Homeದಲಿತ್ ಫೈಲ್ಸ್ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

- Advertisement -
- Advertisement -

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕಿನಿಂದ ಈ ಪ್ರಕರಣ ತೆರೆದುಕೊಳ್ಳುತ್ತದೆ. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗುತ್ತದೆ. ಅಂದು ಮುತ್ತುರಾಜನ ತಂದೆ ಮುತ್ತುರಾಯಪ್ಪ (65) ನೀಡಿದ ದೂರು ದಾಖಲಾಗುತ್ತದೆ. ಆದರೆ ದೂರಿನಲ್ಲಿ ಏನು ಬರೆದಿದೆ ಎಂಬುದೇ ಗೊತ್ತಾಗದ, ಕೇವಲ ಸಹಿ ಮಾಡಲು ಬರುವ ಮುತ್ತುರಾಯಪ್ಪ ಮತ್ತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರುತ್ತಾರೆ.

ಶವವಾಗಿ ಪತ್ತೆಯಾದ ಮುತ್ತುರಾಜನನ್ನು ಸವರ್ಣೀಯ ಜಾತಿಯವರು ಕೊಂದಿದ್ದಾರೆ ಎಂಬುದು ಮುತ್ತುರಾಯಪ್ಪನವರ ಕುಟುಂಬದ ಆರೋಪ. ಜಕ್ಕೇನಹಳ್ಳಿಯ ಜಿಲ್ಲಾ ಪೊಲೀಸ್ ಕಚೇರಿಗೆ ಜೂನ್‌ 7ರಂದು ತೆರಳಿದ ಮುತ್ತುರಾಯಪ್ಪ ಹೀಗೆ ದೂರು ನೀಡುತ್ತಾರೆ:

“ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿಗಳು ನಾನು ನೀಡಿದ್ದ ಕೈ ಬರವಣಿಗೆಯ ದೂರನ್ನು ಮರೆಮಾಚಿ ಪೊಲೀಸ್‌ನವರೇ ಒಂದು ದೂರನ್ನು ಸೃಷ್ಟಿ ಮಾಡಿಕೊಂಡು ಅನಕ್ಷರಸ್ಥನಾದ ನನ್ನ ಸಹಿಯನ್ನು ಪಡೆದುಕೊಂಡು ನನಗೆ ಅನ್ಯಾಯ ಮಾಡಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಕ್ಕೇನಹಳ್ಳಿ  ಗ್ರಾಮದ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಚಾನಲ್‌ನಲ್ಲಿ ನನ್ನ ಮಗನಾದ ಮುತ್ತುರಾಜನ ಮೃತದೇಹವು ತೇಲುತ್ತಿತ್ತು. ಸಾರ್ವಜನಿಕರು ಗಮನಿಸಿ ವಿಚಾರ ತಿಳಿಸಿದರು. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ಬಂದರು. ಪೊಲೀಸ್‌ನವರ ಸಮಕ್ಷಮ ಮೃತ ದೇಹವನ್ನು ಹೊರತೆಗೆದು ತುಮಕೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ನಮ್ಮ ವಶಕ್ಕೆ ಕೇಳಿದಾಗ ಪೊಲೀಸರ ಕಂಪ್ಲೇಟ್ ಅಗತ್ಯವೆಂದರು. ಆ ದಿನ ನಾನು ತುಂಬ ದುಃಖಿತನಾಗಿದ್ದೆ. ಏನನ್ನೂ ಸರಿಯಾಗಿ ಹೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ನಾನು ನನಗೆ ಗೊತ್ತಿರುವ ಒಬ್ಬರಿಂದ ಒಂದು ದೂರನ್ನು ಕೈಯಲ್ಲಿ ಬರೆಯಿಸಿ ಆ ದೂರಿಗೆ ನಾನು ಸಹಿ ಮಾಡಿರುತ್ತೇನೆ. ನಾನು ಸಹಿ ಮಾಡುವುದನ್ನು ಮಾತ್ರ ಕಲಿತಿರುತ್ತೇನೆ. ಓದಲು, ಬರೆಯಲು ಬರುವುದಿಲ್ಲ. ಆದರೆ ಪೊಲೀಸ್‌ನವರು ನಾನು ನೀಡಿದ್ದ ದೂರನ್ನು ಮರೆಮಾಚಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನಾಸ್ಪದ ವ್ಯಕ್ತಿಗಳನ್ನು ಕಾಪಾಡುವ ಸಲುವಾಗಿ ಅಮಾಯಕನಾದ ನನಗೆ ಮೋಸ ಮಾಡಿರುತ್ತಾರೆ” ಎಂದು ಮುತ್ತುರಾಯಪ್ಪ ಆರೋಪಿಸುತ್ತಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಕುಟುಂಬ ಏನು ಹೇಳುತ್ತದೆ? ಆರೋಪಿಗಳು ಯಾರು?

ಮಹಾಲಕ್ಷ್ಮಮ್ಮ- ಮುತ್ತುರಾಯಪ್ಪ ಜಕ್ಕೇನಹಳ್ಳಿ ಗ್ರಾಮದ ದಂಪತಿ. ಇವರಿಗೆ ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಗಂಡು ಮಗ. ಮೂವರು ಹೆಣ್ಣುಮಕ್ಕಳಲ್ಲಿ ನಡುಮಧ್ಯೆಯವರಾದ ಮುತ್ತಮ್ಮ ಅವರು ಜಕ್ಕೇನಹಳ್ಳಿಯ ಗ್ರಾಮದ ಒಕ್ಕಲಿಗ ಜಾತಿಯ ನಾಗರಾಜ್‌ (ಕೆಎಸ್‌ಆರ್‌ಟಿಸಿ ಡ್ರೈವರ್‌) ಎಂಬವರನ್ನು ಸುಮಾರು ಆರೇಳು ವರ್ಷಗಳ ಹಿಂದೆ ಮದುವೆಯಾಗುತ್ತಾರೆ. ನಾಗರಾಜ್‌- ಮುತ್ತಮ್ಮ ಕುಟುಂಬ ತುಮಕೂರಿನಲ್ಲೇ ವಾಸವಿತ್ತು.

ನಾಗರಾಜ್‌ ಅವರ ಬಾಮೈದ ಬಸವರಾಜನು ಮುತ್ತುರಾಜನ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದನು. “ನಿಮ್ಮಕ್ಕ ನಮ್ಮ ಭಾವನನ್ನು ಮದುವೆಯಾದ ಕಾರಣ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ” ಎಂದು ತಕರಾರು ತೆಗೆಯುತ್ತಿದ್ದನು. ಮುತ್ತರಾಜ ತನ್ನ ಅಕ್ಕನಲ್ಲಿ ಹೋಗಿ, “ಆಗಿದ್ದು ಆಗಿಹೋಯಿತು. ನಾನು ನಿನ್ನನ್ನು ಸಾಕಿಕೊಳ್ಳುತ್ತೇನೆ. ನಮ್ಮ ಮನೆಗೆ ಬಂದು ಬಿಡು” ಎಂದು ಕೇಳಿಕೊಂಡಿದ್ದ. ಅವರು ಬಂದಿರಲಿಲ್ಲ.

ಕೊಲೆಯಾಗುವ ಸಮಯದಲ್ಲಿ ಜಕ್ಕೇನಹಳ್ಳಿಯಲ್ಲಿ ಜಾತ್ರೆ ಇತ್ತು. ಅದಕ್ಕೂ ಐದಾರು ದಿನಗಳ ಮುಂಚೆ ಬಸವರಾಜನು ಮುತ್ತುರಾಜನೊಂದಿಗೆ ಚೆನ್ನಾಗಿ ಹೊಂದಾಣಿಕೆಯಿಂದ ಇದ್ದನು. ಏಪ್ರಿಲ್‌ 28ರ ಮಧ್ಯಾಹ್ನ 3 ಗಂಟೆಯ ಸಮಯದಲ್ಲಿ ಮನೆಯ ಬಳಿ ಬಂದ ಬಸವರಾಜ, ಮುತ್ತುರಾಜರನ್ನು ಕರೆದುಕೊಂಡು ಹೋಗುತ್ತಾನೆ. ಮುತ್ತುರಾಜ ಟವೆಲ್‌ ಧರಿಸಿದ್ದರು. ಸಂಜೆ ವೇಳೆಗೆ ಮತ್ತೆ ಒಬ್ಬನೇ ಮರಳಿದ ಬಸವರಾಜನು ಮುತ್ತುರಾಜನ ಟವೆಲ್ ವಾಪಸ್‌ ತಂದಿರುತ್ತಾನೆ. “ಟವಲ್‌ ಮಾತ್ರ ತಂದಿದ್ದೀಯ. ನಮ್ಮ ಹುಡುಗ ಎಲ್ಲೋ” ಎಂದು ಮಹಾಲಕ್ಷ್ಮಮ್ಮ  ಕೇಳುತ್ತಾರೆ. ಆದರೆ ಆತ, “ನನಗೆ ಮಾಹಿತಿ ಇಲ್ಲ” ಎಂದು ಹೇಳುತ್ತಾನೆ.

ಮುತ್ತುರಾಯಪ್ಪನವರ ಹೆಂಡತಿ ಮಹಾಲಕ್ಷ್ಮಮ್ಮ ತುಮಕೂರಿನ ನರಸಿಂಹಯ್ಯ ಆಸ್ಪತ್ರೆಯಲ್ಲಿ ಸ್ಲೀಪರ್‌ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಗೆಂದು ಅಂದು ಸಂಜೆ ಹೋಗಿರುತ್ತಾರೆ. ಬೆಳಿಗ್ಗೆ ವಾಪಸ್‌ ಮನೆಗೆ ಮರಳಿದಾಗ ಅವರಿಗೆ ಕೆಟ್ಟ ಸುದ್ದಿ ಕಾದಿರುತ್ತದೆ.

ಪೊಲೀಸರು ಬಂದು ಹೆಣವನ್ನು ಶವಾಗಾರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಣವನ್ನು ಕುಟುಂಬಕ್ಕೆ ಹಸ್ತಾಂತರಿಸುತ್ತಾರೆ. ರಾತ್ರಿ ಅಂತ್ಯಸಂಸ್ಕಾರ ನಡೆಯುತ್ತದೆ. ಅಂದು ಹತ್ತು ಗಂಟೆಯ ಸಮಯದಲ್ಲಿ ನಾಗರಾಜ್‌ (ಮುತ್ತಮ್ಮನ ಗಂಡ) ಕುಡಿದ ಮತ್ತಲ್ಲಿ- “ನಾವೇ ಕೊಲೆ ಮಾಡಿದ್ದೀವಿ” ಎಂದು ಹೇಳಿದ್ದರು ಎಂದು ಕುಟುಂಬ ಆರೋಪಿಸುತ್ತದೆ.

ಎಸ್‌ಪಿಗೆ ದೂರು

ನ್ಯಾಚುರಲ್‌ ಡೆತ್‌ ಎಂದು ಹೇಳಲಾಗುತ್ತಿತ್ತು. ಆದರೆ ಕುಟುಂಬ ಇದನ್ನು ಒಪ್ಪಲಿಲ್ಲ. ವಿಷಯ ಅರಿತ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರಕರಣವನ್ನು ಮುಚ್ಚಿ ಹಾಕಲು ಬಿಡಲಿಲ್ಲ. ಮೇ 7ರಂದು ಎಸ್‌ಪಿಗೆ ವಿಷಯ ತಿಳಿಸಿದರು. ಬಳಿಕ ಮೇ 18ರಂದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮರು ದೂರು ನೀಡಿದ ಬಳಿಕ ಪ್ರಕರಣದ ದಾಖಲಾಗುತ್ತದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

“ನನ್ನ ಮಗನಿಗೆ ಈಜಲು ಬರುತ್ತಿತ್ತು. ಒಕ್ಕಲಿಗ ಜನಾಂಗಕ್ಕೆ ಸೇರಿದ ಬಸವರಾಜು ಮತ್ತು ಆತನ ಸ್ನೇಹಿತರು ಸೇರಿ ನನ್ನ ಮಗನಾದ ಮುತ್ತುರಾಜನನ್ನು ಕೊಲೆ ಮಾಡಿ ನಾಲೆಗೆ ಹಾಕಿರುತ್ತಾರೆ” ಎಂದು ಮುತ್ತುರಾಯಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಐಪಿಸಿ ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟ ಡಿವೈಎಸ್‌ಪಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಮಾಹಿತಿ ನೀಡಲು ನಿರಾಕರಿಸಿದ ಅವರು, ಎಸ್‌ಪಿಯವರನ್ನು ಸಂಪರ್ಕಿಸಿ ಎಂದು ಪ್ರತಿಕ್ರಿಯಿಸಿದರು.

“ಇಷ್ಟೆಲ್ಲ ಆದ ಮೇಲೆ, ಪ್ರಕರಣ ಏನಾಯಿತೆಂಬ ಮಾಹಿತಿ ದೊರಕುತ್ತಿಲ್ಲ. ಅವರಿವರಲ್ಲಿಗೆ ಓಡಾಡಲು ನಮ್ಮ ಬಳಿ ದುಡ್ಡು-ಕಾಸು ಇಲ್ಲ. ಏನು ಮಾಡಬೇಕೆಂದು ತೋಚುತ್ತಿಲ್ಲ. ತಪ್ಪಿತಸ್ಥರ ಬಂಧನವಾಗಿದೆಯೋ ಇಲ್ಲವೋ ಗೊತ್ತಿಲ್ಲ” ಎಂದು ಕುಟುಂಬ ಸದಸ್ಯರು ದುಃಖಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...