Homeಕರ್ನಾಟಕಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

ಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ಸರ್ಕಾರ ನಡೆಸಿರುವ ‘ಪಠ್ಯಪುಸ್ತಕ ಹಗರಣ’ವನ್ನು ವಿರೋಧಿಸಿ ಜೂನ್‌ 18ರ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಪ್ರತಿಭಟನಾ ರ್‍ಯಾಲಿಯ ಮುನ್ನವಾಗಿ ‘#ನಾಡದ್ರೋಹಿBJPಸರ್ಕಾರ’, ‘#BoycottRSStextbooks’ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿವೆ.

ಈ ಹ್ಯಾಷ್‌ಟ್ಯಾಗ್‌ನಲ್ಲಿ ಸಾವಿರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಒಂದು ವೇಳೆ ಸರ್ಕಾರ ಕೂಡಲೇ ಪರಿಷ್ಕೃತ ಪಠ್ಯಗಳನ್ನು ಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರುಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ. ಇದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

“ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ” ಎಂದಿದ್ದಾರೆ.

 

“ನಾಡ ದ್ರೋಹಿ ಕಪಟಿಗಳ ವಿರುದ್ಧ ನಡೆಯಲಿರುವ ನಾಳಿನ ಹೋರಾಟ ಪಕ್ಷಾತೀತವಾದದ್ದು. ಸರ್ವ ಜಾತಿ ಜನಾಂಗಗಳ ಹೋರಾಟ. ಬನ್ನಿ ಕೈ ಜೋಡಿಸಿ. ನಾಡ ರಕ್ಷಣೆಗೆ ಮುಂದಾಗಿ” ಎಂದು ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್ ಮನವಿ ಮಾಡಿದ್ದಾರೆ.

“ಬಸವಣ್ಣ ಅವರ ಬಗ್ಗೆ ಪರಿಷ್ಕೃತ ಪಠ್ಯದಲ್ಲಿ ಬರೆದಿರುವ ಮಾಹಿತಿ ತಪ್ಪು ಗ್ರಹಿಕೆಯಿಂದ ಕೂಡಿವೆ. ಸಂಸ್ಕೃತ ತೊರೆದು ಕನ್ನಡದ ಮೂಲಕ ದೇವರನ್ನು ಪೂಜಿಸುವ ಬಗೆ ತೋರಿದ್ದು ಬಸವಣ್ಣ. ವೀರಶೈವ ಮತ ಅಭಿವೃದ್ದಿ ಪಡಿಸಲಿಲ್ಲ ಬದಲಾಗಿ ವೈದಿಕ ಧರ್ಮಕ್ಕೆ ವಿರುದ್ಧವಾಗಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದರು” ಎಂದು ಹಿರಿಯ ಪತ್ರಕರ್ತ ಬಸವರಾಜು ತಿಳಿಸಿದ್ದಾರೆ.

“ಬಿಟ್ಟಿ ಉಪದೇಶ ಹೇಳುವುದು, ಹಿಂದೂ ನಾವೆಲ್ಲ ಒಂದು. 10 ಜನ ಪಠ್ಯಪುಸ್ತಕ ಸಮಿತಿ ಸದಸ್ಯರಲ್ಲಿ 9 ಜನ ಬ್ರಾಹ್ಮಣರು. ಬೇರೆ ಜಾತಿಯಲ್ಲಿ ಶಿಕ್ಷಣ ತಜ್ಞರು ಇಲ್ಲವೇ!? ಬೇರೆ ಜಾತಿಯವರೆಲ್ಲಾ ದಡ್ಡರೂ ಅನ್ನುವ ಭಾವನೆ ಬಿಜೆಪಿಗರದ್ದೇ!?” ಎಂದು ‘ಬೆಳಗಾವಿ ರಾಯಣ್ಣ’ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

“ಟಿಪ್ಪು ಚರಿತ್ರೆ ತಿರುಚಿದ್ರು, ಸಂತ ಶರೀಫರನ್ನು ಆಚೆ ಇಟ್ರು, ಆಗ ಇದು ಸಾಬರ ವಿಷಯ ಅಂತ ಸುಮ್ನಾದ್ರು. ಈಗ ನಾರಾಯಣ ಗುರುಗಳ ವಿಷಯ ಬಂದಾಗ ಒಕ್ಕಲಿಗರು ಸುಮ್ನಾದ್ರೆ ನಾಳೆ ಕೆಂಪೇಗೌಡ ಬೆಂಗಳೂರು ಕಟ್ಟೆ ಇಲ್ಲ ಅಂತಾರೆ” ಎಂದು ಕನ್ನಡ ಕುಡಿ ಟ್ವಿಟರ್‌ ಖಾತೆ ಅಭಿಪ್ರಾಯಪಟ್ಟಿದೆ.

“ಸಾವಿತ್ರಿಬಾಯಿಫುಲೆ ಸೇರಿ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ಕೈಬಿಟ್ಟ ಮಹಿಳಾ ವಿರೋಧಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜೆ.ಎಸ್.ಪಾಟೀಲ್ ಟ್ವೀಟ್ ಮಾಡಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ಉಮ್ಮರ್‌ ಬ್ಯಾರಿ ಸಾಲೆತ್ತೂರು ಹೇಳಿದ್ದಾರೆ.

“ತ್ಯಾಗ ಬಲಿದಾನಗಳಿಂದ ಕಟ್ಟಿದ ಈ ದೇಶವನ್ನು ಕೋಮುವಾದದಿಂದ ಉಳಿಸೋಣ..ನಾಳೆ ಜತೆಯಾಗಿ ನಡೆಯೋಣ.ನಮ್ಮ‌ವಿರೋಧವನ್ನು ದಾಖಲಿಸೋಣ” ಎಂದು ಗುಲಾಬಿ ಬಿಳಿಮಲೆಯವರು ತಿಳಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್ ಕುರಿತ ಮಾಹಿತಿ ಕೈಬಿಟ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಮಧು ಕರೆಡೇವು ಕರವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥ ಕನ್ನಡ ದ್ರೋಹಿಯನ್ನು ಪೋಷಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಮತ್ತೆ ಬರದಿರಲಿ” ಎಂದು ಮನು ಟ್ವೀಟ್ ಎಚ್ಚರಿಸಿದ್ದಾರೆ.

“ಬುದ್ದ, ಕುವೆಂಪು, ಬಸವಣ್ಣ, ಅಂಬೇಡ್ಕರ್, ಕನ್ನಡ ನಾಡು, ನುಡಿ, ಬಾವುಟ, ಪ್ರಾದೇಶಿಕತೆಯ ಬಗ್ಗೆ ಕೀಳಾಗಿ ಮಾತನಾಡಿದ ಚಕ್ರತಿರ್ಥನ ಬಂಧನವಾಗಲಿ” ಎಂದು ದಿನೇಶ್ ದೊಡ್ಡಮನೆ ಆಗ್ರಹಿಸಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ‘ಕೋಮುವಾದಿಗಳ ವಿರುದ್ಧ’ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಳ್ಳ ದೋಚಿಕೊಂಡು ಹೋದ ಮ್ಯಾಲೆ ದಿಡ್ಡಿ ಬಾಗಿಲು ಹಾಕಿದರಂತೆ . ಹಂಗಾಯ್ತು ಇವರ ಬಾಳು…. ಪರಿಷ್ಕ್ರುತ ಪಠ್ಯಪುಸ್ತಕ ಈಗಾಗಲೇ ಮಕ್ಕಳ ಕೈ ಸೇರಿ ಆಗಿದೆ… ಭಾಜಪದವರು ಒಳಗೊಳಗೆ ಎಲ್ಲಾ ಶಾಲೆಗಳಿಗೆ ಕಳುಹಿಸಿಕೊಟ್ಟಿದ್ದಾರೆ… ಇವರು ಇವತ್ತು ಒಂದು ದಿನ ಹೋರಾಟ ಮಾಡಿ ಸುಮ್ಮನಾಗ್ತಾರೆ. ಎಲ್ಲಾರೂ ಒಂದೇ ಬಿಡಿ. ನಾ ಹೊಡದಂಗ ಮಾಡ್ತೀನಿ… ನೀ ಅತ್ತಂಗ ಮಾಡು ಹಾಗಯ್ತು ಇವರ ಬಾಳು

  2. You are all opposing the revision of text book because the members of the committe are Brahmin. So your purpose is to oppose what ever Brahmins are doing. If you are really concerned then you must show before and after corrections and tell governament to reconsider it next year.
    Nanu gauri as a responsible media must be fair to all caste and community.

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...