Homeಮುಖಪುಟರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

- Advertisement -
- Advertisement -

ಕೆಸಿಆರ್ ಎಂದೇ ಖ್ಯಾತರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಯಾವುದೋ ಒಂದು ದೊಡ್ಡ ಪ್ರಯೋಗದಲ್ಲಿ ತೊಡಗಿದ್ದಾರೆ.

ಅಧಿಕೃತವಾಗಿ ಇನ್ನೂ ಘೋಷಿಸದಿದ್ದರೂ, ತೆಲಂಗಾಣ ರಾಷ್ಟ್ರ ಸಮಿತಿ (TRS) ಶೀಘ್ರದಲ್ಲೇ BRS (ಭಾರತೀಯ ರಾಷ್ಟ್ರ ಸಮಿತಿ) ಎಂದು ಮರುನಾಮಕರಣಗೊಂಡು ರಾಷ್ಟ್ರೀಯ ಪಕ್ಷವಾಗಿ ಹೊಮ್ಮಲಿದೆ. ಕೆಸಿಆರ್ ಅವರು ತಮ್ಮ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿದ್ಯಮಾನದ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈವಾಡವಿದೆ ಎಂದು ಕೆಲವರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಆಕಾಂಕ್ಷೆಯನ್ನು ಹೊಂದಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ (ಎನ್‌ಟಿಆರ್) ನಂತರದಲ್ಲಿ ಈ ಹೆಜ್ಜೆ ಇರಿಸುತ್ತಿರುವ ದಕ್ಷಿಣ ಭಾರತದ ಮೊದಲು ರಾಜಕಾರಣಿ ಎಂದು ಕೆಸಿಆರ್‌ ಅವರನ್ನು ಕೆಲವರು ಗುರುತಿಸುತ್ತಿದ್ದಾರೆ.

‘ನ್ಯೂಸ್‌ ಮಿನಿಟ್‌’ ಜೊತೆ ಮಾತನಾಡಿರುವ ರಾಜಕೀಯ ವಿಶ್ಲೇಷಕ ಪಿ.ಪವನ್, “ಎನ್‌ಟಿಆರ್ ರಾಷ್ಟ್ರೀಯ ಪಕ್ಷ (ಭಾರತ ದೇಶಂ ಪಕ್ಷ) ಪ್ರಾರಂಭಿಸಲು ಪ್ರಯತ್ನಿಸಿದರೂ ಯಶಸ್ಸಾಗಲಿಲ್ಲ. ನಂತರ, ಚಂದ್ರಬಾಬು ನಾಯ್ಡು ಅವರು ಟಿಡಿಪಿಯನ್ನು ರಾಷ್ಟ್ರೀಯ ಪಕ್ಷವಾಗಿ ನೋಂದಾಯಿಸಿಕೊಂಡರು. ಆದರೆ ಪ್ರಧಾನಿ ಸ್ಥಾನದ ಮೇಲೆ ಅವರ ಕಣ್ಣು ಎಂದಿಗೂ ಇರಲಿಲ್ಲ. ಅವರೇ ಈ ಪ್ರಸ್ತಾಪವನ್ನು ಒಮ್ಮೆ ಅಲ್ಲ ಎರಡು ಬಾರಿ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.

“ಎನ್‌ಟಿಆರ್‌ ನಂತರದಲ್ಲಿ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮೊದಲ ಮುಖ್ಯಮಂತ್ರಿಯಾಗಿಯೂ ಕೆಸಿಆರ್‌ ಹೊಮ್ಮುತ್ತಾರೆ. ರಾಜಕೀಯ ಒತ್ತಡಗಳಿಂದಾಗಿ ದಕ್ಷಿಣ ಭಾರತದ ರಾಜಕಾರಣಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎನ್ನುತ್ತಾರೆ ಪವನ್‌.

ಪಕ್ಷದ ಹೆಸರು ಇನ್ನೂ ಪರಿಗಣನೆಯಲ್ಲಿದೆ. ಇನ್ನೂ ಅಂತಿಮಗೊಂಡಿಲ್ಲ ಎಂದು ಟಿಆರ್‌ಎಸ್‌ನ ಉನ್ನತ ಮೂಲಗಳು ಹೇಳುತ್ತವೆ. ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿ ಸಭೆಯ ಮೊದಲು ಅದನ್ನು ಅಧಿಕೃತಗೊಳಿಸಲು ಪಕ್ಷವು ಯೋಜಿಸಿದೆ ಎಂದು ಮೂಲವು ಬಹಿರಂಗಪಡಿಸಿದೆ.

‘ನವ ಭಾರತ್ ಪಕ್ಷ’, ‘ಜೈ ಭಾರತ್‌’ ಮತ್ತು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರುಗಳು ಪರಿಗಣನೆಯಲ್ಲಿವೆ ಎನ್ನಲಾಗುತ್ತಿದೆ. ಹೆಸರನ್ನು ಬದಲಾಯಿಸಬೇಕಾಗಿದ್ದರೂ, ಪಕ್ಷದ ಧ್ವಜ ಮತ್ತು ಅದರ ಟ್ರೇಡ್‌ಮಾರ್ಕ್ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳಲಾಗುತ್ತಿದೆ. ಪಕ್ಷದ ಧ್ವಜದಲ್ಲಿರುವ ತೆಲಂಗಾಣ ನಕ್ಷೆಯನ್ನು ಭಾರತೀಯ ಧ್ವಜ ಅಥವಾ ಭಾರತ ಮಾತೆಯ ಚಿತ್ರ ಅಥವಾ ಎರಡರ ಸಂಯೋಜನೆಯೊಂದಿಗೆ ಬದಲಾಯಿಸಬಹುದು ಎನ್ನಲಾಗುತ್ತಿದೆ.

ಕೆಸಿಆರ್ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶಿಸುವುದು ವಾಸ್ತವವಾಗಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದೆ ಎಂದು ಹೆಸರು ಹೇಳಲಿಚ್ಛಿಸದ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ರಾಜ್ಯದ ನಾಯಕ ತನ್ನನ್ನು ತಾನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಂಡಾಗ, ಅದು ಮೂಲತಃ ರಾಜ್ಯದ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಒಬ್ಬ ರಾಜ್ಯದ ನಾಯಕನಿಗೆ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿವೆ ಮತ್ತು ತೆಲಂಗಾಣ ಹೆಮ್ಮೆಯನ್ನು ಸ್ವಾಗತಿಸಿ ಎಂದು ಕೆಸಿಆರ್ ಅವರು ತೆಲಂಗಾಣ ಜನತೆಗೆ ಹೇಳಲು ಬಯಸುತ್ತಿದ್ದಾರೆ. ಇದು ರಾಜ್ಯದ ಚುನಾವಣೆಗೆ ಸಹಾಯ ಮಾಡುತ್ತದೆ ಎಂದು ಕೆಸಿಆರ್‌ ನಂಬಿದ್ದಾರೆ” ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇದನ್ನೂ ಓದಿರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಕೆಸಿಆರ್ ಅವರು ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನೈಜ ಯೋಜನೆಯನ್ನು ಹೊಂದಿದ್ದಾರೆ ಎಂದು ತಂತ್ರಜ್ಞರು ನಂಬುವುದಿಲ್ಲ. 2014ರಲ್ಲಿ ಜಯಲಲಿತಾ ಅವರು ರಾಷ್ಟ್ರೀಯ ನಾಯಕಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು. ಇದು ಅವರ ಇಮೇಜ್ ಅನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿತು.

ತನ್ನನ್ನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳುವ ಮೂಲಕ ಕೆಸಿಆರ್ ಬಿಜೆಪಿಯನ್ನು ತನ್ನ ಪರಮ ಶತ್ರುವೆಂಬಂತೆ ಬಿಂಬಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಕಳೆದೆರಡು ಅವಧಿಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದ್ದರಿಂದ ಕಾಂಗ್ರೆಸ್‌ನವರನ್ನು ಟೀಕಿಸಿದರೆ ಪ್ರಯೋಜನವಿಲ್ಲ. ತನ್ನನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿಕೊಳ್ಳುವ ಮೂಲಕ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ತಮ್ಮ ದಾಳಿಯನ್ನು ಕೆಸಿಆರ್‌ ಸಮರ್ಥಿಸಿಕೊಳ್ಳಬಹುದು. ಬಿಜೆಪಿಯವರನ್ನು ಪ್ರಾಥಮಿಕ ಶತ್ರುವಾಗಿ ಎದುರು ನಿಲ್ಲಿಸಬಹುದು ಎಂಬ ತಂತ್ರಗಾರಿಕೆ ಇಲ್ಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...