Homeಕರ್ನಾಟಕಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

- Advertisement -
- Advertisement -

“ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು ಅವರಿಗೆ ಅವಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು, ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು” ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು, ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುವೆಂಪು ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿದಾಗ ಇಲ್ಲಿನ ಶಾಸಕ-ಗೃಹ ಸಚಿವ ಬಾಯಿ ಮುಚ್ಚಿಕೊಂಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರೇನು ಕಾಂಗ್ರೆಸ್ ಪಕ್ಷದವರಲ್ಲ” ಎಂದು ಸ್ಥಳೀಯ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ಹೊರಹಾಕಿರುವ ಹರಿಪ್ರಸಾದ್, “ಕುವೆಂಪು ಅವರಿಗೆ ಅಪಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು. ಆರಗ ಜ್ಞಾನೇಂದ್ರ ರಾಜ್ಯದ ಇತಿಹಾಸದಲ್ಲೇ‌ ಕಳಪೆ ಗೃಹಸಚಿವ. ಗೃಹಸಚಿವರಾದ ನಂತರ ಆರಗ ಜ್ಞಾನೇಂದ್ರ ಅವರ ಕುಖ್ಯಾತಿ ಹೆಚ್ಚುತ್ತಲೇ ಇದೆ. ಅವರಿಂದಾಗಿ ಕರ್ನಾಟಕ ಉತ್ತರ ಪ್ರದೇಶದಂತೆ ಆಗಿದೆ” ಎಂದರು.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

ಮುಂದುವರೆದು, “ರಾಜ್ಯದಲ್ಲಿ ಕಾನೂನು ಸುವ್ಯವಸ್ತೆ ಹದಗೆಟ್ಟಿದೆ. ಪಿಎಸ್ ಐ ಹಗರಣದಲ್ಲಿ ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಮೊದಲ ದೂರು ದಾಖಲಾಗಬೇಕಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು” ಎಂದಿದ್ದಾರೆ.

“ಇದೀಗ ಬಿಜೆಪಿ ಪಠ್ಯ ಪರಿಷ್ಕರಣೆ ಮೂಲಕ ನಾಗಪುರ ಯೂನಿವರ್ಸಿಟಿ ಅಂಶಗಳನ್ನು ಮಕ್ಕಳ ಮೇಲೆ ಹೇರುತ್ತಿದೆ. ಬಿಜೆಪಿ ಜಾಯಮಾನವೇ ಬರಿ ಸುಳ್ಳು ಹೇಳುವುದು. ಇತಿಹಾಸವನ್ನು ರಸ್ತೆಯಲ್ಲಿ ಹೋಗುವ ಪೋಕರಿಗಳು ಮಾಡುವಂತದ್ದಲ್ಲ. ಇತಿಹಾಸವನ್ನು ತಜ್ಞರು, ವಿದ್ವಾಂಸರು ರಚಿಸಬೇಕು. ಈಗ ಪಠ್ಯ ಪುಸ್ತಕ ಪರಿಷ್ಕರಣೆ 200 ಕೋಟಿ ಖರ್ಚಾಗಿರಬಹುದು. ಎಳೆಯ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಪಠ್ಯ ಪುಸ್ತಕವನ್ನ ಕೂಡಲೇ ಹಿಂತೆಗೆದುಕೊಳ್ಳಬೇಕು. ಮಕ್ಕಳ ಭವಿಷ್ಯದ ಮೇಲೆ ಆಟ ಆಡುವುದು ಬಿಜೆಪಿಗೆ ಸಾಮಾನ್ಯವಾಗಿದೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಬೆಂಬಲಿತ ಟ್ರೋಲರ್‌‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ವಿರೋಧಿಸಿ, ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕವಾದ ಕವಿಶೈಲದಲ್ಲಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ಬುಧವಾರ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಪ್ರಾರಂಭವಾದ ಪಾದಯಾತ್ರೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸೇರಿ ಸಾರ್ವಜನಿಕ ಸಭೆ ನಡೆಸಲಿದೆ.


ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...