Homeಮುಖಪುಟಎನ್‌ಸಿಪಿ ನಾಯಕ ಶರದ್ ಪವಾರ್‌ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ: ವರದಿ

ಎನ್‌ಸಿಪಿ ನಾಯಕ ಶರದ್ ಪವಾರ್‌ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ: ವರದಿ

- Advertisement -
- Advertisement -

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಎನ್‌ಸಿಪಿ ನಾಯಕ ಶರದ್ ಪವಾರ್ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಹಲವು ವಿರೋಧ ಪಕ್ಷಗಳ ಬೆಂಬಲದ ನಡುವೆಯೂ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸುವ ಸಾಧ್ಯತೆಯಿದೆ.

ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ತಮ್ಮ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಭೆಯಲ್ಲಿ 81 ವರ್ಷದ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು “ನಾನು ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ” ಎಂದಿದ್ದಾರೆ ಎಂದು ವರದಿಯಾಗಿದೆ. ಆದರೆ, ಅಧಿಕೃತವಾಗಿ ಕಾಂಗ್ರೆಸ್‌ಗೆ ತಮ್ಮ ನಿಲುವನ್ನು ತಿಳಿಸಿಲ್ಲ.

“ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆಂದು ನನಗೆ ಅನಿಸುತ್ತಿಲ್ಲ. ಸಾಹೇಬ್ (ಶರದ್ ಪವಾರ್) ಜನರನ್ನು ಭೇಟಿಯಾಗಲು ಇಷ್ಟಪಡುವ ವ್ಯಕ್ತಿ. ಅವರು ರಾಷ್ಟ್ರಪತಿ ಭವನಕ್ಕೆ ತಮ್ಮನ್ನು ತಾವು ಸೀಮಿತಗೊಳಿಸಿಕೊಳ್ಳುವುದಿಲ್ಲ” ಎಂದು ಮಹಾರಾಷ್ಟ್ರ ಸರ್ಕಾರದ ಎನ್‌ಸಿಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಅವರಿಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎಂದು ವರದಿಯಾಗಿದೆ. ಕಳೆದ ಗುರುವಾರ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದರು. ಈ ಸಲಹೆಗೆ ಎನ್‌ಸಿಪಿ ನಾಯಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ಇದಾಗಿ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ಅವರು ಅನೇಕ ಮೈತ್ರಿಗಳು ಮತ್ತು ಸಮ್ಮಿಶ್ರ ಸರ್ಕಾರಗಳನ್ನು ಮಾಡಿದ ಮತ್ತು ಮುರಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಬಿಜೆಪಿಯನ್ನು ವಿಫಲಗೊಳಿಸಲು ಸೈದ್ಧಾಂತಿಕ ವಿರೋಧ ಪಕ್ಷಗಳಾದ ಶಿವಸೇನೆ ಮತ್ತು ಕಾಂಗ್ರೆಸ್‌ಗಳನ್ನು ಒಟ್ಟುಗೂಡಿಸಿ ಮಹಾರಾಷ್ಟ್ರದಲ್ಲಿ ಮೈತ್ರಿ ಆಡಳಿತ ಒಕ್ಕೂಟವನ್ನು ರಚಿಸಿದ್ದಾರೆ.


ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...