧಕ್ಕೆ ಉ೦ಟು ಮಾಡಲಾಗಿದೆ. ಸರ್ಕಾರವು ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
  • ಅಪೌಷ್ಠಿಕತೆಯನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    5ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಶೇಖಡಾ 35.4 ಮಕ್ಕಳು ಕುಂಠಿತವಾಗಿದ್ದಾರೆ ಮತ್ತು ಶೇಖಡಾ 32.9 ಮಕ್ಕಳು ಕಡಿಮೆ ತೂಕ ಹೊಂದಿರುತ್ತಾರೆ ಎಂದು ವರದಿ ಆಗಿದೆ. ಇದನ್ನು ತಡೆಗಟ್ಟಲು ಮಕ್ಕಳಿಗೆ ಪ್ರತಿ ದಿನ ಮೊಟ್ಟೆ ನೀಡಬೇಕ೦ದು ರಾಷ್ಟ್ರೀಯ ಪೌಷ್ಠಿಕಾಂಶ ಸಂಸ್ಥೆ ಮತ್ತು ಹಲವಾರು ಪೌಷಿಕ ತಜ್ಞರು ಅಭಿಪ್ರಾಯಿಸಿದ್ದಾರೆ. ಹೀಗಿದ್ದರೂ ಸಹ ಸಚಿವ ನಾಗೇಶ್‌ ಅವರ ಸಚಿವಾಲಯವು ಅಪೌಷ್ಟಿಕ ಮಕ್ಕಳಿಗೆ ವಾರಕ್ಕೆ 5 ಬಾರಿ ಮೊಟ್ಟೆ ನೀಡುವಲ್ಲಿ ವಿಫಲರಾಗಿದ್ದಾರೆ. ಇದಕ್ಕೆ ಕಾರಣ ಧಾರ್ಮಿಕ ಗುಂಪುಗಳ ಜಾತೀಯ ಮನೋಭಾವನೆ ಒಂದೇ ಆಗಿದೆ.4ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ, ಶಾಲಾ ಮಕ್ಕಳಿಗೆ ಮೊಟ್ಟೆ ನೀಡಿದರೆ ಶೇಖಡಾ 83 ಜನರಿಗೆ ಯಾವುದೇ ರೀತಿಯ ಸಾಂಸ್ಕೃತಿಕ ಅಥವಾ ಧಾರ್ಮಿಕ ತಕರಾರು ಇರುವುದಿಲ್ಲ ಎಂದು ವರದಿ ಮಾಡಲಾಗಿದೆ. ಹೀಗಿದ್ದರೂ ಸಹ ಇಡೀ ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಸಿ ಊಟದೊಂದಿಗೆ ಮೊಟ್ಟೆ ನೀಡದಿರುವ ರಾಜ್ಯವಾಗಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

  • ಶಿಕ್ಷಣ ಹಕ್ಕಿನ ನಿರಾಕರಣೆ
    ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಉದ್ದೇಶಪೂರ್ವಕವಾಗಿ ಸರಿಯಾಗಿ ಜಾರಿಗೊಳಿಸದೆ ತಮ್ಮದೇ ಇಲಾಖೆಯ ಆದೇಶದ ತದ್ವಿರುದ್ಧವಾಗಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರನ್ನು ಅವರ ಪರೀಕ್ಷೆ ಬರೆಯದ ಹಾಗೆ ಮಾಡಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಬಹುಸಂಖ್ಯಾತ ಸಮುದಾಯದ ಯುವಕರು ಕಾನೂನನ್ನುತಮ್ಮ ಕೈಗೆತ್ತಿಕೊಂಡು ಮುಸಲ್ಮಾನ ವಿದ್ಯಾರ್ಥಿನಿಯರನ್ನು ಶಿಕ್ಷಣ ಸಂಸ್ಥೆಗಳಲ್ಲಿ ಹೀಯಾಳಿಸಿ ಕಿರುಕುಳ ನೀಡಿದ ವಿರುದ್ಧ ಯಾವುದೇ ರೀತಿಯ ಕ್ರಮ ಜರುಗಿಸುವುದರಲ್ಲಿ ವಿಫಲರಾಗಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಂಸೆ ಮತ್ತು ತಾರತಮ್ಯವನ್ನು ರೂಢಿಗತಗೊಳಿಸಲಾಗಿದೆ.ಒಂದೇ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲಾ ಧರ್ಮದ ವಿದ್ಯಾರ್ಥಿಗಳ ಮಧ್ಯೆ ಸೌಹಾರ್ದತೆಯನ್ನು ಮುರಿಯಲು ಇವರೇ ಕಾರಣರಾಗಿರುತ್ತಾರೆ. ಮುಸಲ್ಮಾನ ವಿದ್ಯಾರ್ಥಿನಿಯರನ್ನು ಸಮರ್ಥಿಸಿಕೊಂಡ ಶಿಕ್ಷಕಿಯರ ವಿರುದ್ಧ ಅಪರಾಧಿಕ ಕ್ರಮ ಜರುಗಿಸುವ ಬೆದರಿಕೆಯನ್ನು ಒಡ್ಡಲಾಗಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ವಿರುದ್ಧ ಅಮಾನತುಗೊಳಿಸುವಿಕೆ, ಹಿಂಸೆ ಮತ್ತು ಸೌಹಾರ್ದತೆ ಮುರಿಯುವ ಕಾರ್ಯ ಚಟುವಟಿಕೆಗಳು ಕಂಡುಬರುತ್ತಿವೆ ಮತ್ತು ಅಹಿತಕಾರಿ ವಾತಾವರಣವನ್ನು ಸೃಷ್ಟಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಏಕೈಕ ಸಚಿವರು ಇವರಾಗಿದ್ದಾರೆ.
  • ಪಠ್ಯಪುಸ್ತಕ ಪರಿಷ್ಕರಣೆ
    ಪಠ್ಯಪುಸ್ತಕಗಳು, ಪ್ರಜಾಪ್ರಭುತ್ವದಲ್ಲಿ ಸಕ್ರಿಯ ನಾಗರಿಕರಾಗಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
    ನೀಡಬೇಕು. ಅವೈಜ್ಞಾನಿಕ ಮತ್ತು ಜಾತಿವಾದಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ 29 ರ ಉಲ್ಲಂಘನೆಯಾಗಿದೆ. 2005 ರ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (National Curriculum Framework) ಭಾರತವು ಹಲವಾರು ಪ್ರಾದೇಶಿಕ ಮತ್ತು ಸ್ಥಳೀಯ ಸಂಸ್ಕೃತಿಗಳಿಂದ ಮಾಡಲ್ಪಟ್ಟ ಬಹುಸಂಸ್ಕೃತಿಯ ಸಮಾಜವಾಗಿದ್ದು, ಎಲ್ಲಾ ಗುಂಪುಗಳು ಸಹಬಾಳ್ವೆಯಿಂದ ಬಾಳಲು ಹಾಗು ಬೆಳೆಯಲು ಸಮಾನ ಹಕ್ಕುಗಳನ್ನು ಹೊಂದಿವೆ ಹಾಗೂ ಶಿಕ್ಷಣ ವ್ಯವಸ್ಥೆಯು ಸಾಂಸ್ಕೃತಿಕ ಬಹುತ್ವಕ್ಕೆ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳುತ್ತದೆ.ದಲಿತ ಲೇಖಕರು, ಪಿ.ಲಂಕೇಶ್‌, ಸಾರಾ ಅಬೂಬಕರ್‌ ಅವರ ಕೃತಿಗಳನ್ನು ತೆಗೆದುಹಾಕುವ ಮೂಲಕ ಮತ್ತು ಡಾ.ಅ೦ಬೇಡ್ಕರ್‌ ಮತ್ತು ಬಸವಣ್ಣ ಅವರಿಗೆ ಸಂಬಂಧಿಸಿದ ಐತಿಹಾಸಿಕ ಸಂಗತಿಗಳನ್ನು ತಿರುಚಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಎನ್‌ಸಿಎಫ್‌ ಮತ್ತು ಆರ್‌ಟಿಇ ಕಾಯ್ದೆಯನ್ನು ಉಲ್ಲಂಘಿಸುತ್ತದೆ.

ಇದನ್ನೂ ಓದಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ಬಿಜೆಪಿಯ ವಿನಯ್‌ ಬಿದರೆ ಸಮರ್ಥನೆ

  • ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬ
    ಸಚಿವ ನಾಗೇಶ್‌ ಅವರು ಶೈಕ್ಷಣಿಕ ವರ್ಷದಲ್ಲಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ಪಠ್ಯಪುಸ್ತಕಗಳ ವಿತರಣೆಯನ್ನು ವಿಳಂಬಗೊಳಿಸಿದ್ದಾರೆ. ಇದು 2023 ರಲ್ಲಿ ತಮ್ಮ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಬೀರುವ ದುಷ್ಪರಿಣಾಮಗಳನ್ನು ಕಾಳಜಿ ವಹಿಸಿಲ್ಲ.
  • ಸಾಂವಿಧಾನಿಕ ಪ್ರತಿಜ್ಞೆಯನ್ನು ಅನುಸರಿಸಲು ವಿಫಲತೆ
    ಭಾರತದ ಸಂವಿಧಾನದ ಮೌಲ್ಯಗಳಿಗೆ ನಂಬಿಕೆಯಿರಿಸಿ ಅದರಂತೆ ನಡೆದುಕೊಳ್ಳುವರೆಂದು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಆರ್‌ಟಿಇ ಕಾಯಿದೆಗೆ ಬದ್ಧವಾಗದೆ, ಯುವ ವಿದ್ಯಾರ್ಥಿಗಳಿಗೆ ನಿರ್ಣಾಯಕ ಪೋಷಕಾಂಶಗಳನ್ನು ನಿರಾಕರಿಸುವ ಮೂಲಕ ಮತ್ತು ಶೈಕ್ಷಣಿಕ ಜಾಗದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಹೊರಗಿಡುವ ಮೂಲಕ, ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಅರ್ಥ್ಯಸುವ ಮೂಲಕ ಬಿ.ಸಿ.ನಾಗೇಶ್‌‌ ಅವರು ಸಂವಿಧಾನದ ಆಶಯಗಳಿಗೆ, ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಅವರ ಪ್ರಮಾಣ ವಚನದ ಉಲ್ಲಂಘನೆಯಾಗಿದೆ.

ಬಹುತ್ವ ಕರ್ನಾಟಕದ ಒತ್ತಾಯಗಳು

  • ಸಚಿವ ಬಿ ಸಿ ನಾಗೇಶ್‌ ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು.
  • ಸರ್ಕಾರವು ಎಲ್ಲಾ ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ವಾರದಲ್ಲಿ 5 ದಿನ ಮೊಟ್ಟೆಗಳನ್ನು ನೀಡಬೇಕು.
  • ಎಲ್ಲಾ ಮಕ್ಕಳು ಶಾಲೆಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ವಿಶೇಷ ಕ್ರಮಗಳನ್ನು ಜಾರಿಗೊಳಿಸಬೇಕು ಮತ್ತು ಕಲಿಕೆಯ ಅಂತರವನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡಿನಂತೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು.

ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

  • ಮುಸ್ಲಿಂ ವಿದ್ಯಾರ್ಥಿನಿಯರು ಕಿರುಕುಳಕ್ಕೆ ಒಳಗಾಗದಂತೆ ಮತ್ತು ಅವರ ಶಿಕ್ಷಣದ ಹಕ್ಕು ಮತ್ತು ಇತರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಬೇಕು.
  • ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿ೦ಂಪಡಯಬೇಕು ಮತ್ತು ಹಳೆಯ ಪಠ್ಯಪುಸ್ತಕಗಳನ್ನು ತಕ್ಷಣವೇ ನೀಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...