Homeರಾಷ್ಟ್ರೀಯದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ:...

ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ಅವರ ಹೇಳಿಕೆ ತಿರುಚಿ ಬರೆದ ‘ಇಂಡಿಯಾ ಟುಡೆ’!

- Advertisement -
- Advertisement -

ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ ಎಂದು ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರು ಪ್ರತಿಪಾದಿಸಿದ್ದಾರೆ.

ಅವರು ತನ್ನ ಮುಂಬರುವ ‘ವಿರಾಟ ಪರ್ವಂ’ ಚಿತ್ರದ ಬಗ್ಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡುತ್ತಾ, ಮುಸ್ಲಿಂ ಎಂಬ ಕಾರಣಕ್ಕೆ ನಡೆದ ಗುಂಪು ಹತ್ಯೆಯ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಯಿ ಪಲ್ಲವಿ ಅವರು ರಾಣಾ ದಗ್ಗುಬಾಟಿ ಅವರೊಂದಿಗೆ ತೆರೆ ಹಂಚಿಕೊಂಡಿರುವ ‘ವಿರಾಟ ಪರ್ವಂ’ ಚಿತ್ರವು ಜೂನ್ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂಬರುವ ಚಿತ್ರದ ಬಗ್ಗೆ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಸಾಯಿ ಪಲ್ಲವಿ ಅವರಿಗೆ ರಾಜಕೀಯ ಒಲವಿನ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸುತ್ತಾ ಅವರು, “ತಾನು ಸೈದ್ಧಾಂತಿಕವಾಗಿ ತಟಸ್ಥೆಯಾಗಿದ್ದು, ನಾನು ಬೆಳೆದ ವಾತಾವರಣ ಅದೇ ರೀತಿ ಇತ್ತು” ಎಂದು ಹೇಳಿದ್ದಾರೆ. ಎಡಪಂಥೀಯ ಅಥವಾ ಬಪಂಥೀಯರಲ್ಲಿ, ಯಾರು ಸರಿ ಯಾರು ತಪ್ಪು ಎಂದು ಹೇಳಲಾರೆ, ನಾವು ಒಳ್ಳೆಯವರಾಗಬೇಕು ಎಂದು ಅವರು ಹೇಳಿದ್ದಾರೆ.

“ನಾನು ತಟಸ್ಥ ವಾತಾವರಣದಲ್ಲಿ ಬೆಳೆದಿದ್ದೇನೆ. ನಾನು ಎಡಪಂಥೀಯ ಮತ್ತು ಬಲಪಂಥೀಯರ ಬಗ್ಗೆ ಕೇಳಿದ್ದೇನೆ. ಆದರೆ, ಯಾರು ಸರಿ, ಯಾರು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ದಿ ಕಾಶ್ಮೀರಿ ಫೈಲ್ಸ್‌ ಚಿತ್ರವನ್ನೇ ನೋಡಿ, ಪಂಡಿತರನ್ನು ಹೇಗೆ ಕೊಂದರು ಎನ್ನುವುದನ್ನು ಅದು ತೋರಿಸುತ್ತದೆ. ಇತ್ತೀಚೆಗೆ ಕೊರೊನಾ ಸಮಯದಲ್ಲಿ ದನ ಸಾಗಿಸುತ್ತಿದ್ದರು. ಅದರ ಡ್ರೈವರ್‌ ಮುಸ್ಲಿಂ ಆಗಿದ್ದರು ಎಂಬ ಕಾರಣಕ್ಕೆ ಕೊಂದ ಘಟನೆ ನಡೆದಿತ್ತು. ಆ ವ್ಯಕ್ತಿಯನ್ನು ಕೊಂದ ಬಳಿಕ ದಾಳಿಕೋರರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಕಾಶ್ಮೀರದಲ್ಲಿ ನಡೆದದ್ದಕ್ಕೂ ಇತ್ತೀಚೆಗೆ ನಡೆದದ್ದಕ್ಕೂ ವ್ಯತ್ಯಾಸವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ತನ್ನ ಕುಟುಂಬವು ತನಗೆ ಒಳ್ಳೆಯ ವ್ಯಕ್ತಿಯಾಗಲು ಕಲಿಸಿದೆ. ನಾವು ತುಳಿತಕ್ಕೊಳಗಾದವರನ್ನು ರಕ್ಷಿಸಬೇಕು. ಅವರ ನಿಲುವು ಮುಖ್ಯವಲ್ಲ, ನೀವು ಒಳ್ಳೆಯ ಮನುಷ್ಯನಾಗಿದ್ದರೆ ಸಾಕು” ಎಂದು ಸಾಯಿ ಪಲ್ಲವಿ ಅವರು ಹೇಳಿದ್ದಾರೆ.

ಸಾಯಿ ಪಲ್ಲವಿ ಅವರ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಕಾಶ್ಮೀರ ಪಂಡಿತರ ಹತ್ಯೆ ಮತ್ತು ಗೋವು ಕಾರಣಕ್ಕೆ ಮುಸ್ಲಿಮರ ಮೇಲೆ ನಡೆಯುತ್ತಿರುವ ಗುಂಪುಹತ್ಯೆಯನ್ನು ಒಂದೇ ಎಂದು ಹೇಳಿದ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯರು ಅವರ ಮೇಲೆ ದಾಳಿಯನ್ನೂ ಮಾಡುತ್ತಿದ್ದಾರೆ. ಜೊತೆಗೆ ಅವರು ‘ದನಕಳ್ಳಸಾಗಾಣಿಕೆ’ ಮಾಡುವವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರ ಹೇಳಿಕೆಯನ್ನು ತಿರುಚಿ ಅವರ ಮೇಲೆ ದಾಳಿ ಮಾಡಲಾಗುತ್ತಿದೆ.

ಇಂಗ್ಲಿಷ್‌ ಸುದ್ದಿ ವಾಹಿನಿ ಇಂಡಿಯಾ ಟುಡೇ ಕೂಡಾ, ಅವರ ಹೇಳಿಕೆಯನ್ನು ತಿರುಚಿ, “ಕಾಶ್ಮೀರ ಹತ್ಯಾಕಾಂಡ ಮತ್ತು ‘ದನ ಕಳ್ಳ ಸಾಗಾಣಿಕೆ’ ಮಾಡಿದ್ದಕ್ಕೆ ಮಾಡಿದ ಹತ್ಯೆ, ಈ ಎರಡೂ ಅಪರಾಧಗಳು ಒಂದೇ ಎಂದು ನಟಿ ಸಾಯಿ ಪಲ್ಲವಿ ಹೇಳಿದ್ದಾರೆ” ಎಂಬ ಹೆಡ್‌ಲೈನ್‌ನಲ್ಲಿ ಸುದ್ದಿ ಮಾಡಿದೆ.

ಇಂಡಿಯಾ ಟುಡೆ ವರದಿ

ವಾಸ್ತವದಲ್ಲಿ ಸಾಯಿ ಪಲ್ಲವಿ ಅವರು ‘ದನ ಸಾಗಾಣಿಕೆ’ ಎಂಬ ಪದವನ್ನಷ್ಟೆ ಬಳಸಿದ್ದಾರೆ. ‘ದನ ಕಳ್ಳಸಾಗಾಣಿಕೆ’ ಎಂದು ಅವರು ಹೇಳಿಯೆ ಇಲ್ಲ. ಆದರೆ ಬಲಪಂಥೀಯರು ಅವರ ಹೇಳಿಕೆಯನ್ನು ತಿರುಚಿ ಮುಸ್ಲಿಮರ ಮೇಲೆ ನಡೆಯುತ್ತಿರುವ ‘ಗುಂಪು ಹತ್ಯೆಯನ್ನು’ ಸಮರ್ಥಿಸಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...