Homeಮುಖಪುಟಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

- Advertisement -

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ಪ್ರಶ್ನಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮೇಲೆ ದೆಹಲಿ ಪೊಲೀಸರು ಬೂಟು ಕಾಲಿನಿಂದ ಹೊಡೆದ ದೃಶ್ಯಗಳು ವೈರಲ್ ಆಗಿವೆ.

ಸಾಮಾಜಿಕ ಮಾಧ್ಯಮಗಳು, ಸುದ್ದಿ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಬಿ.ವಿ.ಶ್ರೀನಿವಾಸ್ ಅವರನ್ನು ಹಲವಾರು ಪೊಲೀಸ್ ಅಧಿಕಾರಿಗಳು ಎಳೆದೊಯ್ಯುತ್ತಿರುವುದು ಮತ್ತು ದಾರಿಯಲ್ಲಿ ಒಬ್ಬ ಅಧಿಕಾರಿಯಿಂದ ಓಡಿ ಬಂದು ತನ್ನ ಬೂಟು ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ.

ಇನ್ನು ಸೋಮವಾರದಿಂದ ಸುಮಾರು 800 ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯವು ಸತತ ಮೂರು ದಿನಗಳ ಕಾಲ, 30 ಗಂಟೆಗೂ ಹೆಚ್ಚು ಕಾಲ ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸಿರುವುದನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೇಡಿನ ರಾಜಕಾರಣಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು: ಸಿದ್ದರಾಮಯ್ಯ

- Advertisement -

ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ನಡೆದುಕೊಂಡ ರೀತಿಗೆ ಸಾಮಾಜಿಕ ಜಾಲತಾಣ ಬಳಕೆದಾರರು ಟೀಕಿಸಿದ್ದಾರೆ. ಕಳೆದ ವರ್ಷ ದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್‌ ಸಹಾಯ ಮಾಡಿ ಬಿ.ವಿ.ಶ್ರೀನಿವಾಸ್ ಜನಮನ್ನಣೆ ಗಳಿಸಿದ್ದರು.

ಬುಧವಾರ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಪಕ್ಷದ ಸಂಸದೆ ಜೋತಿಮಣಿ ಅವರ ವೀಡಿಯೊವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ದೆಹಲಿ ಪೊಲೀಸರು ಸಂಸದೆ ಮೇಲೆ “ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

’ಪೊಲೀಸರು ಕೂಡ ನೀರು ಕೊಡಲು ನಿರಾಕರಿಸಿದ್ದಾರೆ ಎಂದು ಜೋತಿಮಣಿ ವಿಡಿಯೋದಲ್ಲಿ ಹೇಳಿದ್ದಾರೆ. “ನಾವು ಹೊರಗಿನಿಂದ ನೀರು ಖರೀದಿಸಲು ಪ್ರಯತ್ನಿಸುತ್ತಿರುವಾಗ, ಅವರು ನಮಗೆ ನೀರು ಕೊಡಬೇಡಿ ಎಂದು ಮಾರಾಟಗಾರರಿಗೆ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದಲ್ಲದೆ, ದೆಹಲಿ ಪೊಲೀಸ್ ಸಿಬ್ಬಂದಿ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಗೆ ಬಲವಂತವಾಗಿ ಪ್ರವೇಶಿಸಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಥಳಿಸಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದು, ಪಕ್ಷದ ಆವರಣಕ್ಕೆ ನುಗ್ಗಿ ಯಾವುದೇ ಪ್ರಚೋದನೆಯಿಲ್ಲದೆ ಕಾರ್ಯಕರ್ತರನ್ನು ಥಳಿಸಿದ ಎಲ್ಲಾ ದೆಹಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿದೆ. ಜೊತೆಗೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಮಹಿಳಾ ಕಾರ್ಯಕರ್ತೆಯರ ಮೇಲೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹಲ್ಲೆ ನಡೆಸುತ್ತಿರುವ ಪೋಟೋ, ವಿಡಿಯೋಗಳು ಟೀಕೆಗೆ ಗುರಿಯಾಗಿವೆ.


ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...