Homeಕರ್ನಾಟಕಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

- Advertisement -
- Advertisement -

ಖಾಕಿ ಚಡ್ಡಿ ತೊಟ್ಟ ಬಿಜೆಪಿಯು ತಮ್ಮ ಎದುರಾಳಿಗಳನ್ನು ನಿಂದಿಸಲು ತುಕ್ಡೆಗ್ಯಾಂಗ್ ಎಂಬ ಪದವನ್ನು ಬಳಸುತ್ತದೆ. ನಿಜವಾದ ಟೂಲ್ ಕಿಟ್ ರಾಜಕಾರಣ ಅಥವಾ ಪ್ಯಾಕೇಜ್ ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಸಂಕಷ್ಟ ಬಂದಾಗಲೆಲ್ಲ ‘ತುಕ್ಡೆ ಗ್ಯಾಂಗು’ ಎಂಬಂತಹ ಮಾಯಾವಿ ಪದಗಳನ್ನು ಪ್ಯಾಕೇಜಿನಂತೆ ಒಬ್ಬರಾದ ಮೇಲೆ ಒಬ್ಬರು ಬಳಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

“ಪಠ್ಯ ಪುಸ್ತಕ ಪರಿಷ್ಕರಣೆ ಪ್ರಕರಣದಿಂದ ಕಂಗೆಟ್ಟಿರುವ ಸರ್ಕಾರ ಮತ್ತು ಅದರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಾವು ಸಚಿವರೆಂಬ ಜವಾಬ್ಧಾರಿಯನ್ನು ಮರೆತು ನಾಡೋಜ ಬರಗೂರು ರಾಮಚಂದ್ರಪ್ಪ ಮುಂತಾದ ದಮನಿತ ವರ್ಗಗಳ ಧ್ವನಿಗಳನ್ನು ಅವಮಾನಿಸಬೇಕೆಂದೆ ‘ತುಕ್ಡೆ ಗ್ಯಾಂಗ್’ ನವರು ಎಂದು ಅವಮಾನಿಸಿದ್ದಾರೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಎಂಬ ರೋಗಿಷ್ಠ ಮನಸ್ಥಿತಿಯ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯು, ಉಸಿರಾಡುತ್ತಿರುವ ಜೀವಿಗಳಲ್ಲಿ ಬ್ರಾಹ್ಮಣರು ಶ್ರೇಷ್ಠರು, ಬ್ರಾಹ್ಮಣರಲ್ಲಿ ಮಾಧ್ವರು ಶ್ರೇಷ್ಠರು ಎಂಬ ನಿಲುವಿನಲ್ಲಿ ಪಾಠಗಳನ್ನು ಮಕ್ಕಳಿಗೆ ಕಲಿಸಲು ಶಿಫಾರಸ್ಸು ಮಾಡಿದೆ. ಸರ್ಕಾರ ಇಂಥ ಕೆಟ್ಟ ಮನುಷ್ಯ ವಿರೋಧಿ ನಿಲುವನ್ನು ಮಕ್ಕಳಿಗೆ ಕಲಿಸಲು ಹೊರಟಿದೆ. ಇದರ ಮೂಲಕ ಶೂದ್ರ-ದಲಿತ-ಮಹಿಳೆಯರಿರುವ 98% ರಷ್ಟು ಜನರನ್ನು ದಮನಿಸಲು ಹೊರಟಿದ್ದಾರೆ” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

“ಬುದ್ಧ, ಮಹಾವೀರ, ಬಸವಣ್ಣ, ಕನಕದಾಸರು, ನಾರಾಯಣ ಗುರುಗಳು, ಸಾವಿತ್ರಿ ಫುಲೆ, ಅಂಬೇಡ್ಕರ್, ಕುವೆಂಪು, ಉತ್ತರ ಕರ್ನಾಟಕದ ಕವಿ ಸಾಹಿತಿಗಳು, ಹೆಮ್ಮೆಯ ನಾಡಗೀತೆ, ಮನುವಾದ ವಿರೋಧಿ ಭಕ್ತಿ ಪಂಥ, ದೇವನೂರ ಮಹಾದೇವ ಮುಂತಾದ ಶೂದ್ರ-ದಲಿತ ಬರೆಹಗಾರರು ಹೀಗೆ ಎಲ್ಲರನ್ನೂ ಅವಮಾನಿಸಿ, ನಿರ್ಲಕ್ಷಿಸಿ ಶ್ರಮ ವಿರೋಧಿಯಾದ, ಕುವೆಂಪು ಅವರು ಹೇಳಿದ ಹಾಗೆ ಉತ್ಪಾದಕ ವರ್ಗದವರನ್ನು ನಿರ್ಲಕ್ಷಿಸಿ, ಕೇವಲ ಸಂಗ್ರಾಹಕ ವರ್ಗದ ಜನರು ರಚಿಸಿದ ಜೊಳ್ಳನ್ನು ಮಕ್ಕಳಿಗೆ ಕಲಿಸಲು ಹೊರಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ಪ್ರಶ್ನಿಸಿ ನಾಡಿನಾದ್ಯಂತ ಸ್ವಾಮೀಜಿಗಳು, ಗುರು ಹಿರಿಯರು, ಜನ ಸಾಮಾನ್ಯರು, ವಿದ್ವಾಂಸರು, ಜನಪರರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನೆಯನ್ನು ಕಂಡು ಕಂಗೆಟ್ಟು ಕೂತಿರುವ ಬಿಜೆಪಿಯ ಕೆಲವು ಶೂದ್ರ ಹಾಗೂ ಅಗ್ರಹಾರದ ಗೇಟ್‍ಕೀಪರುಗಳಾದವರು ಸೇರಿದಂತೆ, ಹಲವು ‘ತುಕ್ಡೆ ಗ್ಯಾಂಗ್’ನವರು, ರಾಷ್ಟ್ರೀಯ ಹಿತಾಸಕ್ತಿಗಾಗಿ ಇದೆಲ್ಲ ಸಹಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ”

“ಹಾಗಿದ್ದರೆ ನಿಜವಾದ ತುಕ್ಡೆ ಗ್ಯಾಂಗ್‍ನವರು ಯಾರು? ಎಂದು ಸ್ವಲ್ಪ ಮೆದುಳಿರುವವರು ಯೋಚಿಸಿದರೆ ಅರ್ಥವಾಗುತ್ತದೆ. ಬಿಜೆಪಿಯಲ್ಲಿರುವವರು ಮತ್ತು ಬಿಜೆಪಿಯ ಸಿದ್ಧಾಂತವನ್ನು ಹುಟ್ಟಿಸಿದವರೆ ತುಕ್ಡೆ ಗ್ಯಾಂಗಿನ ಜನ. ಯಾರು ತುಕ್ಡೆ ಗ್ಯಾಂಗನವರು ಹೇಳಿ ಬಿಜೆಪಿಗರೆ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

“ಜಗತ್ತಿನ ಶ್ರೇಷ್ಠ ಸಂಸ್ಕೃತಿಯಾಗಿದ್ದ, ದ್ರಾವಿಡರೆ ನಿರ್ಮಿಸಿದ್ದ ಸಿಂಧೂ ನಾಗರಿಕತೆಯನ್ನು ಧ್ವಂಸ ಮಾಡಿದ ಆರ್ಯರು, ವಿರಾಟ್ ಪುರುಷನ ತಲೆಯಿಂದ ಬ್ರಾಹ್ಮಣ ಹುಟ್ಟಿದ, ಪಾದಗಳಿಂದ ಶೂದ್ರರು ಹುಟ್ಟಿದರು ಎಂದು ಬರೆದು ಅದನ್ನೆ ಕಾನೂನು ಮಾಡಿ ಜನರನ್ನು ಶಾಶ್ವತವಾಗಿ ಒಡೆದು ಹಾಕಿದ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂದಿನ ತಳಿವಿಜ್ಞಾನ ಹೇಳುತ್ತಿರುವ ಪ್ರಕಾರ 2500 ವರ್ಷಗಳ ಹಿಂದೆ ಅಮಾನುಷವಾದ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿ, ವೃತ್ತಿ, ಹುಟ್ಟುಗಳ ಮೇಲೆ ಮನುಷ್ಯ ಸಮುದಾಯಗಳನ್ನು ಒಡೆದು ಹಾಕಿ ಭಾರತದಲ್ಲಿ ನರಕದಂತಹ ಸಮಸ್ಯೆಗಳನ್ನು ಸೃಷ್ಟಿ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ನಾಗಪುರದ ತಮ್ಮ ಕಛೇರಿಯ ಮೇಲೆ ಇತ್ತೀಚಿನವರೆಗೂ ರಾಷ್ಟ್ರಧ್ವಜವನ್ನು ಹಾರಿಸದೆ ನಿರ್ಲಕ್ಷ್ಯ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮನುವಾದವನ್ನು ಜಾರಿಗೆ ತರಲು ನಿರಂತರ ಪ್ರಯತ್ನಿಸುತ್ತಿರುವವರು ತುಕ್ಡೆ ಗ್ಯಾಂಗಿನವರಲ್ಲವೆ? ಗಾಂಧೀಜಿಯರನ್ನು ಕೊಂದ ಗೋಡ್ಸೆಯನ್ನು ಆರಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಇಟಲಿಯ ಮುಸಲೋನಿಯಿಂದ ಫ್ಯಾಸಿಸಂ ಅನ್ನು ಕಲಿತು ಬಂದ ಮೂಂಜೆಯವರು ತಮ್ಮ ಶಿಷ್ಯ ಹೆಡಗೆವಾರ್ ಮೂಲಕ ಆರ್‌ಎಸ್‍ಎಸ್ ಅನ್ನು ಸ್ಥಾಪಿಸಿ ಒಂದು ವರ್ಗದ ಹಿತಾಸಕ್ತಿಯನ್ನು ಪೊರೆಯಲು ಕಂಕಣ ತೊಟ್ಟಿದ್ದು ತುಕ್ಡೆವಾದವಲ್ಲವೆ?”

“ಹಿಟ್ಲಟರನನ್ನು ರಾಕ್ಷಸ ಎಂದೂ ಅವನ ಸಿದ್ಧಾಂತವನ್ನು ದುಷ್ಟ, ಸೈತಾನ ಸಿದ್ಧಾಂತ ಎಂದು ತೀರ್ಮಾನಿಸಿ ಅದನ್ನು ಇಡೀ ಯುರೋಪಿನಿಂದಲೆ ಹೊಡೆದೋಡಿಸುತ್ತಿದ್ದರೂ ಆರ್‌‌ಎಸ್‍ಎಸ್ ಮಾತ್ರ ಹಿಟ್ಲರನ ಯೂನಿಫಾರ್ಮು, ಲಾಂಛನ ಇತ್ಯಾದಿಗಳನ್ನು ಹೊತ್ತುಕೊಂಡು ಮೆರೆಯುತ್ತಿರುವುದು, ತಮ್ಮ ಮೆದುಳು, ಹೃದಯ ಎಲ್ಲವೂ ಇಟಲಿ, ಜರ್ಮನಿಗಳಲ್ಲಿ ಇದ್ದರೂ ಸಹ ಸುಳ್ಳು ಸುಳ್ಳೆ ಭಾರತೀಯರು ಎಂದು ಕರೆದುಕೊಳ್ಳುತ್ತಿರುವ ಈ ಜನರ ವಾದ ತುಕ್ಡೆವಾದವಲ್ಲವೆ?”

“ಮನುಷ್ಯ ಕಲ್ಯಾಣಕ್ಕಾಗಿ ದುಡಿದ ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ಕುವೆಂಪು ಮುಂತಾದ ಮಹನೀಯರನ್ನು ಅವಮಾನಿಸಿ, ನಿರ್ಲಕ್ಷಿಸಿರುವ ಮನುವಾದಿ ಸಿದ್ಧಾಂತದವರು ಹಾಗೂ ಒಂದು ಗುಂಪು ಮಾತ್ರ ಶ್ರೇಷ್ಠ ಉಳಿದವರೆಲ್ಲ ನಿಕೃಷ್ಟರು ಎಂದು ಭಾವಿಸಿ ಪಠ್ಯ ಪುಸ್ತಕ ಮಾಡಿರುವ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?. ಒಂದು ಗುಂಪಿನ ಹಿತಾಸಕ್ತಿಯನ್ನು ರಾಷ್ಟ್ರೀಯ ಹಿತಾಸಕ್ತಿ ಎಂದು ಬಿಂಬಿಸುತ್ತಿರುವ ಕೆಟ್ಟ ಸಿದ್ಧಾಂತದ ಜನರು ತುಕ್ಡೆ ಗ್ಯಾಂಗಿನವರಲ್ಲವೆ?.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

“ಮನುಷ್ಯ ವಿರೋಧಿ ಮನುವಾದಿಗಳೆ ಕೇಳಿಸಿಕೊಳ್ಳಿ; ನಮ್ಮದು ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣ ಗುರು, ಅಂಬೇಡ್ಕರ್, ಕುವೆಂಪು ಮುಂತಾದ ಜಗತ್ತಿನ ಶ್ರೇಷ್ಠ ದಾರ್ಶನಿಕರ ತತ್ವ. ಇಡೀ ಜಗತ್ತಿನಲ್ಲಿ ಶೋಷಿತರು, ದುಃಖಿತರು ಇರಬಾರದು ಎಂದು ಹೇಳಿಕೊಟ್ಟವರು ನಮ್ಮ ನಾಯಕರು”

“ಇವನಾರವನೆನ್ನದೆ ಇವ ನಮ್ಮವ ಎಂದು ಹೇಳಿಕೊಟ್ಟ ಅಣ್ಣ ಬಸವಣ್ಣನ ದಾರಿ ನಮ್ಮದು. ಕುಲ ಕುಲವೆಂದು ಹೊಡೆದಾಡಬೇಡಿ ಎಂದ ಕನಕದಾಸರ ಪಥ ನಮ್ಮದು. ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದ ಪಂಪ ನಮ್ಮ ನಾಯಕ. ನೀನೆಲ್ಲೆ ಇದ್ದರೂ ನೀನೇರುವ ಮಲೆ ಅದೆ ಸಹ್ಯಾದ್ರಿ, ನೀನ್ ಕುಡಿಯುವ ನೀರ್ ಕಾವೇರಿ ಎಂದ, ನಿರಂಕುಶ ಮತಿಗಳಾಗಿ ಎಂದು ಕರೆಕೊಟ್ಟ ಕುವೆಂಪು ಅವರು ನಮ್ಮ ನಾಯಕರು. ಅಸಮಾನತೆಯನ್ನು ತೊಡೆದು ಹಾಕಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ ಬಾಬಾ ಸಾಹೇಬರು ನಮ್ಮ ಮಾರ್ಗದರ್ಶಕರು”

“ನಾವು ಈ ರಾಷ್ಟ್ರದ ವಾರಸುದಾರರು. ತುಕ್ಡೆ ಗ್ಯಾಂಗು ಎಂದು ಬಾಯಿ ಬಡಿದುಕೊಳ್ಳುವ ಬಿಜೆಪಿಗರೆ ಹೇಳಿ ನಿಮ್ಮ ಸಿದ್ಧಾಂತ ಯಾವುದು? ಯಾರು ನಾಯಕರು?” ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

“ಮತ್ತೂ ಹೇಳುತ್ತೇನೆ ವ್ಯಾಸ, ವಾಲ್ಮೀಕಿ, ಕಾಳಿದಾಸ ನಮ್ಮವರು. ಇಂದ್ರ ಸಂಸ್ಕೃತಿಯ ವಿರುದ್ಧ ತಿರುಗಿ ಬಿದ್ದ ದೇವರುಗಳಾದ ಶಿವ, ರಾಮ, ಕೃಷ್ಣ ನಮ್ಮವರು. ನಿಜವಾದ ಭಾರತದ ರಾಷ್ಟ್ರ ಧರ್ಮವೆಂದರೆ ಶೂದ್ರ ಧರ್ಮವೆ ಹೊರತು, ನಿಮ್ಮದಲ್ಲ. ನಿಮ್ಮದು ಸೀಮಿತ ಗುಂಪಿನ ಧರ್ಮ ಮಾತ್ರ. ಸೀಮಿತ ಹಿತಾಸಕ್ತಿ ಎಂದಿಗೂ ರಾಷ್ಟ್ರೀಯ ಹಿತಾಸಕ್ತಿಯಾಗುವುದಿಲ್ಲ. ಓಟಿಗಾಗಿ ಮಾತ್ರ ನೀವು ರಾಷ್ಟ್ರೀಯ ಹಿತಾಸಕ್ತಿ ಎನ್ನುತ್ತೀರೆ ಹೊರತು ನಿಜವಾದ ಕಾಳಜಿ ನಿಮ್ಮ ಎದೆಯಲ್ಲಿಲ್ಲ. ಇದು ನಿಧಾನಕ್ಕೆ ಬಹುಸಂಖ್ಯಾತ ಜನರಿಗೆ ಅರ್ಥವಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತಿಯಲ್ಲಿ ನಾವೇ ಶ್ರೇಷ್ಠ ಎಂದು ಹುಚ್ಚುನಾಯಿಗಳ ರರಹ ಅರಚುತ್ತಾ, ತಮ್ಮ ಮೌಢ್ಯಯುಕ್ತ ಜೊಳ್ಳು ಸಂಪ್ರದಾಯ ಗಳನ್ನ,ಬಹುಜನ ಮೂಲನಿವಾಸಿಗಳಾದ ದ್ರಾವಿಡರು ಮತ್ತು ಅವರ ಶ್ರೇಷ್ಠ ದ್ರಾವಿಡ ಸಂಸ್ಕೃತಿಯ ಹೇರಲು ಹೊರಟಿರುವ ಹುಚ್ಚುನಾಯಿಗಳಿಗೆ ಸರಿಯಾಗಿ ಚಾಟಿ ಬೀಸಿದ್ದಾರೆ ಸಿದ್ದರಾಮಯ್ಯ, ಅರ್ಥಮಾಡಿಕೊಳ್ಳದೆ ತಮ್ಮದೇ ಶ್ರೇಷ್ಠ ಎಂದು ವಿತ್ತಂಡ ವಾದ ಮಂಡಿಸುವುದೇ ಆದರೆ ,ಸಂಶಯವಿಲ್ಲ, ನೀವು ಅನಾಗರಿಕ ಪರಕೀಯ ಆರ್ಯರೇ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...