Homeಮುಖಪುಟರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನವೇ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸರಿಯಾದ ದಾಖಲೆಗಳಿಲ್ಲದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಡಿಎನ್‌ಎ ಇಂಡಿಯಾ’ ಸುದ್ದಿ ಜಾಲತಾಣ ವರದಿ ಮಾಡಿದೆ.

ಬುಧವಾರ ಅಧಿಸೂಚನೆ ಹೊರಡಿಸುವ ಮೂಲಕ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಜೂನ್ 29ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಜೂನ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಿದವರಲ್ಲಿ ಬಿಹಾರದ ಸರನ್‌ ಪ್ರಾಂತ್ಯದ ಲಾಲು ಪ್ರಸಾದ್ ಯಾದವ್ ಎಂಬ ವ್ಯಕ್ತಿ ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಬುಧವಾರ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ವ್ಯಕ್ತಿಗಳು ತಮಿಳುನಾಡು, ದೆಹಲಿ, ಮಹಾರಾಷ್ಟ್ರ, ಬಿಹಾರ, ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಸೇರಿದವರಾಗಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ.

ವಿರೋಧ ಪಕ್ಷಗಳು ಸಜ್ಜು

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ವಿರುದ್ಧ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಲವು ವಿರೋಧ ಪಕ್ಷಗಳ ನಾಯಕರು ಬುಧವಾರ ಒಪ್ಪಿಗೆ ಸೂಚಿಸಿದ್ದಾರೆ. ರಾಜಕೀಯ ಪಕ್ಷಗಳ ಜಂಟಿ ಸಮಾವೇಶವನ್ನು ಕರೆದಿದ್ದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, “ಹಲವು ಪಕ್ಷಗಳು ಇಂದು ಇಲ್ಲಿವೆ. ನಾವು ಒಬ್ಬ ಒಮ್ಮತದ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಎಲ್ಲರೂ ಈ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾವು ಇತರ ಪಕ್ಷಗಳೊಂದಿಗೆ ಸಮಾಲೋಚಿಸುತ್ತೇವೆ. ಇದೊಂದು ಉತ್ತಮ ಆರಂಭ. ಹಲವಾರು ತಿಂಗಳ ನಂತರ ನಾವು ಒಟ್ಟಿಗೆ ಕುಳಿತಿದ್ದು, ಈ ಒಗ್ಗಟ್ಟನ್ನು ಮತ್ತೆ ರೂಪಿಸುತ್ತೇವೆ” ಎಂದಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಸಭೆಯಲ್ಲಿದ್ದ ವಿರೋಧ ಪಕ್ಷದ ನಾಯಕರು ಒತ್ತಾಯಿಸಿದರು. ಆದರೆ, ಅವರು ಮತ್ತೊಮ್ಮೆ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿರಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ವಿರೋಧ ಪಕ್ಷದ ಸಂಭಾವ್ಯ ಅಭ್ಯರ್ಥಿಗಳಾಗಿ ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಸೂಚಿಸಿದ್ದಾರೆ ಎಂದು ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ, ಎನ್‌ಸಿಪಿ, ಡಿಎಂಕೆ, ಆರ್‌ಜೆಡಿ ಮತ್ತು ಎಡಪಕ್ಷಗಳ ನಾಯಕರು ಟಿಎಂಸಿ ವರಿಷ್ಠರು ಕರೆದ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಎಎಪಿ, ಎಸ್‌ಎಡಿ, ಎಐಎಂಐಎಂ, ಟಿಆರ್‌ಎಸ್ ಮತ್ತು ಒಡಿಶಾದ ಆಡಳಿತಾರೂಢ ಬಿಜೆಡಿ ಈ ಸಭೆಗೆ ಹಾಜರಾಗಲಿಲ್ಲ.

ಶಿವಸೇನೆ, ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿ(ಎಸ್), ಆರ್‌ಎಸ್‌ಪಿ, ಐಯುಎಂಎಲ್, ಆರ್‌ಎಲ್‌ಡಿ ಮತ್ತು ಜೆಎಂಎಂ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...