Homeಕರ್ನಾಟಕಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

ಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

- Advertisement -
- Advertisement -

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹಳೇ ಶಿಡೇನೂರು ಗ್ರಾಮದಲ್ಲಿ ಜಮೀನು ವಿಚಾರದಲ್ಲಿ ಶಾಸಕ ನೆಹರು ಓಲೇಕಾರ ಮತ್ತು ಅವರ ಪುತ್ರ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಒಬ್ಬರು ಮಹಿಳೆ ಸೇರಿದಂತೆ ದಲಿತ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ 70 ವರ್ಷದ ಪಾಂಡಪ್ಪ ಕಬ್ಬೂರು, 65 ವರ್ಷದ ಗಂಗವ್ವ ಕಬ್ಬೂರು, ವರ್ಷದ 41 ಹನುಮಂತಪ್ಪ ಬಡಿಗೇರ್  ಮತ್ತು 72 ವರ್ಷದ ಗುರುಶಾಂತಪ್ಪ ಲಮಾಣಿ ಅವರನ್ನು ಬ್ಯಾಡಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆ ಎದುರು ಜಮಾಯಿಸಿದ ಗ್ರಾಮಸ್ಥರು ಬಿಜೆಪಿ ಶಾಸಕ ನೆಹರು ಓಲೇಕಾರ ವಿರುದ್ಧ ಘೋಷಣೆ ಕೂಗಿ ಶಾಸಕ ಹಾಗೂ ಅವರ ಪುತ್ರ ಮಂಜುನಾಥ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

2007-08 ರಲ್ಲಿ ರಾಜ್ಯ ಸರ್ಕಾರ 29 ದಲಿತ ಕುಟುಂಬಗಳಿಗೆ ತಲಾ ಒಂದು ಎಕರೆ 15 ಗುಂಟೆಗಳನ್ನು ನೀಡಿತ್ತು. ಗ್ರಾಮದ ಶೇಖರಗೌಡ ಪಾಟೀಲ ಎಂಬುವರು ದಲಿತ ಕುಟುಂಬಗಳಿಗೆ ನೀಡಿರುವ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ಶಾಸಕರ ಮಗ ಮಂಜುನಾಥ್ ಅವರಿಗೆ ಬೆಂಬಲ ನೀಡಿದ್ದು, 15 ಗುಂಟೆ ಜಮೀನು ಬಿಟ್ಟು ನೀಡುವಂತೆ ದಲಿತ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಂಗಳವಾರವೂ ಮಂಜುನಾಥ್ ಗ್ರಾಮಕ್ಕೆ ಭೇಟಿ ನೀಡಿದ್ದು, ಜಮೀನು ಬಿಟ್ಟುಕೊಡುವಂತೆ ಕಿರುಕುಳ ನೀಡಿದ್ದಾರೆ. ಬಳಿಕ ನಾಲ್ವರು ವಿಷ ಸೇವಿಸಿದ್ದಾರೆ ಎಂದಿದ್ದಾರೆ. ಆದರೆ, ಶಾಸಕ ನೆಹರು ಓಲೇಕಾರ ಆರೋಪವನ್ನು ನಿರಾಕರಿಸಿದ್ದು, ಘಟನೆಯ ಹಿಂದೆ ಬ್ಯಾಡಗಿಯ ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಅವರ ಕೈವಾಡವಿದೆ. ರೈತರನ್ನು ಅವರು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ನಾಲ್ವರ ಮೇಲೆ ಬುಧವಾರ ಪ್ರಕರಣ ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್, “ದಲಿತರಿಗೆ ಮಂಜೂರಾಗಿದ್ದ ಅಲ್ಪ ಭೂಮಿಯಲ್ಲೂ ಬಿಜೆಪಿ ಶಾಸಕ ನೆಹರು ಓಲೆಕಾರ್ ಕುಟುಂಬಕ್ಕೆ ಪಾಲು ಬೇಕಂತೆ! ಸಿಎಂ ಬಸವರಾಜ ಬೊಮ್ಮಾಯಿಯವರೇ, ನಿಮ್ಮದೇ ಜಿಲ್ಲೆಯಲ್ಲಿ ನಡೆದ ದೌರ್ಜನ್ಯವಿದು. ಸಿನೆಮಾ ನೋಡುವುದಷ್ಟೇ ಅಲ್ಲ, ಇಲ್ಲೂ ಸ್ವಲ್ಪ ನೋಡಿ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ, ದಲಿತರಿಗೆ ರಕ್ಷಣೆ ಕೊಡಿ. ಅವರ ಚಿಕಿತ್ಸೆ ಜವಾಬ್ದಾರಿಯನ್ನ ಸರ್ಕಾರವೇ ಹೊರಬೇಕು” ಎಂದಿದೆ.


ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is going on in our state?
    CM sir, please see what is happening in your state.
    You can witness cinemas later. First you attend burning problems of weaker sections.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...