Homeಮುಖಪುಟರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನವೇ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸರಿಯಾದ ದಾಖಲೆಗಳಿಲ್ಲದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಡಿಎನ್‌ಎ ಇಂಡಿಯಾ’ ಸುದ್ದಿ ಜಾಲತಾಣ ವರದಿ ಮಾಡಿದೆ.

ಬುಧವಾರ ಅಧಿಸೂಚನೆ ಹೊರಡಿಸುವ ಮೂಲಕ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಜೂನ್ 29ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಜೂನ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಿದವರಲ್ಲಿ ಬಿಹಾರದ ಸರನ್‌ ಪ್ರಾಂತ್ಯದ ಲಾಲು ಪ್ರಸಾದ್ ಯಾದವ್ ಎಂಬ ವ್ಯಕ್ತಿ ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಬುಧವಾರ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ವ್ಯಕ್ತಿಗಳು ತಮಿಳುನಾಡು, ದೆಹಲಿ, ಮಹಾರಾಷ್ಟ್ರ, ಬಿಹಾರ, ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಸೇರಿದವರಾಗಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ.

ವಿರೋಧ ಪಕ್ಷಗಳು ಸಜ್ಜು

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ವಿರುದ್ಧ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಲವು ವಿರೋಧ ಪಕ್ಷಗಳ ನಾಯಕರು ಬುಧವಾರ ಒಪ್ಪಿಗೆ ಸೂಚಿಸಿದ್ದಾರೆ. ರಾಜಕೀಯ ಪಕ್ಷಗಳ ಜಂಟಿ ಸಮಾವೇಶವನ್ನು ಕರೆದಿದ್ದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, “ಹಲವು ಪಕ್ಷಗಳು ಇಂದು ಇಲ್ಲಿವೆ. ನಾವು ಒಬ್ಬ ಒಮ್ಮತದ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಎಲ್ಲರೂ ಈ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾವು ಇತರ ಪಕ್ಷಗಳೊಂದಿಗೆ ಸಮಾಲೋಚಿಸುತ್ತೇವೆ. ಇದೊಂದು ಉತ್ತಮ ಆರಂಭ. ಹಲವಾರು ತಿಂಗಳ ನಂತರ ನಾವು ಒಟ್ಟಿಗೆ ಕುಳಿತಿದ್ದು, ಈ ಒಗ್ಗಟ್ಟನ್ನು ಮತ್ತೆ ರೂಪಿಸುತ್ತೇವೆ” ಎಂದಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಸಭೆಯಲ್ಲಿದ್ದ ವಿರೋಧ ಪಕ್ಷದ ನಾಯಕರು ಒತ್ತಾಯಿಸಿದರು. ಆದರೆ, ಅವರು ಮತ್ತೊಮ್ಮೆ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿರಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ವಿರೋಧ ಪಕ್ಷದ ಸಂಭಾವ್ಯ ಅಭ್ಯರ್ಥಿಗಳಾಗಿ ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಸೂಚಿಸಿದ್ದಾರೆ ಎಂದು ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ, ಎನ್‌ಸಿಪಿ, ಡಿಎಂಕೆ, ಆರ್‌ಜೆಡಿ ಮತ್ತು ಎಡಪಕ್ಷಗಳ ನಾಯಕರು ಟಿಎಂಸಿ ವರಿಷ್ಠರು ಕರೆದ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಎಎಪಿ, ಎಸ್‌ಎಡಿ, ಎಐಎಂಐಎಂ, ಟಿಆರ್‌ಎಸ್ ಮತ್ತು ಒಡಿಶಾದ ಆಡಳಿತಾರೂಢ ಬಿಜೆಡಿ ಈ ಸಭೆಗೆ ಹಾಜರಾಗಲಿಲ್ಲ.

ಶಿವಸೇನೆ, ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿ(ಎಸ್), ಆರ್‌ಎಸ್‌ಪಿ, ಐಯುಎಂಎಲ್, ಆರ್‌ಎಲ್‌ಡಿ ಮತ್ತು ಜೆಎಂಎಂ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...