Homeಮುಖಪುಟಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

ಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

- Advertisement -
- Advertisement -
ಕಳೆದ ವಾರ ಉತ್ತರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ 9 ಮಂದಿಯನ್ನು ಇಬ್ಬರು ಪೊಲೀಸರು ಅಮಾನವೀಯವಾಗಿ ಹೊಡೆಯುತ್ತಿರುವ ವಿಡಿಯೋವನ್ನು ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ತಮ್ಮ ಟ್ವಿಟ್ಟರ್‌ನಲ್ಲಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂದು ಹಂಚಿಕೊಂಡಿದ್ದರು. ಈ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ಪೊಲೀಸರು ಘಟನೆಯನ್ನು ನಿರಾಕರಿಸಿದ್ದರು.
ಈಗ ಈ ಪ್ರಕರಣಕ್ಕೆ ಹೊಸ ರೂಪ ಬಂದಿದ್ದು, ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ವಿಚಾರಣೆ ನಡೆಸುತ್ತಿದ್ದೇವೆ. ಅಗತ್ಯವಿದ್ದರೇ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸಹರಾನ್‌ಪುರ್‌ ನಗರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್‌ ಕುಮಾರ್‌ ನಿನ್ನೆಯವರೆಗೂ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವಿಡಿಯೋ ಎಲ್ಲಿಯದು ಎಂದು ಗೊತ್ತಿಲ್ಲ. ಯಾವುದೇ ದೂರುಗಳು ಬಂದರೆ ವಿಚಾರಿಸುತ್ತೇವೆ ಎಂದು ಹೇಳಿದ್ದರು.

ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಅಗತ್ಯವಿದ್ದರೆ ಕ್ರಮ ತೆಗೆದುಕೊಳ್ಳಲು ನಗರದ ವರಿಷ್ಠಾಧಿಕಾರಿ ವಿಚಾರಣೆ ನಡೆಸುತ್ತಾರೆ” ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ತೋಮರ್ ಅವರನ್ನು NDTV ಉಲ್ಲೇಖಿಸಿದೆ. 

ಇದನ್ನೂ ಓದಿ: ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಪೊಲೀಸರು “ಗಲಭೆಕೋರರಿಗೆ ರಿಟರ್ನ್ ಗಿಫ್ಟ್‌” ಎಂದು ಬರೆದಿದ್ದರು. ಆದರೆ, ಯಾರೂ ಯಾವುದೇ ದೂರು ದಾಖಲಿಸದ ಕಾರಣ ಪ್ರಕರಣದಲ್ಲಿ ಯಾವುದೇ ತನಿಖೆ ನಡೆದಿಲ್ಲ ಎಂದು ರಾಜೇಶ್ ಕುಮಾರ್ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿದ್ದಾರೆ. ಒಂಬತ್ತು ಮಂದಿ ಕೈ ಮುಗಿದ್ದು ಬೇಡಿಕೊಂಡರು ಬಿಡದೆ ಲಾಠಿಯಿಂದ ಥಳಿಸಲಾಗುತ್ತಿದೆ. ಪೊಲೀಸರ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದರು.
ಎನ್‌ಡಿಟಿವಿ ತನಿಖೆ ನಡೆಸಿದ ಒಂದು ದಿನದ ಬಳಿಕ ಹಿರಿಯ ಪೊಲೀಸ್ ಅಧಿಕ್ಷಕ ಆಕಾಶ್ ತೋಮರ್‌ ಅವರ ಹೇಳಿಕೆ ಬಂದಿವೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಲಾಕಪ್‌ ಡೆತ್‌ಗಳಲ್ಲಿ ಮೊದಲ ಸ್ಥಾನದಲ್ಲಿದೆ.

 


ಇದನ್ನೂ ಓದಿ: ಯುಪಿ ಪೊಲೀಸರಿಂದ ಅಮಾನವೀಯ ಹಲ್ಲೆ : ಮಾಹಿತಿಯಿಲ್ಲ ಎಂದ ಪೊಲೀಸರು, ದೂರು ನೀಡಲು ಹೆದರುತ್ತಿರುವ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...