Homeಮುಖಪುಟತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

- Advertisement -
- Advertisement -

ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಇಚ್ಛೆಗೆ ವಿರೋಧವಾಗಿ ಐದು ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ತಂಗಿ-ಬಾವನನ್ನು ಮನೆಗೆ ಊಟಕ್ಕೆ ಕರೆದ ಅಣ್ಣ ಇಬ್ಬರನ್ನು ಹತ್ಯೆ ಮಾಡಿರುವ ಪ್ರಕರಣ ಕುಂಭಕೋಣಂ ಬಳಿ ನಡೆದಿದೆ.

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂನಲ್ಲಿ ಸೋಮವಾರ ಸಂಜೆ ಈ ಭೀಕರ ಕೃತ್ಯ ನಡೆದಿದೆ. 24 ವರ್ಷದ ಶರಣ್ಯ ಮತ್ತು 31 ವರ್ಷದ ಆಕೆಯ ಪತಿ ಮೋಹನ್ ಮೃತರು. ತನಗೆ ಇಷ್ಟ ಇಲ್ಲದವರನ್ನು ಮದುವೆಯಾದ ಕಾರಣಕ್ಕೆ ಅಣ್ಣನೇ ಇಬ್ಬರನ್ನು ಕೊಂದಿದ್ದು, ಚೋಳಪುರಂ ಪೊಲೀಸರು ಮೃತಳ ಅಣ್ಣ ಮತ್ತು ಸಂಬಂಧಿಯನ್ನು ಬಂಧಿಸಿದ್ದಾರೆ.

ದಲಿತ ಮಹಿಳೆಯಾಗಿರುವ ಯುವತಿ ಶರಣ್ಯ, ನಾಯ್ಕರ್ ಜಾತಿಗೆ ಸೇರಿದ್ದ ಮೋಹನ್ ಎಂಬಾತನನ್ನು ಐದು ತಿಂಗಳಿಂದ ಪ್ರೀತಿಸಿ ಮದುವೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿಯನ್ನು ಚೆನ್ನೈನ ಆಸ್ಪತ್ರೆಗೆ ಕರೆ ತಂದಿದ್ದ ಮೋಹನ್, ಅಲ್ಲೇ ನರ್ಸ್‌ ಆಗಿರುವ ಶರಣ್ಯ ಅವರನ್ನು ಭೇಟಿಯಾಗಿದ್ದರು. ಅಲ್ಲಿ ಅವರಿಬ್ಬರಿಗೂ ಪರಿಚಯವಾಗಿ, ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಆದರೆ ಎರಡೂ ಮನೆಯವರು ಇವರ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ನಡುವೆ ಇಬ್ಬರು ಮದುವೆಯಾಗಿದ್ದರು.

ಇದನ್ನೂ ಓದಿ: ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಶರಣ್ಯ ಅವರ ಅಣ್ಣ 31 ವರ್ಷದ ಶಕ್ತಿವೇಲ್‌ಗೆ ತನ್ನ ತಂಗಿಯನ್ನು ಸ್ನೇಹಿತ ಮತ್ತು ಸೋದರ ಮಾವ ದೇವನಗಿರಿಯ 28 ವರ್ಷದ ರಂಜಿತ್‌ನೊಂದಿಗೆ ಮದುವೆ ಮಾಡುವ ಆಸೆಯಿತ್ತು. ಇದನ್ನು ಇತ್ತೀಚೆಗೆ ಶರಣ್ಯ ಅವರಿಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಶರಣ್ಯ ಮತ್ತು ಮೋಹನ್ ಕಳೆದ ವಾರ ಚೆನ್ನೈನಲ್ಲಿ ಮದುವೆಯಾಗಿದ್ದು, ಮನೆಯವರಿಗೆ ದೂರವಾಣಿ ಮೂಲಕ ಸುದ್ದಿ ಮುಟ್ಟಿಸಿದ್ದಾರೆ.

ಇದನ್ನು ಕೇಳಿದ ಶಕ್ತಿವೇಲ್, ಮದುವೆಗೆ ತನ್ನ ಒಪ್ಪಿಗೆ ಇದೆ ಎಂದು ಹೇಳಿ ದಂಪತಿಯನ್ನು ಊಟಕ್ಕೆಂದು ಮನೆಗೆ ಆಹ್ವಾನಿಸಿದ್ದಾರೆ. ಸೋಮವಾರ ತುಳುಕ್ಕವೇಲಿಗೆ ಆಗಮಿಸಿ ಊಟ ಮುಗಿಸಿ, ಚೆನ್ನೈಗೆ ಮರಳಲು ತಯಾರಾಗುತ್ತಿದ್ದಂತೆ ಶಕ್ತಿವೇಲ್ ಮತ್ತು ರಂಜಿತ್ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಪೊಲೀಸರು ಶವಗಳನ್ನು ಮನೆಯಿಂದ ಹೊರತೆಗೆದಿದ್ದಾರೆ.

ಘಟನೆ ಬಳಿಕ ಶಕ್ತಿವೇಲ್ ಮತ್ತು ರಂಜಿತ್ ಸ್ಥಳದಿಂದ ಓಡಿಹೋಗಿದ್ದರು, ಆದರೆ ಅವರನ್ನು ಕುಂಭಕೋಣಂ ಬಸ್ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸದ್ಯ ಆರೋಪಿಗಳಾದ ಶಕ್ತಿವೇಲ್ ಮತ್ತು ರಂಜಿತ್ ಇಬ್ಬರೂ ಪೊಲೀಸ್ ವಶದಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರತ್ಯಕ್ಷದರ್ಶಿಗಳು, ಸಂಬಂಧಿಕರು ಮತ್ತು ಸ್ನೇಹಿತರು ಮತ್ತು ಸ್ಥಳೀಯರಿಂದ ಮಾಹಿತಿ ಪಡೆದ ನಂತರ ವಿವರವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಂಜಾವೂರು ಪೊಲೀಸ್ ವರಿಷ್ಠಾಧಿಕಾರಿ ಜಿ.ರವಳಿ ಪ್ರಿಯಾ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...