Homeಚಳವಳಿಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್‌‌’ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದೆ.

ಇದೇ ವೇಳೆ ಬಿಹಾರದ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯನ್ನು ಧ್ವಂಸ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಹಾರದಲ್ಲಿ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದ್ದು ರಾಜ್ಯದ ಹಲವು ಜಿಲ್ಲೆಗಳಿಗೆ ಹರಡಿದೆ. ಉದ್ರಿಕ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ರೈಲು, ರಸ್ತೆ ತಡೆಯನ್ನು ನಡೆಸಿದ್ದಾರೆ. ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್‌ ಮಾಡಿದ್ದು, ಆಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

“ಪಾಪದ ರೈತರು ಇಡೀ ವರ್ಷ ನಿಮ್ಮ ದೌರ್ಜನ್ಯವನ್ನು ಸಹಿಸಿಕೊಂಡರು. ಇವರು ಬಿಸಿ ರಕ್ತದ ಯುವಕರು, ಬಿಜೆಪಿಯವರನ್ನು 6 ತಿಂಗಳಲ್ಲಿ ಬೆತ್ತಲೆ ಮಾಡುತ್ತಾರೆ” ಎಂದು ದೆಹಲಿ ಶಾಸಕ ಗುಲಾಬ್ ಸಿಂಗ್‌‌ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಯುವಕರು ರೈಲ್ವೇ ಹಳಿಯ ಮೇಲೆ ನಿಂತು ಬಸ್ಕಿ ಹೊಡೆಯುತ್ತಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್‌ ಮಾಡಿದ್ದಾರೆ.

ಉತ್ತರ ಭಾರತದ ಭಾಗಲ್ಪುರ್, ಅರ್ವಾಲ್, ಬಕ್ಸರ್, ಗಯಾ, ಮುಂಗೇರ್, ನವಾಡ, ಸಹರ್ಸಾ, ಸಿವಾನ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ಅಗ್ನಿಪಥ್‌‌ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟಿಸಿದ ಯುವಕರನ್ನು ಲಾಠಿ ಚಾರ್ಜ್‌ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಅಲ್ಪಾವದಿ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಯುವಕರೊಂದಿಗೆ ಪೊಲೀಸರು ವಾಗ್ವಾದ ನಡೆಸಿದರು.

ಮೋದಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್‌ ಯೋಜನೆ ವಿರೋಧಿಸಿ ಬಿಹಾರದಾದ್ಯಂತ ಪ್ರತಿಭಟನೆ ನಡೆಯುತ್ತಿರುವ ವೇಳೆ, ರಾಜ್ಯ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಬಿಹಾರದ ಭಬುವಾ ನಗರದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನೆಯ ವೇಳೆ ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ.

ಪ್ರತಿಭಟನೆಯ ವೇಳೆ ಯುವಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ಪ್ರತಿಭಟನಾಕಾರರು ಬಿಹಾರದ ಬಕ್ಸರ್‌ನಲ್ಲಿ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಬಿಜೆಪಿಯ ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಪೊಲೀಸರು ಹರಿಯಾಣದ ರೇವಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸೇನಾ ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಬಿಹಾರದ ಜೆಹಾನಾಬಾದ್‌ನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ರಾಷ್ಟ್ರೀಯ ಹೆದ್ದಾರಿ-83 ರಲ್ಲಿ ಪ್ರತಿಭಟನೆ ನಡೆಸಿ, ಪಾಟ್ನಾ-ಗಯಾ ಪ್ಯಾಸೆಂಜರ್ ರೈಲನ್ನು ತಡೆದಿದ್ದಾರೆ.

ಬಿಹಾರದ ಛಾಪ್ರಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಬಸ್‌ನ ಗಾಜುಗಳನ್ನು ಒಡೆದು, ರಟ್ಟಿನ ಪೆಟ್ಟಿಗೆಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಉನ್ನಾವೋದಲ್ಲಿ ಅಗ್ನಿಪಥ್‌ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ ಯುವಜನರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ವಿರುದ್ಧ ದಿಕ್ಕಾರ ಕೂಗಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಪೊಲೀಸರು ಅಟ್ಟಾಡಿಸಿ ಲಾಠಿಚಾರ್ಜ್ ಮಾಡಿದ್ದಾರೆ.

ಅಗ್ನಿಪಥ್‌ ಯೋಜನೆಗೆ ಹರಿಯಾಣದಲ್ಲೂ ವಿರೋಧ ವ್ಯಕ್ತವಾಗಿದ್ದು, ಸೇನಾ ಉದ್ಯೋಗಾಂಕ್ಷಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಹಿಂಸೆ ಭುಗಿಲೆದ್ದಿದೆ. ಉದ್ರಿಕ್ತ ಯುವಕರ ಗುಂಪು ಹಲವಾರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ, ಡಿಸಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದೆ. ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಹರಿಯಾಣದ ರೋಹ್ಟಕ್‌ನಲ್ಲಿ 4 ವರ್ಷಗಳಿಂದ ಸೇನಾ ನೇಮಕಾತಿಗೆ ತಯಾರಿ ನಡೆಸಿದ್ದ ‘ಸಚಿನ್‌’ ಎಂಬ ಯುವಕ ನೇಣು ಬಿಗಿದು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅವರು ತಮ್ಮ ಪಿಜಿಯಲ್ಲಿ ನೇಣುಬಿಗಿದಿದ್ದಾಗಿ ವರದಿಗಳು ಉಲ್ಲೇಖಿಸಿವೆ. ರಾಜ್ಯದ ಪಲ್ವಾಲ್‌ನಲ್ಲಿ ಹಿಂಸೆ ಭುಗಿಲೆದ್ದಿದ್ದು ಸರ್ಕಾರಿ ವಾಹನಗಳನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದ ಅಲಿಗಢ್‌‌‌ನಲ್ಲಿ ಉದ್ರಿಕ್ತ ಯುವಕರ ಗುಂಪು ಗಭಾನಾ ಬಳಿ ಬಸ್‌ನ ಗಾಜು ಒಡೆದು ಹಾಕಿ, ಟೈರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.

ಉದ್ರಿಕ್ತ ಪ್ರತಿಭಟನಾಕಾರರು ರಾಜ್ಯದ ಸರ್ಕಾರಿ ಬಸ್‌‌ಗಳ ಗಾಜುಗಳನ್ನು ಒಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬಿಹಾರದ ಮೋತಿಹಾರಿಯಲ್ಲಿ ರೈಲಿಗೆ ಕಲ್ಲು ತೂರಾಟ ನಡೆಸಲಾಗಿದೆ.

ಮೋದಿ ಸರ್ಕಾರ ಜಾರಿಗೆ ತರುತ್ತಿರುವ ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಗಳು ಜಮ್ಮುವಿನಲ್ಲೂ ಪ್ರತಿಧ್ವನಿಸಿದ್ದು, ಸೇನಾ ಉದ್ಯೋಗಾಕಾಂಕ್ಷಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಸೇನಾ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಚದುರಿಸಲು ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...