Homeಚಳವಳಿಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ

- Advertisement -
- Advertisement -

ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಸಶಸ್ತ್ರ ಪಡೆಗಳ ಅಲ್ಪಾವದಿ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಗುರುವಾರ ಹಿಂಸಾಚಾರಕ್ಕೆ ತಿರುಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದುಕೊಂಡು ಒಕ್ಕೂಟ ಸರ್ಕಾರದ ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್‍ರಾದಲ್ಲಿನ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಸಿಡಿಸಿದ್ದಾರೆ. ಪ್ರತಿಭಟನಾಕಾರರು ರೈಲ್ವೇ ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ, ಅದನ್ನು ನಂದಿಸಲು ರೈಲ್ವೆ ಸಿಬ್ಬಂದಿಗಳು ಹರಸಾಹಸಪಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು ಪೊಲೀಸರು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ. ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಓಡಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊ ಹರಿದಾಡುತ್ತಿವೆ. ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ.

ನಾವಡಾದಲ್ಲಿ, ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಸುಟ್ಟು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡ ನಿಲ್ದಾಣದಲ್ಲಿ ರೈಲು ಹಳಿಗಳಲ್ಲಿ ನಿಂತು ರೈಲು ತಡೆದು ಹಳಿ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಅಲ್ಲಿ ಸೇರಿದ್ದ ಭಾರೀ ಜನಸಮೂಹವು ರೈಲ್ವೇ ಆಸ್ತಿಗೆ ಹಾನಿಗೊಳಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ. ಪೊಲೀಸರು ಶಾಂತಿ ಕಾಪಾಡುವಂತೆ ಜನರಿಗೆ ಕೇಳಿಕೊಂಡಿದ್ದಾರೆ.

ಸಹರ್ಸಾದಲ್ಲಿ, ರೈಲು ಸಂಚಾರ ಅಡ್ಡಿಪಡಿಸುತ್ತಿರುವುದನ್ನು ತಡೆಯಲು ಬಂದ ಪೊಲೀಸರಿಗೆ ವಿದ್ಯಾರ್ಥಿಗಳು ರೈಲು ನಿಲ್ದಾಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಚಪ್ರಾದಲ್ಲಿ ಪ್ರತಿಭಟನೆಗಳು ಹಿಂಸೆಗೆ ತಿರುಗಿದ್ದು, ಹೆದ್ದಾರಿಯಲ್ಲಿನ ಬಸ್ಸುಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲೂ ಪ್ರತಿಭಟನೆಗಳು ನಡೆದಿದ್ದು ವರದಿಯಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ, ಬಿಹಾರದ ಮುಜಾಫರ್‌ಪುರ ಮತ್ತು ಬಕ್ಸಾರ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ಅಗ್ನಿಪಥ್, ಟೂರ್ ಆಫ್ ಡ್ಯೂಟಿ ಸ್ಕೀಮ್, ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸೈನಿಕರ ನೇಮಕಾತಿ ಮಾಡುತ್ತದೆ. ಇದು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದ ಹುದ್ದೆಯಾಗಿದ್ದು, ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ.

ಸರ್ಕಾರದ ಹೊಸ ನೇಮಕಾತಿ ಯೋಜನೆಯು, ಸೈನ್ಯದ ಸಂಬಳ ಮತ್ತು ಪಿಂಚಣಿ ಮೊತ್ತಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ಅಗ್ನಿಪಥ್ ಯೋಜನೆಯಡಿ, 17.5 ವರ್ಷದಿಂದ 21 ವರ್ಷದೊಳಗಿನ ಸುಮಾರು 45 ಸಾವಿರ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯ ಸೇವೆಗಳಿಗೆ ಸೇರಿಸಲಾಗುತ್ತದೆ. ಈ ಅವಧಿಯಲ್ಲಿ, ಅವರಿಗೆ ಮಾಸಿಕ ವೇತನವನ್ನು ರೂ 30,000-40,000 ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಈ ವೇಳೆ ಅವರಿಗೆ ವೈದ್ಯಕೀಯ ಮತ್ತು ವಿಮೆ ಪ್ರಯೋಜನಗಳು ಸಿಗಲಿದೆ.

ಇದನ್ನೂ ಓದಿ: ‘ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ’: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ನಾಲ್ಕು ವರ್ಷಗಳ ನಂತರ, ಈ ಸೈನಿಕರಲ್ಲಿ ಕೇವಲ 25% ಜನರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ನಂತರ ಅವರನ್ನು ಪೂರ್ಣ 15 ವರ್ಷಗಳ ಕಾಲ ಅಧಿಕಾರೇತರ ಶ್ರೇಣಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಉಳಿದವರನ್ನು ಕಡ್ಡಾಯ ನಿವೃತ್ತಿಗೆ ಮಾಡಿ 11-12 ಲಕ್ಷದ ಪ್ಯಾಕೇಜ್‌‌ ನೀಡಲಾಗುತ್ತದೆ. ಆದರೆ ಅವರಿಗೆ ಪಿಂಚಣಿಯನ್ನು ನೀಡಲಾಗುವುದಿಲ್ಲ. ಸರ್ಕಾರದ ಈ ಹೊಸ ನೀತಿಗೆ ಮಾಜಿ ಸೈನಾಧಿಕಾರಿಗಳು ಸೇರಿದಂತೆ ಹಲವಾರು ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...