Homeಕರ್ನಾಟಕಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

- Advertisement -
- Advertisement -

ಖಾಕಿ ಚಡ್ಡಿ ತೊಟ್ಟ ಬಿಜೆಪಿಯು ತಮ್ಮ ಎದುರಾಳಿಗಳನ್ನು ನಿಂದಿಸಲು ತುಕ್ಡೆಗ್ಯಾಂಗ್ ಎಂಬ ಪದವನ್ನು ಬಳಸುತ್ತದೆ. ನಿಜವಾದ ಟೂಲ್ ಕಿಟ್ ರಾಜಕಾರಣ ಅಥವಾ ಪ್ಯಾಕೇಜ್ ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಸಂಕಷ್ಟ ಬಂದಾಗಲೆಲ್ಲ ‘ತುಕ್ಡೆ ಗ್ಯಾಂಗು’ ಎಂಬಂತಹ ಮಾಯಾವಿ ಪದಗಳನ್ನು ಪ್ಯಾಕೇಜಿನಂತೆ ಒಬ್ಬರಾದ ಮೇಲೆ ಒಬ್ಬರು ಬಳಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

“ಪಠ್ಯ ಪುಸ್ತಕ ಪರಿಷ್ಕರಣೆ ಪ್ರಕರಣದಿಂದ ಕಂಗೆಟ್ಟಿರುವ ಸರ್ಕಾರ ಮತ್ತು ಅದರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಾವು ಸಚಿವರೆಂಬ ಜವಾಬ್ಧಾರಿಯನ್ನು ಮರೆತು ನಾಡೋಜ ಬರಗೂರು ರಾಮಚಂದ್ರಪ್ಪ ಮುಂತಾದ ದಮನಿತ ವರ್ಗಗಳ ಧ್ವನಿಗಳನ್ನು ಅವಮಾನಿಸಬೇಕೆಂದೆ ‘ತುಕ್ಡೆ ಗ್ಯಾಂಗ್’ ನವರು ಎಂದು ಅವಮಾನಿಸಿದ್ದಾರೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಎಂಬ ರೋಗಿಷ್ಠ ಮನಸ್ಥಿತಿಯ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯು, ಉಸಿರಾಡುತ್ತಿರುವ ಜೀವಿಗಳಲ್ಲಿ ಬ್ರಾಹ್ಮಣರು ಶ್ರೇಷ್ಠರು, ಬ್ರಾಹ್ಮಣರಲ್ಲಿ ಮಾಧ್ವರು ಶ್ರೇಷ್ಠರು ಎಂಬ ನಿಲುವಿನಲ್ಲಿ ಪಾಠಗಳನ್ನು ಮಕ್ಕಳಿಗೆ ಕಲಿಸಲು ಶಿಫಾರಸ್ಸು ಮಾಡಿದೆ. ಸರ್ಕಾರ ಇಂಥ ಕೆಟ್ಟ ಮನುಷ್ಯ ವಿರೋಧಿ ನಿಲುವನ್ನು ಮಕ್ಕಳಿಗೆ ಕಲಿಸಲು ಹೊರಟಿದೆ. ಇದರ ಮೂಲಕ ಶೂದ್ರ-ದಲಿತ-ಮಹಿಳೆಯರಿರುವ 98% ರಷ್ಟು ಜನರನ್ನು ದಮನಿಸಲು ಹೊರಟಿದ್ದಾರೆ” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

“ಬುದ್ಧ, ಮಹಾವೀರ, ಬಸವಣ್ಣ, ಕನಕದಾಸರು, ನಾರಾಯಣ ಗುರುಗಳು, ಸಾವಿತ್ರಿ ಫುಲೆ, ಅಂಬೇಡ್ಕರ್, ಕುವೆಂಪು, ಉತ್ತರ ಕರ್ನಾಟಕದ ಕವಿ ಸಾಹಿತಿಗಳು, ಹೆಮ್ಮೆಯ ನಾಡಗೀತೆ, ಮನುವಾದ ವಿರೋಧಿ ಭಕ್ತಿ ಪಂಥ, ದೇವನೂರ ಮಹಾದೇವ ಮುಂತಾದ ಶೂದ್ರ-ದಲಿತ ಬರೆಹಗಾರರು ಹೀಗೆ ಎಲ್ಲರನ್ನೂ ಅವಮಾನಿಸಿ, ನಿರ್ಲಕ್ಷಿಸಿ ಶ್ರಮ ವಿರೋಧಿಯಾದ, ಕುವೆಂಪು ಅವರು ಹೇಳಿದ ಹಾಗೆ ಉತ್ಪಾದಕ ವರ್ಗದವರನ್ನು ನಿರ್ಲಕ್ಷಿಸಿ, ಕೇವಲ ಸಂಗ್ರಾಹಕ ವರ್ಗದ ಜನರು ರಚಿಸಿದ ಜೊಳ್ಳನ್ನು ಮಕ್ಕಳಿಗೆ ಕಲಿಸಲು ಹೊರಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ಪ್ರಶ್ನಿಸಿ ನಾಡಿನಾದ್ಯಂತ ಸ್ವಾಮೀಜಿಗಳು, ಗುರು ಹಿರಿಯರು, ಜನ ಸಾಮಾನ್ಯರು, ವಿದ್ವಾಂಸರು, ಜನಪರರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನೆಯನ್ನು ಕಂಡು ಕಂಗೆಟ್ಟು ಕೂತಿರುವ ಬಿಜೆಪಿಯ ಕೆಲವು ಶೂದ್ರ ಹಾಗೂ ಅಗ್ರಹಾರದ ಗೇಟ್‍ಕೀಪರುಗಳಾದವರು ಸೇರಿದಂತೆ, ಹಲವು ‘ತುಕ್ಡೆ ಗ್ಯಾಂಗ್’ನವರು, ರಾಷ್ಟ್ರೀಯ ಹಿತಾಸಕ್ತಿಗಾಗಿ ಇದೆಲ್ಲ ಸಹಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ”

“ಹಾಗಿದ್ದರೆ ನಿಜವಾದ ತುಕ್ಡೆ ಗ್ಯಾಂಗ್‍ನವರು ಯಾರು? ಎಂದು ಸ್ವಲ್ಪ ಮೆದುಳಿರುವವರು ಯೋಚಿಸಿದರೆ ಅರ್ಥವಾಗುತ್ತದೆ. ಬಿಜೆಪಿಯಲ್ಲಿರುವವರು ಮತ್ತು ಬಿಜೆಪಿಯ ಸಿದ್ಧಾಂತವನ್ನು ಹುಟ್ಟಿಸಿದವರೆ ತುಕ್ಡೆ ಗ್ಯಾಂಗಿನ ಜನ. ಯಾರು ತುಕ್ಡೆ ಗ್ಯಾಂಗನವರು ಹೇಳಿ ಬಿಜೆಪಿಗರೆ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

“ಜಗತ್ತಿನ ಶ್ರೇಷ್ಠ ಸಂಸ್ಕೃತಿಯಾಗಿದ್ದ, ದ್ರಾವಿಡರೆ ನಿರ್ಮಿಸಿದ್ದ ಸಿಂಧೂ ನಾಗರಿಕತೆಯನ್ನು ಧ್ವಂಸ ಮಾಡಿದ ಆರ್ಯರು, ವಿರಾಟ್ ಪುರುಷನ ತಲೆಯಿಂದ ಬ್ರಾಹ್ಮಣ ಹುಟ್ಟಿದ, ಪಾದಗಳಿಂದ ಶೂದ್ರರು ಹುಟ್ಟಿದರು ಎಂದು ಬರೆದು ಅದನ್ನೆ ಕಾನೂನು ಮಾಡಿ ಜನರನ್ನು ಶಾಶ್ವತವಾಗಿ ಒಡೆದು ಹಾಕಿದ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂದಿನ ತಳಿವಿಜ್ಞಾನ ಹೇಳುತ್ತಿರುವ ಪ್ರಕಾರ 2500 ವರ್ಷಗಳ ಹಿಂದೆ ಅಮಾನುಷವಾದ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿ, ವೃತ್ತಿ, ಹುಟ್ಟುಗಳ ಮೇಲೆ ಮನುಷ್ಯ ಸಮುದಾಯಗಳನ್ನು ಒಡೆದು ಹಾಕಿ ಭಾರತದಲ್ಲಿ ನರಕದಂತಹ ಸಮಸ್ಯೆಗಳನ್ನು ಸೃಷ್ಟಿ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ನಾಗಪುರದ ತಮ್ಮ ಕಛೇರಿಯ ಮೇಲೆ ಇತ್ತೀಚಿನವರೆಗೂ ರಾಷ್ಟ್ರಧ್ವಜವನ್ನು ಹಾರಿಸದೆ ನಿರ್ಲಕ್ಷ್ಯ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮನುವಾದವನ್ನು ಜಾರಿಗೆ ತರಲು ನಿರಂತರ ಪ್ರಯತ್ನಿಸುತ್ತಿರುವವರು ತುಕ್ಡೆ ಗ್ಯಾಂಗಿನವರಲ್ಲವೆ? ಗಾಂಧೀಜಿಯರನ್ನು ಕೊಂದ ಗೋಡ್ಸೆಯನ್ನು ಆರಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಇಟಲಿಯ ಮುಸಲೋನಿಯಿಂದ ಫ್ಯಾಸಿಸಂ ಅನ್ನು ಕಲಿತು ಬಂದ ಮೂಂಜೆಯವರು ತಮ್ಮ ಶಿಷ್ಯ ಹೆಡಗೆವಾರ್ ಮೂಲಕ ಆರ್‌ಎಸ್‍ಎಸ್ ಅನ್ನು ಸ್ಥಾಪಿಸಿ ಒಂದು ವರ್ಗದ ಹಿತಾಸಕ್ತಿಯನ್ನು ಪೊರೆಯಲು ಕಂಕಣ ತೊಟ್ಟಿದ್ದು ತುಕ್ಡೆವಾದವಲ್ಲವೆ?”

“ಹಿಟ್ಲಟರನನ್ನು ರಾಕ್ಷಸ ಎಂದೂ ಅವನ ಸಿದ್ಧಾಂತವನ್ನು ದುಷ್ಟ, ಸೈತಾನ ಸಿದ್ಧಾಂತ ಎಂದು ತೀರ್ಮಾನಿಸಿ ಅದನ್ನು ಇಡೀ ಯುರೋಪಿನಿಂದಲೆ ಹೊಡೆದೋಡಿಸುತ್ತಿದ್ದರೂ ಆರ್‌‌ಎಸ್‍ಎಸ್ ಮಾತ್ರ ಹಿಟ್ಲರನ ಯೂನಿಫಾರ್ಮು, ಲಾಂಛನ ಇತ್ಯಾದಿಗಳನ್ನು ಹೊತ್ತುಕೊಂಡು ಮೆರೆಯುತ್ತಿರುವುದು, ತಮ್ಮ ಮೆದುಳು, ಹೃದಯ ಎಲ್ಲವೂ ಇಟಲಿ, ಜರ್ಮನಿಗಳಲ್ಲಿ ಇದ್ದರೂ ಸಹ ಸುಳ್ಳು ಸುಳ್ಳೆ ಭಾರತೀಯರು ಎಂದು ಕರೆದುಕೊಳ್ಳುತ್ತಿರುವ ಈ ಜನರ ವಾದ ತುಕ್ಡೆವಾದವಲ್ಲವೆ?”

“ಮನುಷ್ಯ ಕಲ್ಯಾಣಕ್ಕಾಗಿ ದುಡಿದ ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ಕುವೆಂಪು ಮುಂತಾದ ಮಹನೀಯರನ್ನು ಅವಮಾನಿಸಿ, ನಿರ್ಲಕ್ಷಿಸಿರುವ ಮನುವಾದಿ ಸಿದ್ಧಾಂತದವರು ಹಾಗೂ ಒಂದು ಗುಂಪು ಮಾತ್ರ ಶ್ರೇಷ್ಠ ಉಳಿದವರೆಲ್ಲ ನಿಕೃಷ್ಟರು ಎಂದು ಭಾವಿಸಿ ಪಠ್ಯ ಪುಸ್ತಕ ಮಾಡಿರುವ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?. ಒಂದು ಗುಂಪಿನ ಹಿತಾಸಕ್ತಿಯನ್ನು ರಾಷ್ಟ್ರೀಯ ಹಿತಾಸಕ್ತಿ ಎಂದು ಬಿಂಬಿಸುತ್ತಿರುವ ಕೆಟ್ಟ ಸಿದ್ಧಾಂತದ ಜನರು ತುಕ್ಡೆ ಗ್ಯಾಂಗಿನವರಲ್ಲವೆ?.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

“ಮನುಷ್ಯ ವಿರೋಧಿ ಮನುವಾದಿಗಳೆ ಕೇಳಿಸಿಕೊಳ್ಳಿ; ನಮ್ಮದು ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣ ಗುರು, ಅಂಬೇಡ್ಕರ್, ಕುವೆಂಪು ಮುಂತಾದ ಜಗತ್ತಿನ ಶ್ರೇಷ್ಠ ದಾರ್ಶನಿಕರ ತತ್ವ. ಇಡೀ ಜಗತ್ತಿನಲ್ಲಿ ಶೋಷಿತರು, ದುಃಖಿತರು ಇರಬಾರದು ಎಂದು ಹೇಳಿಕೊಟ್ಟವರು ನಮ್ಮ ನಾಯಕರು”

“ಇವನಾರವನೆನ್ನದೆ ಇವ ನಮ್ಮವ ಎಂದು ಹೇಳಿಕೊಟ್ಟ ಅಣ್ಣ ಬಸವಣ್ಣನ ದಾರಿ ನಮ್ಮದು. ಕುಲ ಕುಲವೆಂದು ಹೊಡೆದಾಡಬೇಡಿ ಎಂದ ಕನಕದಾಸರ ಪಥ ನಮ್ಮದು. ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದ ಪಂಪ ನಮ್ಮ ನಾಯಕ. ನೀನೆಲ್ಲೆ ಇದ್ದರೂ ನೀನೇರುವ ಮಲೆ ಅದೆ ಸಹ್ಯಾದ್ರಿ, ನೀನ್ ಕುಡಿಯುವ ನೀರ್ ಕಾವೇರಿ ಎಂದ, ನಿರಂಕುಶ ಮತಿಗಳಾಗಿ ಎಂದು ಕರೆಕೊಟ್ಟ ಕುವೆಂಪು ಅವರು ನಮ್ಮ ನಾಯಕರು. ಅಸಮಾನತೆಯನ್ನು ತೊಡೆದು ಹಾಕಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ ಬಾಬಾ ಸಾಹೇಬರು ನಮ್ಮ ಮಾರ್ಗದರ್ಶಕರು”

“ನಾವು ಈ ರಾಷ್ಟ್ರದ ವಾರಸುದಾರರು. ತುಕ್ಡೆ ಗ್ಯಾಂಗು ಎಂದು ಬಾಯಿ ಬಡಿದುಕೊಳ್ಳುವ ಬಿಜೆಪಿಗರೆ ಹೇಳಿ ನಿಮ್ಮ ಸಿದ್ಧಾಂತ ಯಾವುದು? ಯಾರು ನಾಯಕರು?” ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

“ಮತ್ತೂ ಹೇಳುತ್ತೇನೆ ವ್ಯಾಸ, ವಾಲ್ಮೀಕಿ, ಕಾಳಿದಾಸ ನಮ್ಮವರು. ಇಂದ್ರ ಸಂಸ್ಕೃತಿಯ ವಿರುದ್ಧ ತಿರುಗಿ ಬಿದ್ದ ದೇವರುಗಳಾದ ಶಿವ, ರಾಮ, ಕೃಷ್ಣ ನಮ್ಮವರು. ನಿಜವಾದ ಭಾರತದ ರಾಷ್ಟ್ರ ಧರ್ಮವೆಂದರೆ ಶೂದ್ರ ಧರ್ಮವೆ ಹೊರತು, ನಿಮ್ಮದಲ್ಲ. ನಿಮ್ಮದು ಸೀಮಿತ ಗುಂಪಿನ ಧರ್ಮ ಮಾತ್ರ. ಸೀಮಿತ ಹಿತಾಸಕ್ತಿ ಎಂದಿಗೂ ರಾಷ್ಟ್ರೀಯ ಹಿತಾಸಕ್ತಿಯಾಗುವುದಿಲ್ಲ. ಓಟಿಗಾಗಿ ಮಾತ್ರ ನೀವು ರಾಷ್ಟ್ರೀಯ ಹಿತಾಸಕ್ತಿ ಎನ್ನುತ್ತೀರೆ ಹೊರತು ನಿಜವಾದ ಕಾಳಜಿ ನಿಮ್ಮ ಎದೆಯಲ್ಲಿಲ್ಲ. ಇದು ನಿಧಾನಕ್ಕೆ ಬಹುಸಂಖ್ಯಾತ ಜನರಿಗೆ ಅರ್ಥವಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತಿಯಲ್ಲಿ ನಾವೇ ಶ್ರೇಷ್ಠ ಎಂದು ಹುಚ್ಚುನಾಯಿಗಳ ರರಹ ಅರಚುತ್ತಾ, ತಮ್ಮ ಮೌಢ್ಯಯುಕ್ತ ಜೊಳ್ಳು ಸಂಪ್ರದಾಯ ಗಳನ್ನ,ಬಹುಜನ ಮೂಲನಿವಾಸಿಗಳಾದ ದ್ರಾವಿಡರು ಮತ್ತು ಅವರ ಶ್ರೇಷ್ಠ ದ್ರಾವಿಡ ಸಂಸ್ಕೃತಿಯ ಹೇರಲು ಹೊರಟಿರುವ ಹುಚ್ಚುನಾಯಿಗಳಿಗೆ ಸರಿಯಾಗಿ ಚಾಟಿ ಬೀಸಿದ್ದಾರೆ ಸಿದ್ದರಾಮಯ್ಯ, ಅರ್ಥಮಾಡಿಕೊಳ್ಳದೆ ತಮ್ಮದೇ ಶ್ರೇಷ್ಠ ಎಂದು ವಿತ್ತಂಡ ವಾದ ಮಂಡಿಸುವುದೇ ಆದರೆ ,ಸಂಶಯವಿಲ್ಲ, ನೀವು ಅನಾಗರಿಕ ಪರಕೀಯ ಆರ್ಯರೇ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...