Homeಕರ್ನಾಟಕಬಿಜೆಪಿ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು: ಸಿದ್ದರಾಮಯ್ಯ

ಬಿಜೆಪಿ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು: ಸಿದ್ದರಾಮಯ್ಯ

- Advertisement -
- Advertisement -

’ವಿರೋಧ ಪಕ್ಷಗಳ ಮೇಲೆ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು’ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿರುವುದು ಹಾಗೂ ಪಕ್ಷದ ಮುಖಂಡರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮವನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಭವನ ಚಲೋ ಮತ್ತು ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಮಾತನಾಡಿ, “ಬಿಜೆಪಿ ಸರ್ಕಾರ ತನಿಖೆ ಹೆಸರಿನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದರ ಹಿಂದೆ ದುರುದ್ದೇಶವಿದೆ. ಕಾಂಗ್ರೆಸ್ ಎಂದಿಗೂ ದ್ವೇಷ ರಾಜಕಾರಾಣ ಮಾಡಿಲ್ಲ. ಆದರೆ ಬಿಜೆಪಿ ಅದನ್ನು ಮಾಡುತ್ತಿದೆ. ಸೋನಿಯಾ ಗಾಂಧಿ  ಮತ್ತು ರಾಹುಲ್ ಗಾಂಧಿ ಅವರ ಮೇಲೆ ಸುಳ್ಳು ಕೇಸ್ ಹಾಕಿ, ಅವರ ವರ್ಚಸ್ಸು ಕಡಿಮೆ ಮಾಡಲು ಪ್ರಯತ್ನ ಮಾಡ್ತಿದೆ. ಸತತ ಮೂರು ದಿನಗಳ ಕಾಲ 30 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳುನ್ನು ಬಳಸಿಕೊಂಡು ಇಂತಹ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೋಶ

“ದೆಹಲಿಯಲ್ಲಿರು ಕಾಂಗ್ರೆಸ್‌ ಪ್ರಧಾನ ಕಚೇರಿಯನ್ನು ಪೊಲೀಸರು ಆಕ್ರಮಿಸಿಕೊಂಡಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಶಾಸಕ, ಸಂಸದರನ್ನು, ಮುಖಂಡರನ್ನು ಹೋಗಲು ಬಿಡುತ್ತಿಲ್ಲ. ಹೋದವರ ಮೇಲೆ ಪೊಲೀಸರು ಹಲ್ಲೆ ಮಾಡಲಾಗುತ್ತಿದೆ. ಇಂತಹ ನೀಚ ಕೃತ್ಯಕ್ಕೆ ಬಿಜೆಪಿ ಕೈ ಹಾಕಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಡಿಕೊಳ್ಳುತ್ತಿದೆ” ಎಂದಿದ್ದಾರೆ.

ಮುಂದುವರೆದು “ಸಂವಿಧಾನ ಬದ್ಧವಾಗಿ ನೀಡಲಾಗಿರುವ ಪ್ರತಿಭಟಿಸುವ ಹಕ್ಕನ್ನು ಬಿಜೆಪಿ ಕಿತ್ತುಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇಂತಹದ್ದು ಎಂದೂ ನಡೆದಿರಲಿಲ್ಲ. ಇದಕ್ಕೆ ಅವಕಾಶ ನೀಡಬಾರದು. ಎಲ್ಲಾ ಬಿಜೆಪಿಯೇತರ ಪಕ್ಷಗಳು ಇದನ್ನು ಪ್ರತಿಭಟಿಸಬೇಕು. ಮಮತಾ ಬ್ಯಾನರ್ಜಿ, ಶರದ್ ಪವಾರ್‌, ಸ್ಟಾಲಿನ್, ಕಮ್ಯೂನಿಸ್ಟ್ ಪಾರ್ಟಿ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಇದನ್ನು ಖಂಡಿಸಬೇಕು, ಇದು ದೇಶದ ಮೇಲೆ ನಡೆಯುತ್ತಿರುವ ಪ್ರಹಾರ, ಪ್ರಜಾಪ್ರಭುತ್ವದ ಮೇಲಿನ ಪ್ರಹಾರ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬುಧವಾರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ದೆಹಲಿ ಪೊಲೀಸರು ಬಲವಂತವಾಗಿ ನುಗ್ಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದರು. ಒಕ್ಕೂಟ ಸರ್ಕಾರ ತನಿಖಾ ಸಂಸ್ಥೆಗಳನ್ನು, ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜಭವನ ಚಲೋಗೆ ಕರೆ ನೀಡಿದ್ದರು.


ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿ ವಿರುದ್ಧ ಒಮ್ಮತದ ಅಭ್ಯರ್ಥಿಗೆ ವಿಪಕ್ಷಗಳು ಒಪ್ಪಿಗೆ: ಮಹಾತ್ಮ ಗಾಂಧಿ ಮೊಮ್ಮಗ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...