Homeರಾಷ್ಟ್ರೀಯಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

- Advertisement -
- Advertisement -

ಕರ್ನಾಟಕದ ಪಠ್ಯ ಪುಸ್ತಕಗಳನ್ನು ವಿರೂಪ ಮಾಡುತ್ತಿರುವ ಬಿಜೆಪಿ ಸರ್ಕಾರ ವಿರುದ್ಧ ದೇಶದ ಖ್ಯಾತ ಇತಿಹಾಸ ತಜ್ಞರು ಪ್ರತಿಕ್ರಿಯೆ ನೀಡಿದ್ದು, ತೀವ್ರ ಆಕ್ರೋಶ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷ ಜ್ಞಾನವಿಲ್ಲದ ವ್ಯಕ್ತಿಗಳು ಸಾಮಾಜ ವಿಜ್ಞಾನದಲ್ಲಿನ ಪಠ್ಯಪುಸ್ತಕಗಳಲ್ಲಿ ಯಾಕೆ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಖ್ಯಾತ ಇತಿಹಾಸ ತಜ್ಞೆ ಪ್ರೊಫೆಸರ್‌ ರೋಮಿಳಾ ಥಾಪರ್‌ ಅವರು ಪ್ರಶ್ನಿಸಿದ್ದು, ಇತಿಹಾಸದಂತಹ ಸಮಾಜ ವಿಜ್ಞಾನದ ಪಠ್ಯಪುಸ್ತಕಗಳು ವಿಷಯದ ತಜ್ಞರ ಜವಾಬ್ದಾರಿಯಾಗಿರಬೇಕು ಎಂದು ಅವರು ಹೇಳಿದ್ದಾರೆ.

ಜೆಎ‌ನ್‌ಯು ಪ್ರಾಧ್ಯಾಪಕಿ, NCERT ಪಠ್ಯಪುಸ್ತಕಗಳ ಸಮಿತಿಯ ಅಧ್ಯಕ್ಷರೂ ಆಗಿದ್ದ ರೋಮಿಳಾ ಥಾಪರ್‌ ಅವರು,“ಉತ್ತಮ ಶಿಕ್ಷಣದ ಅಡಿಪಾಯಕ್ಕೆ ಉತ್ತಮ ಪಠ್ಯಪುಸ್ತಕ ಮುಖ್ಯವಾಗಿರುತ್ತದೆ. ಇದು ಎರಡು ಕೆಲಸಗಳನ್ನು ಮಾಡುತ್ತದೆ. ಮೊದಲನೆಯದಾಗಿ, ಇದು ಒಂದು ವಿಷಯದ ಬಗ್ಗೆ ಪಾಠ ಪುಸ್ತಕವು ಮಾಹಿತಿಯನ್ನು ಒದಗಿಸುತ್ತದೆ. ಇತಿಹಾಸ ಪಠ್ಯದಲ್ಲಿ ಏನೆಲ್ಲಾ ಮಾಹಿತಿ ಇರಬೇಕು ಎಂಬುದನ್ನು ತಜ್ಞ ಇತಿಹಾಸಕಾರರು ತೀರ್ಮಾನಿಸಬೇಕೇ ವಿನಃ ರಾಜಕಾರಣಿಗಳು ಮತ್ತು ಅಧಿಕಾರಿಗಳು ಅದನ್ನು ಮಾಡಬಾರದು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕದಲ್ಲಿ ಸಾರ್ವಜನಿಕ ಅಭಿಪ್ರಾಯ ಅಥವಾ ರಾಜಕೀಯ ಸಿದ್ಧಾಂತವನ್ನು ಹರಡುವ ಕುರಿತು ಇರಬಾರದು. ವಿಷಯ ತಜ್ಞರು ಏನು ಹೇಳಲು ಬಯಸುತ್ತಾರೆಯೋ ಅದು ಅದರಲ್ಲಿ ಇರಬೇಕು. ಒಂದು ವಿಷಯಗಳ ಆಯ್ಕೆಯು ಆ ವಿಷಯ ತಜ್ಞರು ಏನು ಮುಖ್ಯವೆಂದು ಭಾವಿಸುತ್ತಾರೆ ಎಂಬುದನ್ನು ಪ್ರತಿಬಿಂಬಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ಬಿಜೆಪಿ ನಾಯಕ ವಿನಯ್‌ ಬಿದರೆ ಸಮರ್ಥನೆ

“ದ್ರಾವಿಡ ಚಳವಳಿಯ ಇತಿಹಾಸವು ಐತಿಹಾಸಿಕವಾಗಿ ದಕ್ಷಿಣ ಭಾರತದ ಇತಿಹಾಸಕ್ಕೆ ಪ್ರಮುಖವಾಗಿದೆ. ಉತ್ತರ ಭಾರತಕ್ಕೆ ಆರ್ಯ ಸಮಾಜದ ಇತಿಹಾಸವಿದೆ. ಉತ್ತರ ಭಾರತದಲ್ಲಿ ಸುಲ್ತಾನರು, ಡೆಕ್ಕನ್ ಮತ್ತು ಮೊಘಲರ ಇತಿಹಾಸವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಯಾಕೆಂದರೆ ಅದು ಭಾರತದ ಉತ್ತಮ ಸಾಂಸ್ಕೃತಿಕ ಬೆಳವಣಿಗೆಯ ಅವಧಿಯಾಗಿದೆ. ವಿಜ್ಞಾನದಲ್ಲಿನ ಪಠ್ಯಪುಸ್ತಕಗಳಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಅದನ್ನು ನಿರ್ಧರಿಸಲು ವಿಜ್ಞಾನಿಗಳಿಗೆ ಬಿಡಲಾಗುತ್ತದೆ. ಹಾಗೆಯೆ, ವಿಶೇಷ ಜ್ಞಾನವಿಲ್ಲದ ವ್ಯಕ್ತಿಗಳು ಸಾಮಾಜ ವಿಜ್ಞಾನದಲ್ಲಿನ ಪಠ್ಯಪುಸ್ತಕಗಳು ಯಾಕೆ ಹಸ್ತಕ್ಷೇಪ ಮಾಡುತ್ತವೆ. ಇತಿಹಾಸದಂತಹ ಸಮಾಜ ವಿಜ್ಞಾನದ ಪಠ್ಯಪುಸ್ತಕಗಳು ಸಹ ವಿಷಯದ ತಜ್ಞರ ಜವಾಬ್ದಾರಿಯಾಗಿರಬೇಕು”

“ಎರಡನೆಯದಾಗಿ, ಇತಿಹಾಸ ಪಠ್ಯಪುಸ್ತಕದ ಉದ್ದೇಶ ವಿದ್ಯಾರ್ಥಿಯು ಹಿಂದಿನ ಮತ್ತು ಇತಿಹಾಸದ ಬಗ್ಗೆ ಯೋಚಿಸುವಂತೆ ಮಾಡುವುದಾಗಿದೆ. ಘಟನೆಗಳು ಹೇಗೆ, ಏನು, ಏಕೆ ಮತ್ತು ಎಲ್ಲಿ ಸಂಭವಿಸಿದವು ಎಂಬುದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವಂತಾಗಬೇಕು. ಪಠ್ಯಪುಸ್ತಕದಲ್ಲಿ ನೀಡಲಾದ ಉತ್ತರಗಳು ಮತ್ತು ಇತಿಹಾಸದ ಹೇಳಿಕೆಗಳು ಸಾಬೀತಾದ ಪುರಾವೆಗಳನ್ನು ಆಧರಿಸಿರಬೇಕು. ಹೇಳಿಕೆಯು ತಾರ್ಕಿಕ ಮತ್ತು ತರ್ಕಬದ್ಧ ಚಿಂತನೆಯನ್ನು ಆಧರಿಸಿರಬೇಕು. ಇತಿಹಾಸವು ಕಾಲ್ಪನಿಕವಲ್ಲ, ಅದು ಸಾಬೀತಾಗಿರುವ ಸತ್ಯಗಳನ್ನು ಆಧರಿಸಿರಬೇಕು” ಎಂದು ರೋಮಿಳಾ ಥಾಪರ್‌ ಅವರು ಹೇಳಿದ್ದಾರೆ.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ, ಇತಿಹಾಕಾರ ಪ್ರೊ. ಆದಿತ್ಯ ಮುಖರ್ಜಿ ಅವರು,“ಅತ್ಯುನ್ನತ ಮಟ್ಟದ ಶಿಕ್ಷಣ, ಸಾಂಸ್ಕೃತಿಕ ಸಾಧನೆ ಮತ್ತು ಶ್ರೇಷ್ಠವಾದ ಸಂಪ್ರದಾಯವನ್ನು ಹೊಂದಿರುವ ಅತ್ಯಂತ ಪ್ರಗತಿಪರ ರಾಜ್ಯಗಳಲ್ಲಿ ಒಂದಾದ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತ ಪ್ರಜಾಪ್ರಭುತ್ವವನ್ನು ನಾಶಪಡಿಸುವುದಲ್ಲದೆ, ಅದಕ್ಕೆ ಧಕ್ಕೆ ತರುವ ರೀತಿಯಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನಗಳಿಗೆ ಕರ್ನಾಟಕ ಸಾಕ್ಷಿಯಾಗುತ್ತಿದೆ. ಬ್ರಿಟಿಷರ ಕೋಮುವಾದಿ ಸಹಯೋಗಿಗಳ ಈ ವಿಧ್ವಂಸಕ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಕರ್ನಾಟಕವು ದೇಶವನ್ನು ಮುನ್ನಡೆಸಲಿ. ಇದರಿಂದ ನಮ್ಮ ಸ್ವಾತಂತ್ರ್ಯ ಹೋರಾಟದ ನಾಯಕರು ಕಲ್ಪಿಸಿದ ರಾಷ್ಟ್ರ, ಅವರು ಕಲ್ಪಿಸಿದ ‘ಭಾರತದ ಕಲ್ಪನೆ’ ಉಳಿದು ಅರಳುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

ಇತಿಹಾಸ ಮತ್ತು ಪುರಾತತ್ವಶಾಸ್ತ್ರಜ್ಞ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್‌‌ ಅಶೋಕ್‌ ಶೆಟ್ಟರ್‌‌, “ಕನ್ನಡ ಪಠ್ಯದ ಕುರಿತೇ ಬಹಳಷ್ಟು ಮಾತುಗಳಾಗುತ್ತಿವೆ. ಸಮಾಜ ವಿಜ್ಞಾನ ಪಠ್ಯಗಳ ಕುರಿತು, ಅದರಲ್ಲೂ ವಿಶೇಷವಾಗಿ 8 ಹಾಗೂ 9ನೇ ತರಗತಿಯ ಪಾಠಗಳಲ್ಲಿ ಇರುವ ದೋಷಗಳು ಮತ್ತು ಸೇರ್ಪಡೆಗಳ ಕುರಿತು ಯಾರಾದರೂ ಗಮನ ಸೆಳೆಯಿರಿ. ಗುರು ನಾನಕ್ ಅವರನ್ನು ಭಕ್ತಿ ಪಂಥದಲ್ಲಿ ಸೇರಿಸಿದ್ದಾರೆ. ಅವರು ಸಿಖ್ ಧರ್ಮದ ಸ್ಥಾಪಕರೆಂಬ ಉಲ್ಲೇಖವೇ ಇಲ್ಲ. ಹರಪ್ಪನ್ ಸಂಸ್ಕೃತಿಯನ್ನು ಸಿಂಧು- ಸರಸ್ವತಿ ಸಂಸ್ಕೃತಿ ಎಂದು ಕರೆದು ಅದರಲ್ಲಿ ವೇದಕಾಲವನ್ನು ತಳಕುಗೊಳಿಸುವ ಕುತ್ಸಿತ ಪ್ರಯತ್ನ ಮಾಡಲಾಗಿದೆ. ವೇದಕಾಲವನ್ನು ತುಂಬ ಹಿಂದಕ್ಕೆ ಕೊಂಡೊಯ್ಯಲಾಗಿದೆ. ಬಸವಣ್ಣನವರ ಕುರಿತ ಪಾಠದಲ್ಲಿ ಅವರ ಆಂದೋಲನದ ಸಾಮಾಜಿಕ ಆಯಾಮಗಳಕುರಿತ ವಿವರಗಳನ್ನೆಲ್ಲ ಕಡಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಖ್ಯಾತ ಇತಿಹಾಸಕಾರರಾದ ಪ್ರೊ ಸುಮಿತ್ ಸರ್ಕಾರ್ ಮತ್ತು ಪ್ರೊ ತಾನಿಕಾ ಸರ್ಕಾರ್ ಅವರು, “ಕರ್ನಾಟಕ ಶಾಲಾ ಮಟ್ಟದ ಸಮಾಜ ವಿಜ್ಞಾನ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿರುವ ಬದಲಾವಣೆಗಳ ಬಗ್ಗೆ ಓದಿ ಗಾಬರಿಯಾಯಿತು. ವಿದ್ವಾಂಸರ ಘನ ಸಂಶೋಧನೆಯನ್ನು ಆಧರಿಸಿದ ಸತ್ಯಗಳಿಗೆ ಯಾವುದೇ ಸಂಬಂಧವಿಲ್ಲದೆ, ಪುರಾಣಗಳು ಮತ್ತು ಐತಿಹಾಸಿಕ ಪುರಾವೆಗಳ ನಡುವಿನ ಗಡಿಯನ್ನು ಸವೆತ ಮಾಡಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರೂ ಟಾರ್ಗೆಟ್‌?

“ನಮ್ಮ ದೇಶದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಜನರ ಅಗಾಧ ಕೊಡುಗೆಗಳನ್ನು ಅಳಿಸಿಹಾಕಲಾಗಿದೆ. ಹಲವಾರು ಅಪ್ರತಿಮ ಕ್ರಾಂತಿಕಾರಿಗಳ ಆದರ್ಶಗಳನ್ನು ಪ್ರಸ್ತುತ ಆಡಳಿತ ಶಕ್ತಿಗಳ ಹಿಂದಿನ ನಾಯಕರ ಸಂದೇಶಗಳೊಂದಿಗೆ ಬದಲಾಯಿಸಲಾಗಿದೆ. ಶಾಲಾ ಮಕ್ಕಳಿಗೆ ಹಿಂದಿನದು ಇನ್ನು ಮುಂದೆ ತಿಳಿಯಲು ಆಗುವುದಿಲ್ಲ. ಅವರ ಸಾಮಾಜಿಕ, ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳಿಗೆ ಬಲವಾದ ಬಲಪಂಥೀಯ ತಿರುವು ನೀಡಲಾಗುತ್ತದೆ. ಇದು ಕರ್ನಾಟಕದ ಯುವ ಪೀಳಿಗೆಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಸಮಾಜ ವಿಜ್ಞಾನ ಅಧ್ಯಯನದ ಮಾದರಿಗೆ ದೊಡ್ಡ ಹೊಡೆತ ನೀಡಲಿದೆ” ಎಂದು ಇತಿಹಾಸಕಾರರಿಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...