Homeಕರ್ನಾಟಕ‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ - ಈ ನಿಯಮ ಕೇಂದ್ರ ಅಥವಾ ರಾಜ್ಯ...

‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ – ಈ ನಿಯಮ ಕೇಂದ್ರ ಅಥವಾ ರಾಜ್ಯ ಸರ್ಕಾರ ಮಾಡಿಲ್ಲ: ಸಚಿವ ನಾಗೇಶ್‌‌ ಸ್ಪಷ್ಟನೆ

- Advertisement -
- Advertisement -

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಒಕ್ಕೂಟ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಒಕ್ಕೂಟ ಸರ್ಕಾರವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಏಕ್‌ ಭಾರತ್‌ ಶ್ರೇಷ್ಠ ಭಾರತ್‌’ ಎಂಬ ಕಾರ್ಯಕ್ರಮದಡಿ ‘ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ’ ಎಂಬ ಯೋಜನೆ ಹಾಕಿಕೊಂಡಿತ್ತು. ಈ ಯೋಜನೆಯ ಅನ್ವಯ ಕರ್ನಾಟಕದಿಂದ 50 ವಿದ್ಯಾರ್ಥಿಗಳು ಉತ್ತರಾಖಂಡ ರಾಜ್ಯ ಪ್ರವಾಸ ಮಾಡಲಿದ್ದಾರೆ. ಆದರೆ, ಈ ಪ್ರವಾಸಕ್ಕೆ ವಿದ್ಯಾರ್ಥಿಗಳು ಆಯ್ಕೆ ಆಗಬೇಕಾದರೆ ‘ಹಿಂದಿ ಭಾಷೆ’ ಮಾತನಾಡಲು ಬರಬೇಕು ಎಂದು ಶಿಕ್ಷಣ ಇಲಾಖೆ ಷರತ್ತನ್ನು ಇಟ್ಟು ಸುತ್ತೋಲೆ ಹೊರಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಲಾಖೆಯ ಸುತ್ತೋಲೆಯಲ್ಲಿ, “ಭಾರತ ಸರ್ಕಾರವು 75ನೇ ವರ್ಷದ ಆಜಾದಿ ಕಾ ಅಮೃತ‌ ಮಹೋತ್ಸವ್ ಅಂಗವಾಗಿ ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಎಂಬ ಕಾರ್ಯಕ್ರಮದಡಿ ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಮ್ಮ ಕಾಲೇಜಿನಲ್ಲಿ ಪ್ರಸ್ತುತ ಪಿಯುಸಿ ಓದುತ್ತಿರುವವರ ಪೈಕಿ ‘ಹಿಂದಿ ಭಾಷೆ’ಯಲ್ಲಿ ಮಾತನಾಡುವ ಮತ್ತು ತಂತ್ರಜ್ಞಾನದ ತಿಳಿವಳಿಕೆ, ಸಾಂಸ್ಕೃತಿಕ, ಕ್ರೀಡಾಸ್ಫೂರ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಲು ತಿಳಿಸಿದೆ” ಎಂದು ಉಪನಿರ್ದೇಶಕರು ತಿಳಿಸಿದ್ದರು.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬೆಂಗಳೂರು ದಕ್ಷಿಣ ಉಪನಿರ್ದೇಶಕ ಆನಂದ ರಾಜು ಅವರು,“ಪ್ರವಾಸಕ್ಕೆ ಆಯ್ಕೆ ಮಾಡುವಾಗ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವಂತೆ ಸರ್ವಶಿಕ್ಷಾ ಅಭಿಯಾನದ ಸಭೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಮತ್ತು ಉತ್ತರದಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು” ಎಂದು ಹೇಳಿದ್ದರು.

ಈ ಷರತ್ತಿನಿಂದಾಗಿ ಉತ್ತರ ಭಾರತದಿಂದ ಬಂದು ಇಲ್ಲಿ ನೆಲೆಸಿರುವ ಹಿಂದಿ ಭಾಷಿಕರು ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಮಾತ್ರ ಈ ಪ್ರವಾಸಕ್ಕೆ ಆಯ್ಕೆಯಾಗಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರ, “ಹೌದು ಅಂತಹ ಮಕ್ಕಳು ವಂಚಿತರಾಗುತ್ತಾರೆ. ಆದರೆ ಸರ್ಕಾರದ ಆದೇಶ ಇದೆ” ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜಿಗೆ ಹೊರಡಿಸಿರುವ ಈ ಷರತ್ತು ರಾಜ್ಯದಾತ್ಯಂತ ಭಾರಿ ಚರ್ಚೆಗೆ ಒಳಪಟ್ಟಿದ್ದು, ಆಕ್ರೋಶ ವ್ಯಕ್ತವಾಗಿತ್ತು. ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು, “ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ” ಎಂದು ಕಿಡಿ ಕಾರಿದ್ದರು.

ಇದನ್ನೂ ಓದಿ: ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಇದೀಗ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ/ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ” ಎಂದು ಹೇಳಿದ್ದಾರೆ.

“ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ/ಸಿಬ್ಬಂದಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳನ್ನು ಉತ್ತರಾಖಂಡಕ್ಕೆ ಕಳುಹಿಸುವ ಜವಾಬ್ದಾರಿ ಹೊತ್ತಿರುವ ಆರ್‌ಎನ್‌ಎಸ್‌ ಕಾಲೇಜಿನ ಉಪನ್ಯಾಸಕಿ ಡಾ. ಪಲ್ಲವಿ ಅವರು ಮಾತನಾಡುತ್ತಾ, “ಜವಾಹರಲಾಲ್‌ ನೆಹರೂ ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳಿಂದ ತಲಾ ಮೂರು ವಿದ್ಯಾರ್ಥಿಗಳು, ಸಿಬಿಎಸ್‌ಇ ಮತ್ತು ರಾಜ್ಯ ಪಠ್ಯಕ್ರಮದಿಂದ 19 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ. ವಿದ್ಯಾರ್ಥಿ, ವಿದ್ಯಾರ್ಥಿನಿ, ಎಸ್ಸಿ ಎಸ್ಟಿ ಇತರೆ ಹಿಂದುಳಿದ ವರ್ಗ ಹೀಗೆ ಎಲ್ಲರಿಗೂ ಅವಕಾಶ ಕಲ್ಪಿಸಲಾಗಿದೆ. ಆದರೆ, ಹಿಂದಿ ಭಾಷೆ ಬರುವ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿಯಮ ಇಲ್ಲ” ಎಂದು ಸುತ್ತೋಲೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದರು.‌

ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಒಕ್ಕೂಟ ಸರ್ಕಾರದ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿಯೂ ಹಿಂದಿ ಅಥವಾ ಇಂಗ್ಲಿಷ್‌ ಭಾಷೆ ಬಲ್ಲ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿರ್ದೇಶನ ನೀಡಿಲ್ಲ. ಹಾಗಿದ್ದರೆ ಕರ್ನಾಟಕ ಸರ್ಕಾರವೇ ಉದ್ದೇಶಪೂರ್ವಕವಾಗಿ ಹಿಂದಿ ಹೇರಲು ಹೊರಟಿದೆಯೇ ಎಂಬ ಅನುಮಾನವನ್ನು ಕೂಡಾ ಸಾಮಾಜಿಕ ಕಾರ್ಯಕರ್ತರು ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಾ ಅಯ್ಯೊಗ್ಯರೆಲ್ಲಾ ಶಿಕ್ಷಣ ಮಂತ್ರಿ,ಇದು ಈ ನಾಡಿನ ದುರ್ದೈವ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...