Homeಕರ್ನಾಟಕ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಈ ಯೋಜನೆಯಿಂದಾಗಿ ಸೇನೆಯ ಸ್ಪಿರಿಟ್‌ಗೆ ಧಕ್ಕೆಯಾಗಬಹುದು’ ಎನ್ನುತ್ತಾರೆ ಕರ್ನಲ್‌ ಕೆ.ಸಿ.ಸುಬ್ಬಯ್ಯ... ‘ಚೆನ್ನಾಗಿದ್ದ ವ್ಯವಸ್ಥೆ ಹಾಳಾಗದಿರಲಿ” ಎನ್ನುತ್ತಾರೆ ಕರ್ನಲ್‌ ಸಿ.ಪಿ.ಮುತ್ತಣ್ಣ... (ಮುಂದೆ ಓದಿರಿ)

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಅಗ್ನಿಪಥ ಯೋಜನೆಯು ಸೇನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ” ಎನ್ನುವುದು ಕೊಡಗಿನ ವೀರ ಯೋಧರ ಆತಂಕ.

ಸೈನಿಕ ನೇಮಕಾತಿಗೆ ಸಂಬಂಧಿಸಿದಂತೆ ‘ಅಗ್ನಿಪಥ’ ಎಂಬ ಹೊಸ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಅಲ್ಪಾವಧಿಯ ರಕ್ಷಣಾ ನೇಮಕಾತಿ ಕುರಿತು ಮಾಹಿತಿ ನೀಡಿದ್ದಾರೆ. ಇದು ಸರ್ಕಾರದ ವತಿಯಿಂದ ಕೈಗೊಂಡ ಐತಿಹಾಸಿಕ ಕ್ರಮ ಎಂದು ಮಾಧ್ಯಮಗಳು ಬಣ್ಣಿಸುವ ವೇಳೆಗಾಗಲೇ ಈ ಯೋಜನೆಯನ್ನು ವಿರೋಧಿಸಿ ಲಕ್ಷಾಂತರ ಯುವಜನರು ಬೀದಿಗಿಳಿದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳನ್ನು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಕೊಡಗಿನ ವೀರ ಯೋಧರೂ ಈ ಯೋಜನೆಯ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕೊಡಗಿನ ಕರ್ನಲ್‌ ಕೆ.ಸಿ.ಸುಬ್ಬಯ್ಯ ಸೇನೆಯಲ್ಲಿ ಸುಮಾರು 28 ವರ್ಷ ಸೇವೆ ಸಲ್ಲಿಸಿದವರು. ಮೇಜರ್‌ ಆಗಿ ಯುನಿಟ್‌ ಮುನ್ನಡೆಸಿದವರು. ಮಾರಾಟವಾಗಿದ್ದ ಜನರಲ್‌ ತಿಮ್ಮಯ್ಯನವರ ಮನೆಯನ್ನು ಮರಳಿ ಪಡೆಯುವುದಕ್ಕಾಗಿ ಹೋರಾಡಿ ಬಳಿಕ ತಿಮ್ಮಯ್ಯ ಮ್ಯೂಸಿಯಂ ಮಾಡಿದವರು ಕೆ.ಸಿ.ಸುಬ್ಬಯ್ಯ. ಜೊತೆಗೆ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ರೂಪಿಸಿದ್ದಾರೆ. ಗೋಣಿಕೊಪ್ಪದಲ್ಲಿ ತಿಮ್ಮಯ್ಯ-ಕಾರ್ಯಪ್ಪ ಮೆಮೊರಿಯಲ್‌ ಸ್ಥಾಪನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸೇನೆಯ ಕುರಿತು ಅಪಾರ ಪ್ರೀತಿಯನ್ನು ಹೊಂದಿರುವ ಇವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನೂ ಓದಿರಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

“ಅಗ್ನಿಪಥ್‌‌ನಲ್ಲಿ ಒಳ್ಳೆಯದು ಉಂಟು, ಕೆಟ್ಟದ್ದು ಉಂಟು. ರಕ್ಷಣಾ ಪಡೆ ಅತ್ಯಂತ ತಾರುಣ್ಯದಿಂದ ಕೂಡಿರುತ್ತದೆ ಎಂಬುದು ಒಳ್ಳೆಯ ವಿಚಾರ. ಆದರೆ ಈ ನಾಲ್ಕು ವರ್ಷಗಳಲ್ಲಿ ಆರು ತಿಂಗಳು ತರಬೇತಿಗೆ ಹೋಗುತ್ತದೆ. ಇನ್ನು ಮೂರುವರೆ ವರ್ಷವನ್ನು ಯೂನಿಟ್‌ನಲ್ಲಿ ಕಳೆಯುತ್ತಾನೆ. ಆದರೆ ಈ ಅಲ್ಪಾವಧಿಯಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತದೆಯೇ ಎಂಬ ಸಂಶಯವಿದೆ. ಶೇ. 25ರಷ್ಟು ಜನರನ್ನು ಉಳಿಸಿಕೊಂಡು ಉಳಿದವರನ್ನು ವಾಪಸ್‌ ಕಳುಹಿಸುತ್ತಾರೆ. ಈ 25% ಜನರನ್ನು ಶಿಫಾರಸ್ಸು ಮಾಡುವವರು ಯಾರು? ಯುನಿಟ್‌‌ನ ಉಸ್ತುವಾರಿಗಳು ಮಾಡುತ್ತಾರೆ. ಕೆಲಸವನ್ನು ಉಳಿಸಿಕೊಳ್ಳಬೇಕೆಂದು ಈ ಯುವಕರು ಏನು ಬೇಕಾದರೂ ಮಾಡಬಹುದು. ಹೀಗಾಗಿ ಯುನಿಟ್‌ನೊಳಗಿನ ಸ್ಪಿರಿಟ್‌ ಇಲ್ಲವಾಗಿಬಿಡುತ್ತದೆ ಎಂಬ ಆತಂಕ ಕಾಡುತ್ತಿದೆ” ಎಂದರು.

“ಆರ್ಮಿಯಿಂದ ಹೊರಬಂದ ಮೇಲೆ ಬಿಎಸ್‌ಎಫ್‌, ಸಿಆರ್‌ಫಿಎಫ್‌‌, ಪೊಲೀಸ್ ಅಥವಾ ಇನ್ಯಾವುದೇ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದರೆ ಈ ಹುಡುಗರು ಉತ್ಸಾಹದಿಂದ ಸೇವೆ ಸಲ್ಲಿಸುತ್ತಾರೆ. ಈಗ ಒಂದೇ ಸಲಕ್ಕೆ 40 ಸಾವಿರ ಜನ ಸೇನೆಗೆ ಹೋಗಬಹುದು. ಆದರೆ ಎರಡನೇ ಅವಧಿಗೆ ಇಷ್ಟು ಯುವಕರು ಸಿಗುತ್ತಾರೆಯೇ ಎಂಬುದೇ ಅನುಮಾನ” ಎಂದು ತಿಳಿಸಿದರು.

“ಈ ನಾಲ್ಕು ವರ್ಷಗಳ ನಂತರ ತಾನು ಉಳಿಯಬೇಕೆಂದು ಇಲ್ಲದ ಸಲ್ಲದ ದೂರುಗಳನ್ನು ಹೇಳುತ್ತಾ, ಇಡೀ ಯೂನಿಟ್‌ ಹಾಳು ಮಾಡುವ ಸಾಧ್ಯತೆ ಇದೆ. ಈ ಅಗ್ನಿಪಥ್ ಯೋಜನೆ ಒಳ್ಳೆಯದೆಂದು ಕಾಣುತ್ತಿಲ್ಲ. ತರಾತುರಿಯಲ್ಲಿ ಮಾಡಿರುವ ಯೋಜನೆ ಇದು” ಎಂದು ಅಭಿಪ್ರಾಯಪಟ್ಟರು.

“ಆರ್ಮಿಯಿಂದ ಹೊರಗೆ ಬಂದ ಮೇಲೆ ಬೇರೆ ಕೆಲಸ ಕೊಡುವುದಾಗಿ ಈಗ ಹೇಳುತ್ತಿದ್ದಾರೆ. ಆದರೆ ನನ್ನ ಅನುಭವದಲ್ಲಿ ಹೇಳುವುದಾದರೆ ಯಾವುದೇ ಕೆಲಸವನ್ನೂ ಇವರು ಕೊಡುವುದಿಲ್ಲ. ಈ ಸಿಪಾಯಿಗಳು ಬಿಟ್ಟು ಬರುವಾಗ ಕನಿಷ್ಟ 32 ವರ್ಷಕ್ಕೆ ಕಾಲಿಟ್ಟಿರುತ್ತಾರೆ. ಇವರನ್ನು ಗನ್‌ ಮ್ಯಾನ್‌ ಅಲ್ಲದೆ ಬೇರೆ ಯಾವ ಕೆಲಸಕ್ಕೂ ತೆಗೆದುಕೊಂಡಿದ್ದು ನೋಡಿಲ್ಲ. 18 ವರ್ಷ ಸೇವೆ ಮಾಡಿ ಬಂದವರನ್ನೇ ತೆಗೆದುಕೊಳ್ಳಲಿಲ್ಲ ಅಂದ ಮೇಲೆ ನಾಲ್ಕು ವರ್ಷ ಕೆಲಸ ಮಾಡಿದವರನ್ನು ತೆಗೆದುಕೊಳ್ಳುತ್ತಾರೆಯೇ?” ಎಂದು ಪ್ರಶ್ನಿಸಿದರು.

“ಟ್ರೈನ್‌ ಆಗಿರುವ ಮಾನವ ಸಂಪನ್ಮೂಲ ಕೆಲಸವಿಲ್ಲದೆ ಕೂರುವುದೆಂದರೆ ಅದು ಈ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಕಾಣುತ್ತಿವೆ. ಹಣ ಉಳಿಸಿಕೊಳ್ಳಬೇಕೆಂಬ ಧಾವಂತದಲ್ಲಿ ಇಡೀ ಸೈನ್ಯವನ್ನು ಕೆಡಿಸಿಬಿಡುತ್ತಾರೋ ಎಂಬ ಭಯ ಕಾಡುತ್ತಿದೆ. ಒಂದು ಯೂನಿಟ್‌ಗಾಗಿ ಸೈನಿಕ ಈವರೆಗೆ ಸಾಯಲು ಸಿದ್ಧನಿದ್ದ. ನಾನು ಯೂನಿಟ್‌ ಮುನ್ನೆಡೆಸುವಾಗ ನನ್ನೊಂದಿಗೆ ನಲವತ್ತು ಯೋಧರಿದ್ದರು. ಗುಂಡು ಹಾರಿಸಿದರೂ ಎದೆಕೊಡಲು ಎಲ್ಲರೂ ಮುಂದೆ ಬರುತ್ತಿದ್ದರು. ಕಾರಣ ಒಂದು ಯೂನಿಟ್‌ ಎಂದರೆ- ನಂಬಿಕೆ, ಪ್ರೀತಿಯ ಧ್ಯೋತಕವಾಗಿರುತ್ತದೆ. ಒಂದು ಕುಟುಂಬವೇ ಆಗಿರುತ್ತದೆ. ಆದರೆ ಈ ಹೊಸ ಯೋಜನೆಯಿಂದಾಗಿ ಅದೆಲ್ಲವೂ ಹಾಳಾಗುವ ಸಾಧ್ಯತೆ ಇದೆ” ಎಂದು ಎಚ್ಚರಿಸಿದರು.

“ಹಣ ಉಳಿಸುವ ಮಾತುಗಳನ್ನಾಡುತ್ತಿದ್ದಾರೆ. ಭದ್ರತಾ ವಿಚಾರದಲ್ಲಿ ಚೌಕಾಸಿ ಬೇಡವಿತ್ತು. ನಾಲ್ಕೈದು ಯುದ್ಧಗಳು ನಡೆದಿವೆ. ಗೆದ್ದಿದ್ದೇವೆ. ಯುದ್ಧದಲ್ಲಿ ಸೋತಿದ್ದರೆ ಸೈನ್ಯದ ಬೆಲೆ ಏನು, ಸೇನೆ ಹೇಗೆ ಕೆಲಸ ಮಾಡುತ್ತದೆ ಎಂಬುದು ಈ ರಾಜಕಾರಣಿಗಳಿಗೆ ಗೊತ್ತಾಗುತ್ತಿತ್ತು. ಸಂಸತ್ತಿನ ಮೇಲೆ ಅಟ್ಯಾಕ್‌ ಆಯಿತು. ಕಣ್ಣಿಗೆ ಬಂದಿದ್ದನ್ನು ರೆಪ್ಪೆ ತಡೆಯಿತು ಎಂಬಂತೆ ಎಲ್ಲರೂ ಬಚಾವಾದರು. ಯಾರಾದರೂ ಸಚಿವರಿಗೂ ಸಂಸದರಿಗೋ ಜೀವ ಹಾನಿಯಾಗಿದ್ದರೆ ಈ ಡಿಫೆನ್ಸ್‌ ಫೋರ್ಸ್‌‌ನ ಬೆಲೆ ಏನೆಂಬುದು ಗೊತ್ತಾಗುತ್ತಿತ್ತು. ರಕ್ಷಣಾ ಪಡೆಯೊಂದಿಗೆ ಸರ್ಕಾರ ಚೆಲ್ಲಾಟವಾಡಬಾರದು” ಎಂದು ಮನವಿ ಮಾಡಿದರು.

“ಪಿಂಚಣಿಯನ್ನು ನಿಲ್ಲಿಸಲು ಯೋಚಿಸಿದ್ದಾರೆ. ಒಬ್ಬಾತ ಎಂಎಲ್‌ಎ ಆಗಿಯೋ ಎಂಪಿಯಾಗಿಯೋ ಐದು ಬಾರಿ ಆಯ್ಕೆಯಾದರೆ ಐದು ಪಟ್ಟು ಹೆಚ್ಚು ಪಿಂಚಣಿ ಪಡೆಯುತ್ತಾನೆ. ಏನಿದರ ಅರ್ಥ? ಯೋಧರಿಗೆ ನೀಡಬೇಕಾದ ಪಿಂಚಣಿಯನ್ನು ಜನರ ಬೊಕ್ಕಸದಿಂದಲೇ ಕೊಡಬೇಕಲ್ಲ. ಆರ್ಮಿಯೊಂದಿಗೆ ಚೆಲ್ಲಾಟವಾಡುತ್ತಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು ಕರ್ನಲ್‌ ಕೆ.ಸಿ.ಸುಬ್ಬಯ್ಯ.

ಚೆನ್ನಾಗಿದ್ದ ವ್ಯವಸ್ಥೆಯನ್ನು ಹಾಳು ಮಾಡುವುದು ಬೇಕಿಲ್ಲ: ಸಿ.ಪಿ.ಮುತ್ತಣ್ಣ

24 ವರ್ಷ ದೇಶಕ್ಕಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದವರು ಕರ್ನಲ್‌‌ ಸಿ.ಪಿ.ಮುತ್ತಣ್ಣ. ‘ನಾನುಗೌರಿ.ಕಾಂ’ನಲ್ಲಿ ಮಾತನಾಡಿದ ಅವರು, “ವಿಶ್ವದಲ್ಲೇ ಅತ್ಯುತ್ತಮ ಸೇನೆ ಎಂಬ ಹೆಗ್ಗಳಿಕೆ ನಮ್ಮ ಆರ್ಮಿಗಿದೆ. ಎಲ್ಲವೂ ಚೆನ್ನಾಗಿರುವಾಗ ಅದಕ್ಕೆ ತೊಂದರೆ ಮಾಡುವ ಅವಶ್ಯಕತೆ ಇರಲಿಲ್ಲ. ಸರ್ಕಾರದ ಯೋಚನೆ ಸರಿ ಇರಬಹುದು. ಆದರೆ ಸರಿಯಾಗಿ ಆಲೋಚನೆ ಮಾಡಿದಂತಿಲ್ಲ” ಎಂದು ಅಭಿಪ್ರಾಯಪಟ್ಟರು.

“25% ಜನರನ್ನು ಉಳಿಸಿಕೊಂಡು ಉಳಿದವರನ್ನು ಕೆಲಸದಿಂದ ತೆಗೆಯಲು ಯೋಚಿಸಿದ್ದಾರೆ. ಹೀಗೆ ಮಾಡದೆ, ಸಿಆರ್‌ಪಿಎಫ್‌, ಬಿಎಸ್‌ಎಫ್‌, ಪೊಲೀಸ್‌, ಕೆಎಸ್‌ಆರ್‌ಪಿ- ಇವುಗಳಲ್ಲಿ ಸೈಡ್‌ ಸ್ಟೆಪ್‌ ಮಾಡಲು ಅವಕಾಶ ನೀಡಬಹುದು. ಇಲ್ಲವೆಂದರೆ ಪಾಪ, ಈ ಯುವಕರು ಎಲ್ಲಿಗೆ ಹೋಗಬೇಕು? ಕೊನೆಗೆ ಸೆಕ್ಯುರಿಟಿ ಆಗಬೇಕಷ್ಟೇ” ಎಂದು ತಿಳಿಸಿದರು.

“ಯುವಕರು ಪ್ರತಿಭಟನೆ ಮಾಡುತ್ತಿದ್ದಾರೆ. ಕೋವಿಡ್ ಬಿಕ್ಕಟ್ಟಿನಿಂದಾಗಿ ಎರಡು ವರ್ಷದಿಂದ ಆರ್ಮಿ ನೇಮಕಾತಿ ನಡೆದಿಲ್ಲ. ಕೆಲವರಿಗೆ ಪರೀಕ್ಷೆಗಳು ನಡೆದವು. ಆದರೆ ನೇಮಕಾತಿ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಕೆಲವು ಯುವಕರು ವಯೋಮಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಯುವಕರು ಖಾಯಂ ಉದ್ಯೋಗದತ್ತ ನೋಡುತ್ತಿದ್ದಾರೆ. ಆದರೆ ಈ ರೀತಿಯ ಹೋರಾಟ ಅಗತ್ಯವಿಲ್ಲ. ಈ ಯುವಕರನ್ನು ರೌಡಿ ಶೀಟರ್‌ ಒಮ್ಮೆ ಗುರುತಿಸಿಬಿಟ್ಟರೆ ಮತ್ತೆಂದೂ ಯಾವುದೇ ಕೆಲಸ ಸಿಗುವುದಿಲ್ಲ. ಶಾಂತಿಯುತ ಹೋರಾಟಕ್ಕೆ ಮರಳಬೇಕು” ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿರಿ: Explainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?

“ಇದು ದೇಶದ ರಕ್ಷಣೆಯ ವಿಚಾರ. ಆರ್ಮಿ ಹೇಗಿರುತ್ತದೆ ಎಂಬುದು ರಾಜಕಾರಣಿಗಳಿಗೆ ಗೊತ್ತಿಲ್ಲ. ಈ ರಾಜಕಾರಣಿಗಳಾಗಲೀ, ಇವರ ತಂದೆಯವರೂ ಸೇನೆಯಲ್ಲಿ ಕೆಲಸ ಮಾಡಿರುವುದಿಲ್ಲ. ಈ ಅಗ್ನಿಪಥ್‌ ಯೋಜನೆ ಬೇಡವೆಂದು ಸೇನಾ ತಜ್ಞರೂ ಹೇಳುತ್ತಿದ್ದಾರೆ. ಇದೆಲ್ಲ ಈ ರಾಜಕಾರಣಿಗಳಿಗೆ ಅರ್ಥವಾಗುವುದಿಲ್ಲ” ಎಂದು ವಿಷಾದಿಸಿದರು.

“ಬೇರೆ ದೇಶದಲ್ಲಿಯೂ ಇದೇ ರೀತಿಯ ಯೋಜನೆಗಳಿವೆ ಎಂದು ಸಮರ್ಥಿಸುತ್ತಿದ್ದಾರೆ. ಬೇರೆ ದೇಶದಲ್ಲಿ ಮಾಡಿದರೆಂದೂ ನಾವು ಅದನ್ನೇ ಮಾಡಬೇಕಾ? ಈಗ ಇರುವ ವ್ಯವಸ್ಥೆಯೇ ಸದೃಢವಾಗಿದೆಯಲ್ಲ. ರಷ್ಯಾ- ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದೆ. ರಷ್ಯಾ ಸೇನೆಯಲ್ಲಿ ಹೀಗೆಯೇ ಯುವಕರನ್ನು ಸೇರಿಸಿಕೊಳ್ಳಲಾಗಿದೆ. ಬಹುತೇಕರು ಆರು ತಿಂಗಳಲ್ಲಿ ಕೆಲಸ ಕಳೆದುಕೊಳ್ಳಲಿದ್ದಾರೆ. ಬಹುತೇಕ ಯೋಧರಿಗೆ ಈ ಕದನದ ಮೇಲೆ ಹೆಚ್ಚಿನ ಆಸಕ್ತಿ ಇಲ್ಲ” ಎಂದು ಉಲ್ಲೇಖಿಸಿದರು.

ಮಾಜಿ ಯೋಧರಾದ ಕೆ.ಜಿ.ಶಿವಂ ಮಾತನಾಡಿ, “ಸೇನೆಗೆ ಸೇರಿ ತರಬೇತಿ ಪಡೆದು ಹೊರಬಂದವರು ತಮ್ಮ ತರಬೇತಿಯನ್ನು ದುರುಪಯೋಗ ಮಾಡಿಕೊಳ್ಳಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...