Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...