ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಮನೆ ಮೇಲೆ ಶುಕ್ರವಾರ (ಜೂನ್ 17) ಕೇಂದ್ರ ತನಿಖಾ ದಳವು (CBI) ಭ್ರಷ್ಟಾಚಾರದ ಹೊಸ ಪ್ರಕರಣದಲ್ಲಿ ದಾಳಿ ನಡೆಸಿದೆ. ತನಿಖಾ ಸಂಸ್ಥೆಯ ತಂಡವು ಅಗ್ರಸೇನ್ ಗೆಹ್ಲೋಟ್ ಅವರ ವ್ಯವಹಾರ ಕಚೇರಿಗೂ ತೆರಳಿ, ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ರಸಗೊಬ್ಬರ ರಫ್ತು ಪ್ರಕರಣದ ಆರೋಪದಲ್ಲಿ ಸಿಎಂ ಸಹೋದರ ಅಗ್ರಸೇನ್ ಗೆಹ್ಲೋಟ್ ಈಗಾಗಲೇ ಜಾರಿ ನಿರ್ದೇಶನಾಲಯದ (ED) ವಿಚಾರಣೆಯನ್ನು ಎದುರಿಸುತ್ತಿದ್ದಾರೆ. 2007 ಮತ್ತು 2009 ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರವನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಗೆಹ್ಲೋಟ್ ಅವರಿಗೆ ಸೇರಿದ ಸ್ಥಳಗಳಲ್ಲಿಯೂ ಶೋಧ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯು ಭ್ರಷ್ಟಾಚಾರದ ಹೊಸ ಪ್ರಕರಣವನ್ನು ದಾಖಲಿಸಿದ ನಂತರ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ
ರಸಗೊಬ್ಬರ ಪ್ರಕರಣದಲ್ಲಿ, ಇಡಿ ಸರಾಫ್ ಇಂಪೆಕ್ಸ್ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದೆ. ಅಗ್ರಸೇನ್ ಗೆಹ್ಲೋಟ್ ಒಡೆತನದ ಸಂಸ್ಥೆಯಾದ ಅನುಪಮ್ ಕೃಷಿ, ಸರಾಫ್ ಇಂಪೆಕ್ಸ್ ಮೂಲಕ 2007 ರಿಂದ 2009 ರ ಅವಧಿಯಲ್ಲಿ ಭಾರತೀಯ ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದ್ದ ಪೊಟ್ಯಾಷ್ ಅನ್ನು ವಿದೇಶಗಳಿಗೆ ರಫ್ತು ಮಾಡಿದೆ. ರಫ್ತು ಮಾಡಿದ ರಸಗೊಬ್ಬರವು ರಾಜಸ್ಥಾನದ ರೈತರಿಗೆ ಮೀಸಲಾಗಿತ್ತು ಎಂದು ಇಡಿ ಆರೋಪಿಸಿದೆ.
ಇದಕ್ಕೂ ಮೊದಲು 2020 ರಲ್ಲಿ ಜಾರಿ ನಿರ್ದೇಶನಾಲಯ ಅಗ್ರಸೇನ್ ಗೆಹ್ಲೋಟ್ ಅವರ ಆಸ್ತಿ ಮೇಲೆ ದಾಳಿಗಳನ್ನು ನಡೆಸಿತ್ತು. ಜೋಧ್ಪುರದಲ್ಲಿರುವ ಅಗ್ರಸೇನ್ ಗೆಹ್ಲೋಟ್ ಅವರ ನಿವಾಸ ಮತ್ತು ರಾಜಸ್ಥಾನದ ಇತರ ಸ್ಥಳಗಳಲ್ಲಿ ಸಿಬಿಐ ದಾಳಿಗಳು ಇನ್ನೂ ನಡೆಯುತ್ತಿವೆ.
ಈ ದಾಳಿಗಳು ದ್ವೇಷದ ರಾಜಕಾರಣ ಎಂದಿರುವ ಕಾಂಗ್ರೆಸ್ “ಇದು ಎಲ್ಲ ಮಿತಿಗಳನ್ನು ಮೀರಿದ ಸೇಡಿನ ರಾಜಕಾರಣ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅಶೋಕ್ ಗೆಹ್ಲೋಟ್ ಮುಂಚೂಣಿಯಲ್ಲಿದ್ದರು. ಇದು ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರತಿಕ್ರಿಯೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.
This is vendetta politics beyond all bounds. @ashokgehlot51 was at the forefront of the protests in Delhi over the past three days, and this is Modi Govt’s brazen response! We will not be silenced! pic.twitter.com/Wbzo9lnAp0
— Jairam Ramesh (@Jairam_Ramesh) June 17, 2022
ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ