Homeಮುಖಪುಟಬುಲ್ಡೋಜರ್ ಹರಿಸುವುದು ಕಾನೂನಿನ ಅಣಕ: ಸುಪ್ರೀಂ ಮಧ್ಯಪ್ರವೇಶಕ್ಕೆ ನಿವೃತ್ತ ಜಡ್ಜ್‌ಗಳ ಆಗ್ರಹ

ಬುಲ್ಡೋಜರ್ ಹರಿಸುವುದು ಕಾನೂನಿನ ಅಣಕ: ಸುಪ್ರೀಂ ಮಧ್ಯಪ್ರವೇಶಕ್ಕೆ ನಿವೃತ್ತ ಜಡ್ಜ್‌ಗಳ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಆಡಳಿತವು ಸಂವಿಧಾನವನ್ನು ಅಣಕಿಸುತ್ತಿದೆ ಎಂದು ಕಿಡಿಕಾರಿರುವ ಸುಪ್ರೀಂ ಕೋರ್ಟ್‌ನ ಮೂವರು ನಿವೃತ್ತ ನ್ಯಾಯಾಧೀಶರು ಸೇರಿದಂತೆ 12 ಜನ ಗಣ್ಯರು ಕೂಡಲೇ ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಪತ್ರ ಬರೆದಿದ್ದಾರೆ.

ಹೋರಾಟಗಾರರ ಮನೆಗಳನ್ನು ಧ್ವಂಸಗೊಳಿಸುವುದು ಈ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಸುಪ್ರೀಂ ಕೋರ್ಟ್ ಈ ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕೆಂದು ನಿವೃತ್ತ ನ್ಯಾಯಾಧೀಶರುಗಳಾದ ಜಸ್ಟೀಸ್ ಬಿ ಸುದರ್ಶನ್ ರೆಡ್ಡಿ, ವಿ ಗೋಪಾಲಗೌಡ ಮತ್ತು ಎ.ಕೆ ಗಂಗೂಲಿ ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ಮೂವರು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಮತ್ತು ಆರು ಜನ ಹಿರಿಯ ವಕೀಲರು ಸಹಿ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪೊಲೀಸರು ಮತ್ತು ನಗರ ಅಭಿವೃದ್ಧಿ ಅಧಿಕಾರಿಗಳು ಒಟ್ಟಾಗಿ ಸೇರಿ ಮನೆಗಳನ್ನು ಕೆಡವುತ್ತಿರುವುದು ಕಾನೂನು ಬಾಹಿರ ಶಿಕ್ಷೆಯಾಗಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಬಂಧಿತರ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಲಾಠಿಗಳಿಂದ ಹೊಡೆದು ಹಿಂಸಿಸಲಾಗುತ್ತಿದೆ. ಯಾವುದೇ ಪೂರ್ವ ಎಚ್ಚರಿಕೆ ನೀಡದೆ ಮನೆಗಳನ್ನು ಕೆಡವಲಾಗುತ್ತಿದೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಹಲ್ಲೆ, ದೌರ್ಜನ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಸಿಗುತ್ತಿವೆ. ಇದು ದೇಶದ ಆತ್ಮಸಾಕ್ಷಿಯ ಮೇಲಾಗುತ್ತಿರುವ ದೌರ್ಜನ್ಯ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ರವರು ನೀಡುವ ಹೇಳಿಕೆಗಳು ಮತ್ತು ಕ್ರಿಯೆಗಳು ಹೋರಾಟಗಾರರಿಗೆ ಕಿರುಕುಳ ನೀಡಲು ಪೊಲೀಸರಿಗೆ ಮಾದರಿಯಾಗುತ್ತಿವೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಈ ಹಿಂದೆ ನ್ಯಾಯಾಂಗವು “ಜನರ ಹಕ್ಕುಗಳ ಪಾಲಕನಾಗಿ ವಿಭಿನ್ನವಾಗಿ ಕೆಲಸ ಮಾಡಿದೆ. ಈಗ ಇಂತಹ ಸಂದಿಗ್ಧ ಕಾಲದಲ್ಲಿ ನ್ಯಾಯಾಂಗದ ಸ್ಥೈರ್ಯವನ್ನು ಪರೀಕ್ಷಿಸಲಾಗುತ್ತಿದೆ ಎನ್ನುವ ಮೂಲಕ ಸುಪ್ರೀಂ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಲಾಗಿದೆ.

ಪತ್ರಕ್ಕೆ ಸಹಿ ಮಾಡಿದವರಲ್ಲಿ ಭಾರತದ ಕಾನೂನು ಆಯೋಗದ ಮಾಜಿ ಅಧ್ಯಕ್ಷರು ಹಾಗೂ ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ ಶಾ, ಮದ್ರಾಸ್ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ ನ್ಯಾಯಮೂರ್ತಿ ಕೆ ಚಂದ್ರು ಮತ್ತು ಕರ್ನಾಟಕ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ ನ್ಯಾಯಮೂರ್ತಿ ಮೊಹಮ್ಮದ್ ಅನ್ವರ್ ಸಹ ಇದ್ದಾರೆ.

ಇದನ್ನೂ ಓದಿ; ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ: ಬುಲ್ಡೋಜರ್‌ಗಳಿಂದ ಮನೆಗಳ ನಾಶಕ್ಕೆ ತೀವ್ರ ವಿರೋಧ

ಉತ್ತರ ಪ್ರದೇಶ ಸರ್ಕಾರವು ಹಲವು ಪ್ರದೇಶಗಳಲ್ಲಿ ಮುಸ್ಲಿಂ ಹೋರಾಟಗಾರರ ಮನೆಗಳನ್ನು ಕೆಡವುತ್ತಿದೆ. ಮುಸ್ಲಿಂ ಮುಖಂಡರಾದ ಜಾಫರ್ ಹಯಾತ್ ಹಶ್ಮಿ, ಮೊಹಮ್ಮದ್ ಇಶ್ತಿಯಾಕ್, ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಎಂಬುವವರ ಮನೆಗಳನ್ನು ಧ್ವಂಸಗೊಳಿಸಿ, ಪೊಲೀಸರು ಅದನ್ನು ಸಂಭ್ರಮದಿಂದ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಮುಂದುವರಿದು ಸಿಎಎ ವಿರೋಧಿ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದ ಹೋರಾಟಗಾರ್ತಿ ಅಫ್ರೀನ್ ಫಾತಿಮಾ ಮತ್ತು ಅವರ ತಂದೆ ಜಾವೇದ್ ಮೊಹಮ್ಮದ್‌ರವರ ಮನೆ ಮೇಲೆಯೂ ಬುಲ್ಡೋಜರ್ ಹರಿಸಿ ತಮ್ಮ ವಿರುದ್ಧ ಹೋರಾಡಬೇಡಿ ಎಂಬ ಸಂದೇಶ ನೀಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...