Homeರಾಷ್ಟ್ರೀಯಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

- Advertisement -
- Advertisement -

ಕರ್ನಾಟಕದ ಪಠ್ಯ ಪುಸ್ತಕಗಳನ್ನು ವಿರೂಪ ಮಾಡುತ್ತಿರುವ ಬಿಜೆಪಿ ಸರ್ಕಾರ ವಿರುದ್ಧ ದೇಶದ ಖ್ಯಾತ ಇತಿಹಾಸ ತಜ್ಞರು ಪ್ರತಿಕ್ರಿಯೆ ನೀಡಿದ್ದು, ತೀವ್ರ ಆಕ್ರೋಶ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷ ಜ್ಞಾನವಿಲ್ಲದ ವ್ಯಕ್ತಿಗಳು ಸಾಮಾಜ ವಿಜ್ಞಾನದಲ್ಲಿನ ಪಠ್ಯಪುಸ್ತಕಗಳಲ್ಲಿ ಯಾಕೆ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಖ್ಯಾತ ಇತಿಹಾಸ ತಜ್ಞೆ ಪ್ರೊಫೆಸರ್‌ ರೋಮಿಳಾ ಥಾಪರ್‌ ಅವರು ಪ್ರಶ್ನಿಸಿದ್ದು, ಇತಿಹಾಸದಂತಹ ಸಮಾಜ ವಿಜ್ಞಾನದ ಪಠ್ಯಪುಸ್ತಕಗಳು ವಿಷಯದ ತಜ್ಞರ ಜವಾಬ್ದಾರಿಯಾಗಿರಬೇಕು ಎಂದು ಅವರು ಹೇಳಿದ್ದಾರೆ.

ಜೆಎ‌ನ್‌ಯು ಪ್ರಾಧ್ಯಾಪಕಿ, NCERT ಪಠ್ಯಪುಸ್ತಕಗಳ ಸಮಿತಿಯ ಅಧ್ಯಕ್ಷರೂ ಆಗಿದ್ದ ರೋಮಿಳಾ ಥಾಪರ್‌ ಅವರು,“ಉತ್ತಮ ಶಿಕ್ಷಣದ ಅಡಿಪಾಯಕ್ಕೆ ಉತ್ತಮ ಪಠ್ಯಪುಸ್ತಕ ಮುಖ್ಯವಾಗಿರುತ್ತದೆ. ಇದು ಎರಡು ಕೆಲಸಗಳನ್ನು ಮಾಡುತ್ತದೆ. ಮೊದಲನೆಯದಾಗಿ, ಇದು ಒಂದು ವಿಷಯದ ಬಗ್ಗೆ ಪಾಠ ಪುಸ್ತಕವು ಮಾಹಿತಿಯನ್ನು ಒದಗಿಸುತ್ತದೆ. ಇತಿಹಾಸ ಪಠ್ಯದಲ್ಲಿ ಏನೆಲ್ಲಾ ಮಾಹಿತಿ ಇರಬೇಕು ಎಂಬುದನ್ನು ತಜ್ಞ ಇತಿಹಾಸಕಾರರು ತೀರ್ಮಾನಿಸಬೇಕೇ ವಿನಃ ರಾಜಕಾರಣಿಗಳು ಮತ್ತು ಅಧಿಕಾರಿಗಳು ಅದನ್ನು ಮಾಡಬಾರದು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕದಲ್ಲಿ ಸಾರ್ವಜನಿಕ ಅಭಿಪ್ರಾಯ ಅಥವಾ ರಾಜಕೀಯ ಸಿದ್ಧಾಂತವನ್ನು ಹರಡುವ ಕುರಿತು ಇರಬಾರದು. ವಿಷಯ ತಜ್ಞರು ಏನು ಹೇಳಲು ಬಯಸುತ್ತಾರೆಯೋ ಅದು ಅದರಲ್ಲಿ ಇರಬೇಕು. ಒಂದು ವಿಷಯಗಳ ಆಯ್ಕೆಯು ಆ ವಿಷಯ ತಜ್ಞರು ಏನು ಮುಖ್ಯವೆಂದು ಭಾವಿಸುತ್ತಾರೆ ಎಂಬುದನ್ನು ಪ್ರತಿಬಿಂಬಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ಬಿಜೆಪಿ ನಾಯಕ ವಿನಯ್‌ ಬಿದರೆ ಸಮರ್ಥನೆ

“ದ್ರಾವಿಡ ಚಳವಳಿಯ ಇತಿಹಾಸವು ಐತಿಹಾಸಿಕವಾಗಿ ದಕ್ಷಿಣ ಭಾರತದ ಇತಿಹಾಸಕ್ಕೆ ಪ್ರಮುಖವಾಗಿದೆ. ಉತ್ತರ ಭಾರತಕ್ಕೆ ಆರ್ಯ ಸಮಾಜದ ಇತಿಹಾಸವಿದೆ. ಉತ್ತರ ಭಾರತದಲ್ಲಿ ಸುಲ್ತಾನರು, ಡೆಕ್ಕನ್ ಮತ್ತು ಮೊಘಲರ ಇತಿಹಾಸವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಯಾಕೆಂದರೆ ಅದು ಭಾರತದ ಉತ್ತಮ ಸಾಂಸ್ಕೃತಿಕ ಬೆಳವಣಿಗೆಯ ಅವಧಿಯಾಗಿದೆ. ವಿಜ್ಞಾನದಲ್ಲಿನ ಪಠ್ಯಪುಸ್ತಕಗಳಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಅದನ್ನು ನಿರ್ಧರಿಸಲು ವಿಜ್ಞಾನಿಗಳಿಗೆ ಬಿಡಲಾಗುತ್ತದೆ. ಹಾಗೆಯೆ, ವಿಶೇಷ ಜ್ಞಾನವಿಲ್ಲದ ವ್ಯಕ್ತಿಗಳು ಸಾಮಾಜ ವಿಜ್ಞಾನದಲ್ಲಿನ ಪಠ್ಯಪುಸ್ತಕಗಳು ಯಾಕೆ ಹಸ್ತಕ್ಷೇಪ ಮಾಡುತ್ತವೆ. ಇತಿಹಾಸದಂತಹ ಸಮಾಜ ವಿಜ್ಞಾನದ ಪಠ್ಯಪುಸ್ತಕಗಳು ಸಹ ವಿಷಯದ ತಜ್ಞರ ಜವಾಬ್ದಾರಿಯಾಗಿರಬೇಕು”

“ಎರಡನೆಯದಾಗಿ, ಇತಿಹಾಸ ಪಠ್ಯಪುಸ್ತಕದ ಉದ್ದೇಶ ವಿದ್ಯಾರ್ಥಿಯು ಹಿಂದಿನ ಮತ್ತು ಇತಿಹಾಸದ ಬಗ್ಗೆ ಯೋಚಿಸುವಂತೆ ಮಾಡುವುದಾಗಿದೆ. ಘಟನೆಗಳು ಹೇಗೆ, ಏನು, ಏಕೆ ಮತ್ತು ಎಲ್ಲಿ ಸಂಭವಿಸಿದವು ಎಂಬುದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವಂತಾಗಬೇಕು. ಪಠ್ಯಪುಸ್ತಕದಲ್ಲಿ ನೀಡಲಾದ ಉತ್ತರಗಳು ಮತ್ತು ಇತಿಹಾಸದ ಹೇಳಿಕೆಗಳು ಸಾಬೀತಾದ ಪುರಾವೆಗಳನ್ನು ಆಧರಿಸಿರಬೇಕು. ಹೇಳಿಕೆಯು ತಾರ್ಕಿಕ ಮತ್ತು ತರ್ಕಬದ್ಧ ಚಿಂತನೆಯನ್ನು ಆಧರಿಸಿರಬೇಕು. ಇತಿಹಾಸವು ಕಾಲ್ಪನಿಕವಲ್ಲ, ಅದು ಸಾಬೀತಾಗಿರುವ ಸತ್ಯಗಳನ್ನು ಆಧರಿಸಿರಬೇಕು” ಎಂದು ರೋಮಿಳಾ ಥಾಪರ್‌ ಅವರು ಹೇಳಿದ್ದಾರೆ.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ, ಇತಿಹಾಕಾರ ಪ್ರೊ. ಆದಿತ್ಯ ಮುಖರ್ಜಿ ಅವರು,“ಅತ್ಯುನ್ನತ ಮಟ್ಟದ ಶಿಕ್ಷಣ, ಸಾಂಸ್ಕೃತಿಕ ಸಾಧನೆ ಮತ್ತು ಶ್ರೇಷ್ಠವಾದ ಸಂಪ್ರದಾಯವನ್ನು ಹೊಂದಿರುವ ಅತ್ಯಂತ ಪ್ರಗತಿಪರ ರಾಜ್ಯಗಳಲ್ಲಿ ಒಂದಾದ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತ ಪ್ರಜಾಪ್ರಭುತ್ವವನ್ನು ನಾಶಪಡಿಸುವುದಲ್ಲದೆ, ಅದಕ್ಕೆ ಧಕ್ಕೆ ತರುವ ರೀತಿಯಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನಗಳಿಗೆ ಕರ್ನಾಟಕ ಸಾಕ್ಷಿಯಾಗುತ್ತಿದೆ. ಬ್ರಿಟಿಷರ ಕೋಮುವಾದಿ ಸಹಯೋಗಿಗಳ ಈ ವಿಧ್ವಂಸಕ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಕರ್ನಾಟಕವು ದೇಶವನ್ನು ಮುನ್ನಡೆಸಲಿ. ಇದರಿಂದ ನಮ್ಮ ಸ್ವಾತಂತ್ರ್ಯ ಹೋರಾಟದ ನಾಯಕರು ಕಲ್ಪಿಸಿದ ರಾಷ್ಟ್ರ, ಅವರು ಕಲ್ಪಿಸಿದ ‘ಭಾರತದ ಕಲ್ಪನೆ’ ಉಳಿದು ಅರಳುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

ಇತಿಹಾಸ ಮತ್ತು ಪುರಾತತ್ವಶಾಸ್ತ್ರಜ್ಞ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್‌‌ ಅಶೋಕ್‌ ಶೆಟ್ಟರ್‌‌, “ಕನ್ನಡ ಪಠ್ಯದ ಕುರಿತೇ ಬಹಳಷ್ಟು ಮಾತುಗಳಾಗುತ್ತಿವೆ. ಸಮಾಜ ವಿಜ್ಞಾನ ಪಠ್ಯಗಳ ಕುರಿತು, ಅದರಲ್ಲೂ ವಿಶೇಷವಾಗಿ 8 ಹಾಗೂ 9ನೇ ತರಗತಿಯ ಪಾಠಗಳಲ್ಲಿ ಇರುವ ದೋಷಗಳು ಮತ್ತು ಸೇರ್ಪಡೆಗಳ ಕುರಿತು ಯಾರಾದರೂ ಗಮನ ಸೆಳೆಯಿರಿ. ಗುರು ನಾನಕ್ ಅವರನ್ನು ಭಕ್ತಿ ಪಂಥದಲ್ಲಿ ಸೇರಿಸಿದ್ದಾರೆ. ಅವರು ಸಿಖ್ ಧರ್ಮದ ಸ್ಥಾಪಕರೆಂಬ ಉಲ್ಲೇಖವೇ ಇಲ್ಲ. ಹರಪ್ಪನ್ ಸಂಸ್ಕೃತಿಯನ್ನು ಸಿಂಧು- ಸರಸ್ವತಿ ಸಂಸ್ಕೃತಿ ಎಂದು ಕರೆದು ಅದರಲ್ಲಿ ವೇದಕಾಲವನ್ನು ತಳಕುಗೊಳಿಸುವ ಕುತ್ಸಿತ ಪ್ರಯತ್ನ ಮಾಡಲಾಗಿದೆ. ವೇದಕಾಲವನ್ನು ತುಂಬ ಹಿಂದಕ್ಕೆ ಕೊಂಡೊಯ್ಯಲಾಗಿದೆ. ಬಸವಣ್ಣನವರ ಕುರಿತ ಪಾಠದಲ್ಲಿ ಅವರ ಆಂದೋಲನದ ಸಾಮಾಜಿಕ ಆಯಾಮಗಳಕುರಿತ ವಿವರಗಳನ್ನೆಲ್ಲ ಕಡಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಖ್ಯಾತ ಇತಿಹಾಸಕಾರರಾದ ಪ್ರೊ ಸುಮಿತ್ ಸರ್ಕಾರ್ ಮತ್ತು ಪ್ರೊ ತಾನಿಕಾ ಸರ್ಕಾರ್ ಅವರು, “ಕರ್ನಾಟಕ ಶಾಲಾ ಮಟ್ಟದ ಸಮಾಜ ವಿಜ್ಞಾನ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿರುವ ಬದಲಾವಣೆಗಳ ಬಗ್ಗೆ ಓದಿ ಗಾಬರಿಯಾಯಿತು. ವಿದ್ವಾಂಸರ ಘನ ಸಂಶೋಧನೆಯನ್ನು ಆಧರಿಸಿದ ಸತ್ಯಗಳಿಗೆ ಯಾವುದೇ ಸಂಬಂಧವಿಲ್ಲದೆ, ಪುರಾಣಗಳು ಮತ್ತು ಐತಿಹಾಸಿಕ ಪುರಾವೆಗಳ ನಡುವಿನ ಗಡಿಯನ್ನು ಸವೆತ ಮಾಡಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರೂ ಟಾರ್ಗೆಟ್‌?

“ನಮ್ಮ ದೇಶದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಜನರ ಅಗಾಧ ಕೊಡುಗೆಗಳನ್ನು ಅಳಿಸಿಹಾಕಲಾಗಿದೆ. ಹಲವಾರು ಅಪ್ರತಿಮ ಕ್ರಾಂತಿಕಾರಿಗಳ ಆದರ್ಶಗಳನ್ನು ಪ್ರಸ್ತುತ ಆಡಳಿತ ಶಕ್ತಿಗಳ ಹಿಂದಿನ ನಾಯಕರ ಸಂದೇಶಗಳೊಂದಿಗೆ ಬದಲಾಯಿಸಲಾಗಿದೆ. ಶಾಲಾ ಮಕ್ಕಳಿಗೆ ಹಿಂದಿನದು ಇನ್ನು ಮುಂದೆ ತಿಳಿಯಲು ಆಗುವುದಿಲ್ಲ. ಅವರ ಸಾಮಾಜಿಕ, ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳಿಗೆ ಬಲವಾದ ಬಲಪಂಥೀಯ ತಿರುವು ನೀಡಲಾಗುತ್ತದೆ. ಇದು ಕರ್ನಾಟಕದ ಯುವ ಪೀಳಿಗೆಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಸಮಾಜ ವಿಜ್ಞಾನ ಅಧ್ಯಯನದ ಮಾದರಿಗೆ ದೊಡ್ಡ ಹೊಡೆತ ನೀಡಲಿದೆ” ಎಂದು ಇತಿಹಾಸಕಾರರಿಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...