Homeಕರ್ನಾಟಕಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

ಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

- Advertisement -
- Advertisement -

ಒಕ್ಕೂಟ ಸರ್ಕಾರವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಏಕ್‌ ಭಾರತ್‌ ಶ್ರೇಷ್ಠ ಭಾರತ್‌’ ಎಂಬ ಕಾರ್ಯಕ್ರಮದಡಿ ‘ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ’ ಎಂಬ ಯೋಜನೆ ಹಾಕಿಕೊಂಡಿದೆ. ಈ ಯೋಜನೆಯ ಅನ್ವಯ ಕರ್ನಾಟಕದಿಂದ 50 ವಿದ್ಯಾರ್ಥಿಗಳು ಉತ್ತರಾಖಂಡ ರಾಜ್ಯ ಪ್ರವಾಸ ಮಾಡಲಿದ್ದಾರೆ. ಆದರೆ, ಈ ಪ್ರವಾಸಕ್ಕೆ ವಿದ್ಯಾರ್ಥಿಗಳು ಆಯ್ಕೆ ಆಗಬೇಕಾದರೆ ‘ಹಿಂದಿ ಭಾಷೆ’ ಮಾತನಾಡಲು ಬರಬೇಕು ಎಂದು ಶಿಕ್ಷಣ ಇಲಾಖೆ ಷರತ್ತನ್ನು ಇಟ್ಟಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜಿಗೆ ಹೊರಡಿಸಿರುವ ಸುತ್ತೋಲೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕನ್ನಡ ಪರ ಸಂಘಟನೆಗಳು ಸುತ್ತೋಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು 75ನೇ ವರ್ಷದ ಆಜಾದಿ ಕಾ ಅಮೃತ‌ ಮಹೋತ್ಸವ್ ಅಂಗವಾಗಿ ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಎಂಬ ಕಾರ್ಯಕ್ರಮದಡಿ ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಮ್ಮ ಕಾಲೇಜಿನಲ್ಲಿ ಪ್ರಸ್ತುತ ಪಿಯುಸಿ ಓದುತ್ತಿರುವವರ ಪೈಕಿ ‘ಹಿಂದಿ ಭಾಷೆ’ಯಲ್ಲಿ ಮಾತನಾಡುವ ಮತ್ತು ತಂತ್ರಜ್ಞಾನದ ತಿಳಿವಳಿಕೆ, ಸಾಂಸ್ಕೃತಿಕ, ಕ್ರೀಡಾಸ್ಫೂರ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಲು ತಿಳಿಸಿದೆ” ಎಂದು ಉಪನಿರ್ದೇಶಕರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಈ ಬಗ್ಗೆ ಬೆಂಗಳೂರು ದಕ್ಷಿಣ ಉಪನಿರ್ದೇಶಕ ಆನಂದ ರಾಜು ಅವರನ್ನು ಈದಿನ.ಕಾಂ ಮಾತನಾಡಿಸಿದ್ದು, “ಪ್ರವಾಸಕ್ಕೆ ಆಯ್ಕೆ ಮಾಡುವಾಗ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವಂತೆ ಸರ್ವಶಿಕ್ಷಾ ಅಭಿಯಾನದ ಸಭೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಮತ್ತು ಉತ್ತರದಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಈ ಷರತ್ತಿನಿಂದಾಗಿ ಉತ್ತರ ಭಾರತದಿಂದ ಬಂದು ಇಲ್ಲಿ ನೆಲೆಸಿರುವ ಹಿಂದಿ ಭಾಷಿಕರು ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಮಾತ್ರ ಈ ಪ್ರವಾಸಕ್ಕೆ ಆಯ್ಕೆಯಾಗಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರ, “ಹೌದು ಅಂತಹ ಮಕ್ಕಳು ವಂಚಿತರಾಗುತ್ತಾರೆ. ಆದರೆ ಸರ್ಕಾರದ ಆದೇಶ ಇದೆ” ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕರ ಪತ್ರ
ಬೆಂಗಳೂರು ದಕ್ಷಿಣ ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕರ ಪತ್ರ

ರಾಜ್ಯದ ವಿದ್ಯಾರ್ಥಿಗಳನ್ನು ಉತ್ತರಾಖಂಡಕ್ಕೆ ಕಳುಹಿಸುವ ಜವಾಬ್ದಾರಿ ಹೊತ್ತಿರುವ ಆರ್‌ಎನ್‌ಎಸ್‌ ಕಾಲೇಜಿನ ಉಪನ್ಯಾಸಕಿ ಡಾ. ಪಲ್ಲವಿ ಅವರು ಮಾತನಾಡುತ್ತಾ, “ಜವಾಹರಲಾಲ್‌ ನೆಹರೂ ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳಿಂದ ತಲಾ ಮೂರು ವಿದ್ಯಾರ್ಥಿಗಳು, ಸಿಬಿಎಸ್‌ಇ ಮತ್ತು ರಾಜ್ಯ ಪಠ್ಯಕ್ರಮದಿಂದ 19 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ. ವಿದ್ಯಾರ್ಥಿ, ವಿದ್ಯಾರ್ಥಿನಿ, ಎಸ್ಸಿ ಎಸ್ಟಿ ಇತರೆ ಹಿಂದುಳಿದ ವರ್ಗ ಹೀಗೆ ಎಲ್ಲರಿಗೂ ಅವಕಾಶ ಕಲ್ಪಿಸಲಾಗಿದೆ. ಆದರೆ, ಹಿಂದಿ ಭಾಷೆ ಬರುವ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿಯಮ ಇಲ್ಲ” ಎಂದು ಸುತ್ತೋಲೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.‌

ಇದನ್ನೂ ಓದಿ: ಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

ಒಕ್ಕೂಟ ಸರ್ಕಾರದ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿಯೂ ಹಿಂದಿ ಅಥವಾ ಇಂಗ್ಲಿಷ್‌ ಭಾಷೆ ಬಲ್ಲ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿರ್ದೇಶನ ನೀಡಿಲ್ಲ. ಹಾಗಿದ್ದರೆ ಕರ್ನಾಟಕ ಸರ್ಕಾರವೇ ಉದ್ದೇಶಪೂರ್ವಕವಾಗಿ ಹಿಂದಿ ಹೇರಲು ಹೊರಟಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ರಾಜ್ಯದ ಸಂಸದರು ಮಾತನಾಡಲಿ: ಟಿ ಎಸ್‌ ನಾಗಾಭರಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

“ಈ ಬಗ್ಗೆ ನಮ್ಮ ಸಂಸದರ ಅಭಿಪ್ರಾಯ ಕೇಳಬೇಕು. ಅವರು ಹಿಂದಿ ಹೇರಿಕೆ ಬಗ್ಗೆ ಮಾತನಾಡುವುದೇ ಇಲ್ಲ. ನಾನು ಈಗಾಗಲೇ ಈ ಯೋಜನೆಯ ನಿಯಮದ ಬಗ್ಗೆ ವಿರೋಧ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದಾಗಿದೆ. ಆಜಾದಿ ಕಾ ಅಮೃತ ಮಹೋತ್ಸವ್‌ ಅಂತ ಯಾಕೆ ಕರೆಯುತ್ತೀರಿ, ಕನ್ನಡದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಎಂದು ಕರೆಯಿರಿ ಎಂದು ಹೇಳಿದ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಮಾತ್ರ ಹಾಗೆ ಬಳಸುತ್ತಿದ್ದಾರೆ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್‌ ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮಕ್ಕಳ ಮನಸ್ಸಿನಲ್ಲಿ ಚಿಕ್ಕಂದಿನಲ್ಲಿಯೇ ಕನ್ನಡದ ಬಗ್ಗೆ ಕೀಳರಿಮೆ ಮೂಡಿಸಲು ಸರ್ಕಾರವೇ ಪ್ರಯತ್ನಿಸುತ್ತಿದೆ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕಿದೆ” ಎಂದು ಕನ್ನಡಪರ ಚಿಂತಕ ಅರುಣ್‌ ಜಾವಗಲ್‌ ಹೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಭಾರತವನ್ನು ಹಿಂದಿ ನಾಡನ್ನಾಗಿಸುವ ಹುನ್ನಾರ: ಕನ್ನಡ ಪರ ಹೋರಾಟಗಾರ ದಿನೇಶ್‌ ಕುಮಾರ್‌ ಎಸ್‌ ಸಿ ಆಕ್ರೋಶ

“ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಭಾರತ ಸರ್ಕಾರದ ಮಂತ್ರಿಗಳು ಎಲ್ಲ ಭಾರತೀಯ ನುಡಿಗಳಿಗೂ ಸಮಾನಸ್ಥಾನ ನೀಡುತ್ತೇವೆ ಎಂದು ಬಾಯಿ ಮಾತಿನಲ್ಲಿ ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಭಾರತವನ್ನು ಇವರು ಹಿಂದಿ ನಾಡನ್ನಾಗಿ ಮಾಡಲು ಹೊರಟಿದ್ದಾರೆ. ಭಾರತದಲ್ಲಿ ಹಿಂದಿ ಭಾಷಿಕರು ಮೊದಲನೇ ದರ್ಜೆ ಪ್ರಜೆಗಳು, ಹಿಂದಿಯೇತರರು ಎರಡನೇ ದರ್ಜೆ ಪ್ರಜೆಗಳಂತೆ ನೋಡಲಾಗುತ್ತಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ದಿನೇಶ್ ಕುಮಾರ್ ಎಸ್ ಸಿ ಹೇಳಿದ್ದಾರೆ.

“ಹಿಂದಿಯೇತರ ನುಡಿಗಳನ್ನಾಡುವ ರಾಜ್ಯಗಳ ಮಕ್ಕಳಿಗೆ ಹಿಂದಿ ಮಾತನಾಡಲು ಬರಬೇಕು, ಹಾಗಿದ್ದರೆ ಮಾತ್ರ ಸ್ಪರ್ಧೆಗೆ ಅವಕಾಶ ಎಂಬ ನಿಯಮಾವಳಿ ರೂಪಿಸಿದಂತೆ, ಹಿಂದಿ ರಾಜ್ಯಗಳ ನಾಡಿನ ಮಕ್ಕಳಿಗೆ ಕನ್ನಡ ಮಾತನಾಡಲು ಬರಬೇಕು ಎಂಬ ನಿಯಮ ರೂಪಿಸಲು ಸಾಧ್ಯವೇ?. ಅದು ಸಾಧ್ಯವಿಲ್ಲ ಎಂದಾದರೆ ಈ ನಿಯಮ ಏಕೆ? ಎಲ್ಲ ನುಡಿಗಳನ್ನಾಡುವ ಮಕ್ಕಳನ್ನೂ ಒಂದೇ ಸಮನಾಗಿ ನೋಡದೆ ಹೋದಮೇಲೆ ಈ ಒಕ್ಕೂಟ ವ್ಯವಸ್ಥೆಗೆ ಏನು ಅರ್ಥ” ಎಂದು ಅವರು ಪ್ರಶ್ನಿಸಿದ್ದಾರೆ.

“ಸ್ವಾತಂತ್ರ್ಯ ಬಂದಾಗಿನಿಂದ ಭಾರತದ ಆಡಳಿತ ನಡೆಸಿದ ಎಲ್ಲ ರಾಜಕೀಯ ಪಕ್ಷಗಳು ಒಂದಲ್ಲ ಒಂದು ರೀತಿಯಲ್ಲಿ ಹಿಂದಿ ಹೇರಿಕೆ ನಡೆಸುತ್ತ ಪ್ರಾದೇಶಿಕ ಅಸ್ಮಿತೆಗಳನ್ನು ನಾಶಮಾಡುತ್ತಿವೆ. ಮೋದಿ ಸರ್ಕಾರ ಅದನ್ನು ಇನ್ನಷ್ಟು ತೀವ್ರವಾಗಿ ನಡೆಸುತ್ತಿದೆ. ಕನ್ನಡಿಗರೂ ಸೇರಿದಂತೆ ಎಲ್ಲ ಹಿಂದಿಯೇತರ ಭಾಷಿಕರು ಒಂದಾಗಿ ಹೋರಾಡದ ಹೊರತು ನಮಗೆ ಉಳಿಗಾಲವಿಲ್ಲ, ನಮ್ಮ ನುಡಿಗಳಿಗೆ ಭವಿಷ್ಯವೂ ಇಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಪ್ರೌಢಶಾಲೆ ಮತ್ತು ಪಿಯುಸಿಯಿಂದ ಒಟ್ಟು 25 ವಿದ್ಯಾರ್ಥಿಗಳು ಪದವಿ ಕಾಲೇಜಿನಿಂದ 25 ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಪ್ರತಿಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಜೂನ್‌ ಅಂತ್ಯಕ್ಕೆ ಮುಗಿಯಲಿದೆ.

ಕರ್ನಾಟಕದ 50 ವಿದ್ಯಾರ್ಥಿಗಳು ಉತ್ತರಾಖಂಡಕ್ಕೂ ಉತ್ತರಾಖಂಡದ 50 ವಿದ್ಯಾರ್ಥಿಗಳು ಕರ್ನಾಟಕಕ್ಕೂ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಆರ್‌ಎನ್‌ಎಸ್‌ ತಾಂತ್ರಿಕ ಕಾಲೇಜು ಮತ್ತು ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜುಗಳನ್ನು ನೋಡಲ್‌ ಸಂಸ್ಥೆಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಆರ್‌ಎನ್‌ಎಸ್‌ ಕಾಲೇಜಿನ ಉಪನ್ಯಾಸಕಿ ಡಾ ಪಲ್ಲವಿ ಅವರಿಗೆ ರಾಜ್ಯದ ವಿದ್ಯಾರ್ಥಿಗಳನ್ನು ಉತ್ತರಾಖಂಡಕ್ಕೆ ಕಳುಹಿಸುವ ಪ್ರಕ್ರಿಯೆಯ ಜವಾಬ್ದಾರಿ ನೀಡಲಾಗಿದೆ.

ಉತ್ತರಾಖಂಡದಿಂದ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಬಿಎಂಎಸ್‌ ಕಾಲೇಜಿಗೆ ವಹಿಸಲಾಗಿದೆ. ಅಲ್ಲಿನ ಉಪನ್ಯಾಸಕಿ ಡಾ. ಪ್ರತಿಮಾ ಭಟ್‌ ಅವರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿದೆ. ಐದು ದಿನಗಳಲ್ಲಿ ಮ್ಯೂಸಿಯಂ ಭೇಟಿ, ಸ್ಥಳೀಯ ಕ್ರೀಡೆಗಳ ಪರಿಚಯ, ಕ್ರೀಡಾ ಸಾಧಕರ ಜೊತೆ ಸಂವಾದ, ಸ್ಥಳೀಯ ಆಹಾರಗಳ ಪರಿಚಯ, ಸಾಂಸ್ಕೃತಿಕ ವಿನಿಮಯ ಮುಂತಾದ ಚಟುವಟಿಕೆ ಇರಲಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

ದೇಶದ 750 ಹೈಸ್ಕೂಲ್‌ ಮತ್ತು 750 ಕಾಲೇಜು ವಿದ್ಯಾರ್ಥಿಗಳು ಈ ಯೋಜನೆಯಡಿ ವಿವಿಧ ರಾಜ್ಯಗಳಿಗೆ ಪ್ರವಾಸ ಹೋಗಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...