Homeಕರ್ನಾಟಕರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

ರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಕರ್ನಾಟಕದ ಮಕ್ಕಳ ಭವಿಷ್ಯವನ್ನು ಕಸಿದುಕೊಂಡಿದ್ದಾರೆ ಎಂದು ‘ಬಹುತ್ವ ಕರ್ನಾಟಕ’ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು ಎಂದು ವೇದಿಕೆ ಸೋಮವಾರ ಆಗ್ರಹಿಸಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ಬಹುತ್ವ ಕರ್ನಾಟಕ’ ವೇದಿಕೆಯು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂಬ ಒತ್ತಾಯಕ್ಕೆ 6 ಕಾರಣಗಳನ್ನು ನೀಡಿದೆ. ಸಚಿವರು ತಮ್ಮ ಪಾತ್ರವನ್ನು ಸಕ್ರಿಯವಾಗಿ ಪಾಲಿಸಲು ವಿಫಲರಾಗಿದ್ದು, ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಅದು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿಯಿಂದಲೂ ಸತತವಾಗಿ ಮಕ್ಕಳ ಶಿಕ್ಷಣವನ್ನು ಪಣಕ್ಕೆ ಒಡ್ಡಿದ ಸಚಿವರು ರಾಜ್ಯದ ಶಿಕ್ಷಣವನ್ನು ಬಿಕ್ಕಟಿನಲ್ಲಿ ಸಿಲುಕಿಸಿದ್ದಾರೆ. ಹಾಗೆಯೇ ಅಪೌಷ್ಠಿಕಾಂಶ ಮಟ್ಟ ಹೆಚ್ಚುತ್ತಿದ್ದರೂ ಅದನ್ನು ನಿಯಂತ್ರಿಸಲು ಯಾವುದೇ ಕ್ರಮವನ್ನು ತೆಗೆದುಕೊಂಡಿರುವುದಿಲ್ಲ ಮತ್ತು ಶಿಕ್ಷಣವನ್ನು ಬ್ರಾಹ್ಮಣವಾದಿ ಹಿಡಿತಕ್ಕೆ ಸಿಲುಕಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಬಹುತ್ವ ಕರ್ನಾಟಕ ಆಕ್ರೊಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರೂ ಟಾರ್ಗೆಟ್‌?

ಸಚಿವರ ರಾಜೀನಾಮೆಗೆ ‘ಬಹುತ್ವ ಕರ್ನಾಟಕ’ ನೀಡಿರುವ ಕಾರಣಗಳು:

  • ಕೋವಿಡ್‌ -19 ಶಿಕ್ಷಣದ ಮೇಲೆ ಬೀರಿದೆ ಪರಿಣಾಮವನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    ಕೋವಿಡ್‌ – 19 ತಡೆಗಟ್ಟಲು ಜಾರಿಗೊಳಿಸಿದ್ದ ಲಾಕ್‌ ಡೌನ್‌ ಸಮಯದಲ್ಲಿ ಲಕ್ನಾ೦ತರ ಮಕ್ಕಳು ಎರಡು ವರ್ಷದ ಶಿಕ್ಷಣವನ್ನು ಕಳೆದುಕೂಂಡಿದ್ದಾರೆ. ಈ ಕಾರಣ ಹಲವಾರು ಮಕ್ಕಳು ಶಿಕ್ಷಣಕ್ಕೆ ತಿಲಾಂಜಲಿ ನೀಡುವ ಪರಿಸ್ಥಿತಿಗೆ ನೂಕಲಾಗಿದೆ ಮತ್ತು ಇಂತಹ ಮಕ್ಕಳನ್ನು ಶಾಲೆಗಳಿಗೆ ವಾಪಸ್ಸು ಕರೆತರಲು ಯಾವುದೇ ರೀತಿಯ ಕ್ರಮವನ್ನು ಜರುಗಿಸಿರುವುದಿಲ್ಲ. ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸದೆ ಸರ್ಕಾರವು ತನ್ನ ಜವಾಬ್ದಾರಿಗಳನ್ನು ಕೈಬಿಟ್ಟಂತಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಸಾವಿರಾರು ಮಕ್ಕಳು ಶಾಲೆಯನ್ನು ಬಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಒದಗಿಸಲು ಸರ್ಕಾರವು ವಿಫಲವಾಗಿದೆ. ಈ ಮಕ್ಕಳ ಕಲಿಕೆಗೆ ಧಕ್ಕೆ ಉಂಟಾಗುವುದಿಲ್ಲವೇ?
    ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಶಿಕ್ಷಕಿಯರನ್ನು ನೇಮಿಸಬೇಕೆಂದು ಇದ್ದರೂ, ಶಿಕ್ಷಕಿಯರ, ಆಡಳಿತ ಸಿಬ್ಬಂದಿಗಳ ನೇಮಕಾತಿ ಮಾಡದೆ, ಮಕ್ಕಳಿಗೆ ದೊರಕುವ ಕಲಿಯುವಿಕೆಗೆ ಧಕ್ಕೆ ಉ೦ಟು ಮಾಡಲಾಗಿದೆ. ಸರ್ಕಾರವು ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
  • ಅಪೌಷ್ಠಿಕತೆಯನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    5ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಶೇಖಡಾ 35.4 ಮಕ್ಕಳು ಕುಂಠಿತವಾಗಿದ್ದಾರೆ ಮತ್ತು ಶೇಖಡಾ 32.9 ಮಕ್ಕಳು ಕಡಿಮೆ ತೂಕ ಹೊಂದಿರುತ್ತಾರೆ ಎಂದು ವರದಿ ಆಗಿದೆ. ಇದನ್ನು ತಡೆಗಟ್ಟಲು ಮಕ್ಕಳಿಗೆ ಪ್ರತಿ ದಿನ ಮೊಟ್ಟೆ ನೀಡಬೇಕ೦ದು ರಾಷ್ಟ್ರೀಯ ಪೌಷ್ಠಿಕಾಂಶ ಸಂಸ್ಥೆ ಮತ್ತು ಹಲವಾರು ಪೌಷಿಕ ತಜ್ಞರು ಅಭಿಪ್ರಾಯಿಸಿದ್ದಾರೆ. ಹೀಗಿದ್ದರೂ ಸಹ ಸಚಿವ ನಾಗೇಶ್‌ ಅವರ ಸಚಿವಾಲಯವು ಅಪೌಷ್ಟಿಕ ಮಕ್ಕಳಿಗೆ ವಾರಕ್ಕೆ 5 ಬಾರಿ ಮೊಟ್ಟೆ ನೀಡುವಲ್ಲಿ ವಿಫಲರಾಗಿದ್ದಾರೆ. ಇದಕ್ಕೆ ಕಾರಣ ಧಾರ್ಮಿಕ ಗುಂಪುಗಳ ಜಾತೀಯ ಮನೋಭಾವನೆ ಒಂದೇ ಆಗಿದೆ.4ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ, ಶಾಲಾ ಮಕ್ಕಳಿಗೆ ಮೊಟ್ಟೆ ನೀಡಿದರೆ ಶೇಖಡಾ 83 ಜನರಿಗೆ ಯಾವುದೇ ರೀತಿಯ ಸಾಂಸ್ಕೃತಿಕ ಅಥವಾ ಧಾರ್ಮಿಕ ತಕರಾರು ಇರುವುದಿಲ್ಲ ಎಂದು ವರದಿ ಮಾಡಲಾಗಿದೆ. ಹೀಗಿದ್ದರೂ ಸಹ ಇಡೀ ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಸಿ ಊಟದೊಂದಿಗೆ ಮೊಟ್ಟೆ ನೀಡದಿರುವ ರಾಜ್ಯವಾಗಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

  • ಶಿಕ್ಷಣ ಹಕ್ಕಿನ ನಿರಾಕರಣೆ
    ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಉದ್ದೇಶಪೂರ್ವಕವಾಗಿ ಸರಿಯಾಗಿ ಜಾರಿಗೊಳಿಸದೆ ತಮ್ಮದೇ ಇಲಾಖೆಯ ಆದೇಶದ ತದ್ವಿರುದ್ಧವಾಗಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರನ್ನು ಅವರ ಪರೀಕ್ಷೆ ಬರೆಯದ ಹಾಗೆ ಮಾಡಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಬಹುಸಂಖ್ಯಾತ ಸಮುದಾಯದ ಯುವಕರು ಕಾನೂನನ್ನುತಮ್ಮ ಕೈಗೆತ್ತಿಕೊಂಡು ಮುಸಲ್ಮಾನ ವಿದ್ಯಾರ್ಥಿನಿಯರನ್ನು ಶಿಕ್ಷಣ ಸಂಸ್ಥೆಗಳಲ್ಲಿ ಹೀಯಾಳಿಸಿ ಕಿರುಕುಳ ನೀಡಿದ ವಿರುದ್ಧ ಯಾವುದೇ ರೀತಿಯ ಕ್ರಮ ಜರುಗಿಸುವುದರಲ್ಲಿ ವಿಫಲರಾಗಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಂಸೆ ಮತ್ತು ತಾರತಮ್ಯವನ್ನು ರೂಢಿಗತಗೊಳಿಸಲಾಗಿದೆ.ಒಂದೇ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲಾ ಧರ್ಮದ ವಿದ್ಯಾರ್ಥಿಗಳ ಮಧ್ಯೆ ಸೌಹಾರ್ದತೆಯನ್ನು ಮುರಿಯಲು ಇವರೇ ಕಾರಣರಾಗಿರುತ್ತಾರೆ. ಮುಸಲ್ಮಾನ ವಿದ್ಯಾರ್ಥಿನಿಯರನ್ನು ಸಮರ್ಥಿಸಿಕೊಂಡ ಶಿಕ್ಷಕಿಯರ ವಿರುದ್ಧ ಅಪರಾಧಿಕ ಕ್ರಮ ಜರುಗಿಸುವ ಬೆದರಿಕೆಯನ್ನು ಒಡ್ಡಲಾಗಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ವಿರುದ್ಧ ಅಮಾನತುಗೊಳಿಸುವಿಕೆ, ಹಿಂಸೆ ಮತ್ತು ಸೌಹಾರ್ದತೆ ಮುರಿಯುವ ಕಾರ್ಯ ಚಟುವಟಿಕೆಗಳು ಕಂಡುಬರುತ್ತಿವೆ ಮತ್ತು ಅಹಿತಕಾರಿ ವಾತಾವರಣವನ್ನು ಸೃಷ್ಟಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಏಕೈಕ ಸಚಿವರು ಇವರಾಗಿದ್ದಾರೆ.
  • ಪಠ್ಯಪುಸ್ತಕ ಪರಿಷ್ಕರಣೆ
    ಪಠ್ಯಪುಸ್ತಕಗಳು, ಪ್ರಜಾಪ್ರಭುತ್ವದಲ್ಲಿ ಸಕ್ರಿಯ ನಾಗರಿಕರಾಗಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
    ನೀಡಬೇಕು. ಅವೈಜ್ಞಾನಿಕ ಮತ್ತು ಜಾತಿವಾದಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ 29 ರ ಉಲ್ಲಂಘನೆಯಾಗಿದೆ. 2005 ರ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (National Curriculum Framework) ಭಾರತವು ಹಲವಾರು ಪ್ರಾದೇಶಿಕ ಮತ್ತು ಸ್ಥಳೀಯ ಸಂಸ್ಕೃತಿಗಳಿಂದ ಮಾಡಲ್ಪಟ್ಟ ಬಹುಸಂಸ್ಕೃತಿಯ ಸಮಾಜವಾಗಿದ್ದು, ಎಲ್ಲಾ ಗುಂಪುಗಳು ಸಹಬಾಳ್ವೆಯಿಂದ ಬಾಳಲು ಹಾಗು ಬೆಳೆಯಲು ಸಮಾನ ಹಕ್ಕುಗಳನ್ನು ಹೊಂದಿವೆ ಹಾಗೂ ಶಿಕ್ಷಣ ವ್ಯವಸ್ಥೆಯು ಸಾಂಸ್ಕೃತಿಕ ಬಹುತ್ವಕ್ಕೆ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳುತ್ತದೆ.ದಲಿತ ಲೇಖಕರು, ಪಿ.ಲಂಕೇಶ್‌, ಸಾರಾ ಅಬೂಬಕರ್‌ ಅವರ ಕೃತಿಗಳನ್ನು ತೆಗೆದುಹಾಕುವ ಮೂಲಕ ಮತ್ತು ಡಾ.ಅ೦ಬೇಡ್ಕರ್‌ ಮತ್ತು ಬಸವಣ್ಣ ಅವರಿಗೆ ಸಂಬಂಧಿಸಿದ ಐತಿಹಾಸಿಕ ಸಂಗತಿಗಳನ್ನು ತಿರುಚಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಎನ್‌ಸಿಎಫ್‌ ಮತ್ತು ಆರ್‌ಟಿಇ ಕಾಯ್ದೆಯನ್ನು ಉಲ್ಲಂಘಿಸುತ್ತದೆ.

ಇದನ್ನೂ ಓದಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ಬಿಜೆಪಿಯ ವಿನಯ್‌ ಬಿದರೆ ಸಮರ್ಥನೆ

  • ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬ
    ಸಚಿವ ನಾಗೇಶ್‌ ಅವರು ಶೈಕ್ಷಣಿಕ ವರ್ಷದಲ್ಲಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ಪಠ್ಯಪುಸ್ತಕಗಳ ವಿತರಣೆಯನ್ನು ವಿಳಂಬಗೊಳಿಸಿದ್ದಾರೆ. ಇದು 2023 ರಲ್ಲಿ ತಮ್ಮ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಬೀರುವ ದುಷ್ಪರಿಣಾಮಗಳನ್ನು ಕಾಳಜಿ ವಹಿಸಿಲ್ಲ.
  • ಸಾಂವಿಧಾನಿಕ ಪ್ರತಿಜ್ಞೆಯನ್ನು ಅನುಸರಿಸಲು ವಿಫಲತೆ
    ಭಾರತದ ಸಂವಿಧಾನದ ಮೌಲ್ಯಗಳಿಗೆ ನಂಬಿಕೆಯಿರಿಸಿ ಅದರಂತೆ ನಡೆದುಕೊಳ್ಳುವರೆಂದು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಆರ್‌ಟಿಇ ಕಾಯಿದೆಗೆ ಬದ್ಧವಾಗದೆ, ಯುವ ವಿದ್ಯಾರ್ಥಿಗಳಿಗೆ ನಿರ್ಣಾಯಕ ಪೋಷಕಾಂಶಗಳನ್ನು ನಿರಾಕರಿಸುವ ಮೂಲಕ ಮತ್ತು ಶೈಕ್ಷಣಿಕ ಜಾಗದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಹೊರಗಿಡುವ ಮೂಲಕ, ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಅರ್ಥ್ಯಸುವ ಮೂಲಕ ಬಿ.ಸಿ.ನಾಗೇಶ್‌‌ ಅವರು ಸಂವಿಧಾನದ ಆಶಯಗಳಿಗೆ, ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಅವರ ಪ್ರಮಾಣ ವಚನದ ಉಲ್ಲಂಘನೆಯಾಗಿದೆ.

ಬಹುತ್ವ ಕರ್ನಾಟಕದ ಒತ್ತಾಯಗಳು

  • ಸಚಿವ ಬಿ ಸಿ ನಾಗೇಶ್‌ ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು.
  • ಸರ್ಕಾರವು ಎಲ್ಲಾ ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ವಾರದಲ್ಲಿ 5 ದಿನ ಮೊಟ್ಟೆಗಳನ್ನು ನೀಡಬೇಕು.
  • ಎಲ್ಲಾ ಮಕ್ಕಳು ಶಾಲೆಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ವಿಶೇಷ ಕ್ರಮಗಳನ್ನು ಜಾರಿಗೊಳಿಸಬೇಕು ಮತ್ತು ಕಲಿಕೆಯ ಅಂತರವನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡಿನಂತೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು.

ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

  • ಮುಸ್ಲಿಂ ವಿದ್ಯಾರ್ಥಿನಿಯರು ಕಿರುಕುಳಕ್ಕೆ ಒಳಗಾಗದಂತೆ ಮತ್ತು ಅವರ ಶಿಕ್ಷಣದ ಹಕ್ಕು ಮತ್ತು ಇತರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಬೇಕು.
  • ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿ೦ಂಪಡಯಬೇಕು ಮತ್ತು ಹಳೆಯ ಪಠ್ಯಪುಸ್ತಕಗಳನ್ನು ತಕ್ಷಣವೇ ನೀಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...