Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...