Homeಮುಖಪುಟತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

- Advertisement -
- Advertisement -

ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಇಚ್ಛೆಗೆ ವಿರೋಧವಾಗಿ ಐದು ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ತಂಗಿ-ಬಾವನನ್ನು ಮನೆಗೆ ಊಟಕ್ಕೆ ಕರೆದ ಅಣ್ಣ ಇಬ್ಬರನ್ನು ಹತ್ಯೆ ಮಾಡಿರುವ ಪ್ರಕರಣ ಕುಂಭಕೋಣಂ ಬಳಿ ನಡೆದಿದೆ.

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂನಲ್ಲಿ ಸೋಮವಾರ ಸಂಜೆ ಈ ಭೀಕರ ಕೃತ್ಯ ನಡೆದಿದೆ. 24 ವರ್ಷದ ಶರಣ್ಯ ಮತ್ತು 31 ವರ್ಷದ ಆಕೆಯ ಪತಿ ಮೋಹನ್ ಮೃತರು. ತನಗೆ ಇಷ್ಟ ಇಲ್ಲದವರನ್ನು ಮದುವೆಯಾದ ಕಾರಣಕ್ಕೆ ಅಣ್ಣನೇ ಇಬ್ಬರನ್ನು ಕೊಂದಿದ್ದು, ಚೋಳಪುರಂ ಪೊಲೀಸರು ಮೃತಳ ಅಣ್ಣ ಮತ್ತು ಸಂಬಂಧಿಯನ್ನು ಬಂಧಿಸಿದ್ದಾರೆ.

ದಲಿತ ಮಹಿಳೆಯಾಗಿರುವ ಯುವತಿ ಶರಣ್ಯ, ನಾಯ್ಕರ್ ಜಾತಿಗೆ ಸೇರಿದ್ದ ಮೋಹನ್ ಎಂಬಾತನನ್ನು ಐದು ತಿಂಗಳಿಂದ ಪ್ರೀತಿಸಿ ಮದುವೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿಯನ್ನು ಚೆನ್ನೈನ ಆಸ್ಪತ್ರೆಗೆ ಕರೆ ತಂದಿದ್ದ ಮೋಹನ್, ಅಲ್ಲೇ ನರ್ಸ್‌ ಆಗಿರುವ ಶರಣ್ಯ ಅವರನ್ನು ಭೇಟಿಯಾಗಿದ್ದರು. ಅಲ್ಲಿ ಅವರಿಬ್ಬರಿಗೂ ಪರಿಚಯವಾಗಿ, ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಆದರೆ ಎರಡೂ ಮನೆಯವರು ಇವರ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ನಡುವೆ ಇಬ್ಬರು ಮದುವೆಯಾಗಿದ್ದರು.

ಇದನ್ನೂ ಓದಿ: ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಶರಣ್ಯ ಅವರ ಅಣ್ಣ 31 ವರ್ಷದ ಶಕ್ತಿವೇಲ್‌ಗೆ ತನ್ನ ತಂಗಿಯನ್ನು ಸ್ನೇಹಿತ ಮತ್ತು ಸೋದರ ಮಾವ ದೇವನಗಿರಿಯ 28 ವರ್ಷದ ರಂಜಿತ್‌ನೊಂದಿಗೆ ಮದುವೆ ಮಾಡುವ ಆಸೆಯಿತ್ತು. ಇದನ್ನು ಇತ್ತೀಚೆಗೆ ಶರಣ್ಯ ಅವರಿಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಶರಣ್ಯ ಮತ್ತು ಮೋಹನ್ ಕಳೆದ ವಾರ ಚೆನ್ನೈನಲ್ಲಿ ಮದುವೆಯಾಗಿದ್ದು, ಮನೆಯವರಿಗೆ ದೂರವಾಣಿ ಮೂಲಕ ಸುದ್ದಿ ಮುಟ್ಟಿಸಿದ್ದಾರೆ.

ಇದನ್ನು ಕೇಳಿದ ಶಕ್ತಿವೇಲ್, ಮದುವೆಗೆ ತನ್ನ ಒಪ್ಪಿಗೆ ಇದೆ ಎಂದು ಹೇಳಿ ದಂಪತಿಯನ್ನು ಊಟಕ್ಕೆಂದು ಮನೆಗೆ ಆಹ್ವಾನಿಸಿದ್ದಾರೆ. ಸೋಮವಾರ ತುಳುಕ್ಕವೇಲಿಗೆ ಆಗಮಿಸಿ ಊಟ ಮುಗಿಸಿ, ಚೆನ್ನೈಗೆ ಮರಳಲು ತಯಾರಾಗುತ್ತಿದ್ದಂತೆ ಶಕ್ತಿವೇಲ್ ಮತ್ತು ರಂಜಿತ್ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಪೊಲೀಸರು ಶವಗಳನ್ನು ಮನೆಯಿಂದ ಹೊರತೆಗೆದಿದ್ದಾರೆ.

ಘಟನೆ ಬಳಿಕ ಶಕ್ತಿವೇಲ್ ಮತ್ತು ರಂಜಿತ್ ಸ್ಥಳದಿಂದ ಓಡಿಹೋಗಿದ್ದರು, ಆದರೆ ಅವರನ್ನು ಕುಂಭಕೋಣಂ ಬಸ್ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸದ್ಯ ಆರೋಪಿಗಳಾದ ಶಕ್ತಿವೇಲ್ ಮತ್ತು ರಂಜಿತ್ ಇಬ್ಬರೂ ಪೊಲೀಸ್ ವಶದಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರತ್ಯಕ್ಷದರ್ಶಿಗಳು, ಸಂಬಂಧಿಕರು ಮತ್ತು ಸ್ನೇಹಿತರು ಮತ್ತು ಸ್ಥಳೀಯರಿಂದ ಮಾಹಿತಿ ಪಡೆದ ನಂತರ ವಿವರವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಂಜಾವೂರು ಪೊಲೀಸ್ ವರಿಷ್ಠಾಧಿಕಾರಿ ಜಿ.ರವಳಿ ಪ್ರಿಯಾ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...