Homeಮುಖಪುಟರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

- Advertisement -
- Advertisement -

ಕೆಸಿಆರ್ ಎಂದೇ ಖ್ಯಾತರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಯಾವುದೋ ಒಂದು ದೊಡ್ಡ ಪ್ರಯೋಗದಲ್ಲಿ ತೊಡಗಿದ್ದಾರೆ.

ಅಧಿಕೃತವಾಗಿ ಇನ್ನೂ ಘೋಷಿಸದಿದ್ದರೂ, ತೆಲಂಗಾಣ ರಾಷ್ಟ್ರ ಸಮಿತಿ (TRS) ಶೀಘ್ರದಲ್ಲೇ BRS (ಭಾರತೀಯ ರಾಷ್ಟ್ರ ಸಮಿತಿ) ಎಂದು ಮರುನಾಮಕರಣಗೊಂಡು ರಾಷ್ಟ್ರೀಯ ಪಕ್ಷವಾಗಿ ಹೊಮ್ಮಲಿದೆ. ಕೆಸಿಆರ್ ಅವರು ತಮ್ಮ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿದ್ಯಮಾನದ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈವಾಡವಿದೆ ಎಂದು ಕೆಲವರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಆಕಾಂಕ್ಷೆಯನ್ನು ಹೊಂದಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ (ಎನ್‌ಟಿಆರ್) ನಂತರದಲ್ಲಿ ಈ ಹೆಜ್ಜೆ ಇರಿಸುತ್ತಿರುವ ದಕ್ಷಿಣ ಭಾರತದ ಮೊದಲು ರಾಜಕಾರಣಿ ಎಂದು ಕೆಸಿಆರ್‌ ಅವರನ್ನು ಕೆಲವರು ಗುರುತಿಸುತ್ತಿದ್ದಾರೆ.

‘ನ್ಯೂಸ್‌ ಮಿನಿಟ್‌’ ಜೊತೆ ಮಾತನಾಡಿರುವ ರಾಜಕೀಯ ವಿಶ್ಲೇಷಕ ಪಿ.ಪವನ್, “ಎನ್‌ಟಿಆರ್ ರಾಷ್ಟ್ರೀಯ ಪಕ್ಷ (ಭಾರತ ದೇಶಂ ಪಕ್ಷ) ಪ್ರಾರಂಭಿಸಲು ಪ್ರಯತ್ನಿಸಿದರೂ ಯಶಸ್ಸಾಗಲಿಲ್ಲ. ನಂತರ, ಚಂದ್ರಬಾಬು ನಾಯ್ಡು ಅವರು ಟಿಡಿಪಿಯನ್ನು ರಾಷ್ಟ್ರೀಯ ಪಕ್ಷವಾಗಿ ನೋಂದಾಯಿಸಿಕೊಂಡರು. ಆದರೆ ಪ್ರಧಾನಿ ಸ್ಥಾನದ ಮೇಲೆ ಅವರ ಕಣ್ಣು ಎಂದಿಗೂ ಇರಲಿಲ್ಲ. ಅವರೇ ಈ ಪ್ರಸ್ತಾಪವನ್ನು ಒಮ್ಮೆ ಅಲ್ಲ ಎರಡು ಬಾರಿ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.

“ಎನ್‌ಟಿಆರ್‌ ನಂತರದಲ್ಲಿ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮೊದಲ ಮುಖ್ಯಮಂತ್ರಿಯಾಗಿಯೂ ಕೆಸಿಆರ್‌ ಹೊಮ್ಮುತ್ತಾರೆ. ರಾಜಕೀಯ ಒತ್ತಡಗಳಿಂದಾಗಿ ದಕ್ಷಿಣ ಭಾರತದ ರಾಜಕಾರಣಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎನ್ನುತ್ತಾರೆ ಪವನ್‌.

ಪಕ್ಷದ ಹೆಸರು ಇನ್ನೂ ಪರಿಗಣನೆಯಲ್ಲಿದೆ. ಇನ್ನೂ ಅಂತಿಮಗೊಂಡಿಲ್ಲ ಎಂದು ಟಿಆರ್‌ಎಸ್‌ನ ಉನ್ನತ ಮೂಲಗಳು ಹೇಳುತ್ತವೆ. ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿ ಸಭೆಯ ಮೊದಲು ಅದನ್ನು ಅಧಿಕೃತಗೊಳಿಸಲು ಪಕ್ಷವು ಯೋಜಿಸಿದೆ ಎಂದು ಮೂಲವು ಬಹಿರಂಗಪಡಿಸಿದೆ.

‘ನವ ಭಾರತ್ ಪಕ್ಷ’, ‘ಜೈ ಭಾರತ್‌’ ಮತ್ತು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರುಗಳು ಪರಿಗಣನೆಯಲ್ಲಿವೆ ಎನ್ನಲಾಗುತ್ತಿದೆ. ಹೆಸರನ್ನು ಬದಲಾಯಿಸಬೇಕಾಗಿದ್ದರೂ, ಪಕ್ಷದ ಧ್ವಜ ಮತ್ತು ಅದರ ಟ್ರೇಡ್‌ಮಾರ್ಕ್ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳಲಾಗುತ್ತಿದೆ. ಪಕ್ಷದ ಧ್ವಜದಲ್ಲಿರುವ ತೆಲಂಗಾಣ ನಕ್ಷೆಯನ್ನು ಭಾರತೀಯ ಧ್ವಜ ಅಥವಾ ಭಾರತ ಮಾತೆಯ ಚಿತ್ರ ಅಥವಾ ಎರಡರ ಸಂಯೋಜನೆಯೊಂದಿಗೆ ಬದಲಾಯಿಸಬಹುದು ಎನ್ನಲಾಗುತ್ತಿದೆ.

ಕೆಸಿಆರ್ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶಿಸುವುದು ವಾಸ್ತವವಾಗಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದೆ ಎಂದು ಹೆಸರು ಹೇಳಲಿಚ್ಛಿಸದ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ರಾಜ್ಯದ ನಾಯಕ ತನ್ನನ್ನು ತಾನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಂಡಾಗ, ಅದು ಮೂಲತಃ ರಾಜ್ಯದ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಒಬ್ಬ ರಾಜ್ಯದ ನಾಯಕನಿಗೆ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿವೆ ಮತ್ತು ತೆಲಂಗಾಣ ಹೆಮ್ಮೆಯನ್ನು ಸ್ವಾಗತಿಸಿ ಎಂದು ಕೆಸಿಆರ್ ಅವರು ತೆಲಂಗಾಣ ಜನತೆಗೆ ಹೇಳಲು ಬಯಸುತ್ತಿದ್ದಾರೆ. ಇದು ರಾಜ್ಯದ ಚುನಾವಣೆಗೆ ಸಹಾಯ ಮಾಡುತ್ತದೆ ಎಂದು ಕೆಸಿಆರ್‌ ನಂಬಿದ್ದಾರೆ” ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇದನ್ನೂ ಓದಿರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಕೆಸಿಆರ್ ಅವರು ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನೈಜ ಯೋಜನೆಯನ್ನು ಹೊಂದಿದ್ದಾರೆ ಎಂದು ತಂತ್ರಜ್ಞರು ನಂಬುವುದಿಲ್ಲ. 2014ರಲ್ಲಿ ಜಯಲಲಿತಾ ಅವರು ರಾಷ್ಟ್ರೀಯ ನಾಯಕಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು. ಇದು ಅವರ ಇಮೇಜ್ ಅನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿತು.

ತನ್ನನ್ನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳುವ ಮೂಲಕ ಕೆಸಿಆರ್ ಬಿಜೆಪಿಯನ್ನು ತನ್ನ ಪರಮ ಶತ್ರುವೆಂಬಂತೆ ಬಿಂಬಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಕಳೆದೆರಡು ಅವಧಿಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದ್ದರಿಂದ ಕಾಂಗ್ರೆಸ್‌ನವರನ್ನು ಟೀಕಿಸಿದರೆ ಪ್ರಯೋಜನವಿಲ್ಲ. ತನ್ನನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿಕೊಳ್ಳುವ ಮೂಲಕ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ತಮ್ಮ ದಾಳಿಯನ್ನು ಕೆಸಿಆರ್‌ ಸಮರ್ಥಿಸಿಕೊಳ್ಳಬಹುದು. ಬಿಜೆಪಿಯವರನ್ನು ಪ್ರಾಥಮಿಕ ಶತ್ರುವಾಗಿ ಎದುರು ನಿಲ್ಲಿಸಬಹುದು ಎಂಬ ತಂತ್ರಗಾರಿಕೆ ಇಲ್ಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...