Homeಮುಖಪುಟ"ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ": ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

“ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ”: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

- Advertisement -
- Advertisement -

ನಿನ್ನೆ ತಾನೇ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಅಗ್ನಿಪಥ್ ಸೈನಿಕರ ನೇಮಕಾತಿ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕೇವಲ ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಕೆಲಸ ಬೇಡ ಎಂದು ಪೂರ್ಣ ಪ್ರಮಾಣದ ಸುಭದ್ರ ಉದ್ಯೋಗ ಆಕಾಂಕ್ಷಿಗಳು ಉತ್ತರ ಪ್ರದೇಶದ ಹಲವೆಡೆ ಇಂದು ಪ್ರತಿಭಟನೆ ನಡೆಸಿದ್ದಾರೆ.

ನರೇಂದ್ರ ಮೋದಿಯವರು ಮಂಗಳವಾರ ಹೊಸ ಯೋಜನೆ ಘೋಷಿಸಿದ್ದರು. ಅದರಂತೆ 17.5 ವರ್ಷ ತುಂಬಿದ ಮತ್ತು 21 ವರ್ಷದೊಳಗಿನ 45000 ಯುವಜನರನ್ನು ಭಾರತೀಯ ಸೇನೆಗೆ ಅರೆಕಾಲಿಕ ಸಮಯಕ್ಕೆ ಗುತ್ತಿಗೆ ಆಧಾರಲದಲ್ಲಿ ನೇಮಿಸಿಕೊಳ್ಳುವುದಾಗಿ ಘೋಷಿಸಿದ್ದರು. ಅವರನ್ನು ಅಗ್ನಿವೀರ್ ಎಂದು ಕರೆಯಲಾಗುವುದು ಮತ್ತು ಅದರಲ್ಲಿ ಕೇವಲ 25% ಸೈನಿಕರಿಗೆ ಮಾತ್ರ ಭತ್ಯೆ-ಸಂಬಳ ಸೌಲಭ್ಯ ನೀಡುವುದಾಗಿ ಉಳಿದ 75% ಜನರು 4 ವರ್ಷಗಳ ಸೇವೆ ಮುಗಿಸಿ ನಿವೃತ್ತರಾಗಬೇಕೆಂದು ಹೇಳಲಾಗಿತ್ತು. ಈ ಯೋಜನೆಗೆ ರಾಷ್ಟ್ರದ್ಯಾಂತದ ಯುವಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ ಎಂಬ ಘೋಷಣೆಗಳೊಂದಿಗೆ ಉತ್ತರ ಪ್ರದೇಶ ಮತ್ತು ಬಿಹಾರದ ಹಲವೆಡೆ ಯುವಜನರು ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ರೈಲು ತಡೆ ಹೋರಾಟ ನಡೆಸಲಾಗಿದೆ. ಮುಜಾಫರ್‌ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು “ನಾವು ಸೈನಿಕರ ನೇಮಕಾತಿ ಮಾಡಿಕೊಳ್ಳುತ್ತಾರೆ ಎಂದು ಸತತ ಎರಡು ವರ್ಷಗಳಿಂದ ಕಾದಿದ್ದೇವೆ. ಆದರೆ ಕೊರೊನಾ ನೆಪ ಹೇಳಿ ನೇಮಕಾತಿ ನಡೆದಿಲ್ಲ. ಈಗ ಸರ್ಕಾರವು ಗುತ್ತಿಗೆ ಆಧಾರದಲ್ಲಿ ಕೇವಲ 4 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಮುಂದಾಗಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದಿದ್ದಾರೆ.

ವಯೋಮಿತಿಯನ್ನು ಸಹ 21ಕ್ಕೆ ವರ್ಷಕ್ಕೆ ಇಳಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಕಾದಿರುವ ಯುವಜನರು ಏನು ಮಾಡಬೇಕು. ಎರಡು ವರ್ಷಗಳ ಕಾಲ ನೇಮಕಾತಿ ಮಾಡದೇ ಇರುವುದು ಸರ್ಕಾರದ ತಪ್ಪು. ಹಾಗಾಗಿ ವಯೋಮಿತಿಯನ್ನು ಎರಡು ವರ್ಷ ಏರಿಸಿದರೆ ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.

ನಮ್ಮನ್ನು ಮೂರ್ಖರನ್ನಾಗಿ ಮಾಡಲಾಗಿದೆ. ನಮ್ಮೊಂದಿಗೆ ಸರ್ಕಾರ ಪಬ್‌ಜಿ ರೀತಿ ಆಡುತ್ತಿದೆ. ಇಷ್ಟು ದಿನ ನೇಮಕಾತಿ ಮಾಡಿಕೊಳ್ಳದಿರುವುದು ಏಕೆ ಎಂದು ಯಾವುದೇ ಬಿಜೆಪಿ ನಾಯಕರು ಹೇಳಿಲ್ಲ. ಈಗ ಇದ್ದಕ್ಕಿದ್ದಂತೆ ಹೊಸ ಯೋಜನೆ ತಂದಿದ್ದಾರೆ. ನಮಗೆ ಭದ್ರತೆಯ ಉದ್ಯೋಗ ಸಿಗುವವರೆಗೂ ಹೋರಾಡುತ್ತೇವೆ ಎಂದು ಪ್ರತಭಟನಾಕಾರರು ಹೇಳಿದ್ದಾರೆ.

ಸರ್ಕಾರವು ಅಗ್ನಿಪಥ್ ಯೋಜನೆಯನ್ನು “ಐತಿಹಾಸಿಕ” ಎಂದು ಕರೆದಿದೆ. ಸುಮಾರು 45,000 ಸೈನಿಕರನ್ನು ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಅಲ್ಪಾವಧಿಯ ಒಪ್ಪಂದದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದೆ. ಆ ಮೂಲಕ ಸಂಬಳ ಮತ್ತು ಪಿಂಚಣಿ ಬಿಲ್‌ಗಳ ಹೊರೆ ಕಡಿಮೆ ಮಾಡಿಕೊಳ್ಳಲು ಯೋಚಿಸುತ್ತಿದೆ. ಮುಂದಿನ 90 ದಿನಗಳಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, ಜುಲೈ 2023 ರ ವೇಳೆಗೆ ಮೊದಲ ಬ್ಯಾಚ್ ಸಿದ್ಧವಾಗಲಿದೆ ಎಂದು ಸರ್ಕಾರ ಹೇಳಿದೆ.

ಸರ್ಕಾರದ ಯೋಜನೆಯನ್ನು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ. “ದೇಶದ ಅತಿ ದೊಡ್ಡ ಉದ್ಯೋಗದಾತರಾದ “ಭಾರತೀಯ ರೈಲ್ವೇ ಮತ್ತು ಸೈನ್ಯ”ದ ನಾಗರಿಕ ಸೇವೆಯಲ್ಲಿ ಗುತ್ತಿಗೆ ಮತ್ತು ಲ್ಯಾಟರಲ್ ಎಂಟ್ರಿಯ ಹೆಸರಿನಲ್ಲಿ ಉದ್ಯೋಗಗಳನ್ನು ನೀಡಲು ಪ್ರಾರಂಭಿಸಿದರೆ ಯುವಕರು ಏನು ಮಾಡುತ್ತಾರೆ? ಭವಿಷ್ಯದಲ್ಲಿ ಬಿಜೆಪಿಯ ಬಂಡವಾಳಶಾಹಿ ಸ್ನೇಹಿತರ ವ್ಯಾಪಾರದ ನೆಲೆಗಳನ್ನು ಕಾಪಾಡಲು ಯುವಕರು ಕೇವಲ 4 ವರ್ಷಗಳ ಗುತ್ತಿಗೆ ಕೆಲಸವನ್ನು ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...