Homeಚಳವಳಿಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ

- Advertisement -
- Advertisement -

ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಸಶಸ್ತ್ರ ಪಡೆಗಳ ಅಲ್ಪಾವದಿ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಗುರುವಾರ ಹಿಂಸಾಚಾರಕ್ಕೆ ತಿರುಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದುಕೊಂಡು ಒಕ್ಕೂಟ ಸರ್ಕಾರದ ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್‍ರಾದಲ್ಲಿನ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಸಿಡಿಸಿದ್ದಾರೆ. ಪ್ರತಿಭಟನಾಕಾರರು ರೈಲ್ವೇ ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ, ಅದನ್ನು ನಂದಿಸಲು ರೈಲ್ವೆ ಸಿಬ್ಬಂದಿಗಳು ಹರಸಾಹಸಪಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು ಪೊಲೀಸರು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ. ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಓಡಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊ ಹರಿದಾಡುತ್ತಿವೆ. ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ.

ನಾವಡಾದಲ್ಲಿ, ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಸುಟ್ಟು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡ ನಿಲ್ದಾಣದಲ್ಲಿ ರೈಲು ಹಳಿಗಳಲ್ಲಿ ನಿಂತು ರೈಲು ತಡೆದು ಹಳಿ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಅಲ್ಲಿ ಸೇರಿದ್ದ ಭಾರೀ ಜನಸಮೂಹವು ರೈಲ್ವೇ ಆಸ್ತಿಗೆ ಹಾನಿಗೊಳಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ. ಪೊಲೀಸರು ಶಾಂತಿ ಕಾಪಾಡುವಂತೆ ಜನರಿಗೆ ಕೇಳಿಕೊಂಡಿದ್ದಾರೆ.

ಸಹರ್ಸಾದಲ್ಲಿ, ರೈಲು ಸಂಚಾರ ಅಡ್ಡಿಪಡಿಸುತ್ತಿರುವುದನ್ನು ತಡೆಯಲು ಬಂದ ಪೊಲೀಸರಿಗೆ ವಿದ್ಯಾರ್ಥಿಗಳು ರೈಲು ನಿಲ್ದಾಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಚಪ್ರಾದಲ್ಲಿ ಪ್ರತಿಭಟನೆಗಳು ಹಿಂಸೆಗೆ ತಿರುಗಿದ್ದು, ಹೆದ್ದಾರಿಯಲ್ಲಿನ ಬಸ್ಸುಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲೂ ಪ್ರತಿಭಟನೆಗಳು ನಡೆದಿದ್ದು ವರದಿಯಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ, ಬಿಹಾರದ ಮುಜಾಫರ್‌ಪುರ ಮತ್ತು ಬಕ್ಸಾರ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ಅಗ್ನಿಪಥ್, ಟೂರ್ ಆಫ್ ಡ್ಯೂಟಿ ಸ್ಕೀಮ್, ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸೈನಿಕರ ನೇಮಕಾತಿ ಮಾಡುತ್ತದೆ. ಇದು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದ ಹುದ್ದೆಯಾಗಿದ್ದು, ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ.

ಸರ್ಕಾರದ ಹೊಸ ನೇಮಕಾತಿ ಯೋಜನೆಯು, ಸೈನ್ಯದ ಸಂಬಳ ಮತ್ತು ಪಿಂಚಣಿ ಮೊತ್ತಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ಅಗ್ನಿಪಥ್ ಯೋಜನೆಯಡಿ, 17.5 ವರ್ಷದಿಂದ 21 ವರ್ಷದೊಳಗಿನ ಸುಮಾರು 45 ಸಾವಿರ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯ ಸೇವೆಗಳಿಗೆ ಸೇರಿಸಲಾಗುತ್ತದೆ. ಈ ಅವಧಿಯಲ್ಲಿ, ಅವರಿಗೆ ಮಾಸಿಕ ವೇತನವನ್ನು ರೂ 30,000-40,000 ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಈ ವೇಳೆ ಅವರಿಗೆ ವೈದ್ಯಕೀಯ ಮತ್ತು ವಿಮೆ ಪ್ರಯೋಜನಗಳು ಸಿಗಲಿದೆ.

ಇದನ್ನೂ ಓದಿ: ‘ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ’: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ನಾಲ್ಕು ವರ್ಷಗಳ ನಂತರ, ಈ ಸೈನಿಕರಲ್ಲಿ ಕೇವಲ 25% ಜನರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ನಂತರ ಅವರನ್ನು ಪೂರ್ಣ 15 ವರ್ಷಗಳ ಕಾಲ ಅಧಿಕಾರೇತರ ಶ್ರೇಣಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಉಳಿದವರನ್ನು ಕಡ್ಡಾಯ ನಿವೃತ್ತಿಗೆ ಮಾಡಿ 11-12 ಲಕ್ಷದ ಪ್ಯಾಕೇಜ್‌‌ ನೀಡಲಾಗುತ್ತದೆ. ಆದರೆ ಅವರಿಗೆ ಪಿಂಚಣಿಯನ್ನು ನೀಡಲಾಗುವುದಿಲ್ಲ. ಸರ್ಕಾರದ ಈ ಹೊಸ ನೀತಿಗೆ ಮಾಜಿ ಸೈನಾಧಿಕಾರಿಗಳು ಸೇರಿದಂತೆ ಹಲವಾರು ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...